Sand; ಕೇಂದ್ರದಿಂದ ಸಿಗದ ಅನುಮೋದನೆ ಕೈಗೆ ಸಿಗದ ಸಿಆರ್‌ಝಡ್‌ ಮರಳು


Team Udayavani, Aug 30, 2024, 1:20 PM IST

Sand; ಕೇಂದ್ರದಿಂದ ಸಿಗದ ಅನುಮೋದನೆ ಕೈಗೆ ಸಿಗದ ಸಿಆರ್‌ಝಡ್‌ ಮರಳು

ಮಂಗಳೂರು: ಮೂರು ವರ್ಷಗಳಿಂದ ಸಿಆರ್‌ಝಡ್‌ ವಲಯದ ಮರಳುಗಾರಿಕೆ ಬಗೆ ಗಿನ ಗೊಂದಲ ಬಗೆಹರಿಯದ ಕಾರಣ ಕರಾವಳಿ ಯಾದ್ಯಂತ ಅಧಿಕೃತ ಮರಳು ಪೂರೈಕೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದರೆ ಸಿಆರ್‌ಝಡ್‌ ಪ್ರದೇಶದಲ್ಲಿ ಕಾನೂನು ಬಾಹಿರ ಮರಳು ಗಾರಿಕೆ ನಿರಾತಂಕವಾಗಿ ನಡೆಯುತ್ತಿದೆ!

ಸಾಮಾನ್ಯವಾಗಿ ಜೂನ್‌-ಜುಲೈ ತಿಂಗಳಿನಲ್ಲಿ ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆಗೆ ನಿಷೇಧ ಇರುತ್ತದೆ. ಬಳಿಕ ನದಿಗಳಲ್ಲಿ ಮರಳಿನ ಸಂಗ್ರಹದ ಅಧ್ಯಯನ ನಡೆಸಿ, ವರದಿಯೊಂದಿಗೆ ಕರ್ನಾಟಕ ರಾಜ್ಯ ಕರಾವಳಿ ನಿರ್ವಹಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗುತ್ತದೆ. ಅನಂತರ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಅನುಮತಿ ನೀಡಲಾಗುತ್ತದೆ.

ಈ ಬಾರಿ ಸಮೀಕ್ಷೆ ನಡೆಸಿ, ವರದಿ ಸಹಿತ ರಾಜ್ಯ ಪ್ರಾಧಿಕಾರಕ್ಕೆ ಪ್ರಸ್ತಾವನೆ ಹೋಗಿ ಏಳು ತಿಂಗಳುಗಳು ಕಳೆದಿವೆ. ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಬ್ಬಗಳಿಂದ ಮರಳು ತೆಗೆಯುವ ಕುರಿತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಿಂದ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಕ್ತ ನಿರ್ದೇಶನಗಳನ್ನು ಕೋರಿತ್ತು.

ಈ ಬಗ್ಗೆ ಸರಕಾರದ ಅರಣ್ಯ, ಪರಿಸರ ಇಲಾಖಾ ಕಾರ್ಯದರ್ಶಿಗಳು ಉತ್ತರಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವ ಪ್ರಸ್ತಾವನೆಗೆ ಸಂಬಂಧಿಸಿ ಕೇಂದ್ರ ಸರ ಕಾರ ದಿಂದ ಹೊರಡಿಸುವ ಆದೇಶವನ್ನು ನಿರೀಕ್ಷಿಸುವಂತೆ ತಿಳಿಸಿತ್ತು.

ಅಕ್ರಮ ಮರಳು ಕಾರುಭಾರು ನಿರಾತಂಕ
ಸದ್ಯ ಉಭಯ ಜಿಲ್ಲೆಗಳಲ್ಲಿ ಮರಳು ಬೇಕಾದವರಿಗೆ ರಾತೋರಾತ್ರಿ ಸಿಆರ್‌ಝಡ್‌ ಪ್ರದೇಶದ ನಯವಾದ ಉತ್ತಮ ದರ್ಜೆ ಮರಳನ್ನು ಪೂರೈಸುವ ಜಾಲವೇ ಇದೆ. ಇದು ಒಂದು ಲೋಡ್‌ಗೆ 5ರಿಂದ 6,000 ರೂ.ಗೆ ಸಿಗುತ್ತದೆ. ಅಧಿಕಾರಿಗಳು ಇದನ್ನು ನಿಯಂತ್ರಿಸುವ ಗೋಜಿಗೂ ಹೋಗುತ್ತಿಲ್ಲ.

ಕೇಂದ್ರದಿಂದ ಮಾಹಿತಿ ಇಲ್ಲ
ಕೇಂದ್ರ ಸರಕಾರದ ಪರಿಸರ, ಸಿಆರ್‌ಝಡ್‌, ಕೈಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಕಾರ್ಯದರ್ಶಿಗಳು ಸಭೆ ನಡೆಸಿ ಈ ಕುರಿತ ಅಂತಿಮ ನಿರ್ಣಯ ಕೈಗೊಳ್ಳಬೇಕಾಗಿದ್ದು, ಇದಕ್ಕೆ ರಾಜ್ಯ ಸರಕಾರ ಒತ್ತಡ ಹಾಕಬೇಕಾಗುತ್ತದೆ. ಆದರೆ ಹಿಂದೆಲ್ಲ ಆಗಸ್ಟ್‌ ತಿಂಗಳಿನಲ್ಲಿ ನಡೆಯುತ್ತಿದ್ದ ಸಭೆ ಈ ಬಾರಿ ನಡೆದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಸುಮಾರು 16 ಬ್ಲಾಕ್‌ ಗುರುತಿಸಲಾಗಿತ್ತಾದರೂ ಸದ್ಯ ಮಳೆ ಇರುವ ಕಾರಣ ಮರಳು ತೆಗೆಯುವುದು ಸಾಧ್ಯವಾಗುತ್ತಿಲ್ಲ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.