Renukaswamy Case: ಇಂದು (ಆ.30) ವಿಜಯಪುರ ದರ್ಗಾ ಜೈಲಿಗೆ ದರ್ಶನ್ ಸಹಚರ ವಿನಯ್
Team Udayavani, Aug 30, 2024, 8:49 AM IST
ವಿಜಯಪುರ: ರೇಣುಕಾಸ್ವಾಮಿ ಹತ್ಯೆ ಆರೋಪಿ ವಿನಯ್ ಎಂಬಾತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ (ಇಂದು) ಆ.30ರ ಶುಕ್ರವಾರ ವಿಜಯಪುರದ ದರ್ಗಾ ಜೈಲಿಗೆ ಸ್ಥಳಾಂತರ ಮಾಡುವ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಹತ್ಯಾ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೀವನ ವರ್ತನೆಯ ಫೋಟೋ, ವಿಡಿಯೋ ಕರೆಗಳ ಚಿತ್ರಗಳು ಹೊರ ಬೀಳುತ್ತಲೇ ದರ್ಶನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ.
ಈ ಹಿನ್ನೆಲೆ ಆ.29ರ ಗುರುವಾರ ವಿನಯ್ ವಿಜಯಪುರ ಜೈಲಿಗೆ ಸ್ಥಳಾಂತರ ಮಾಡುವ ಮಾಹಿತಿ ಲಭ್ಯವಾಗಿದ್ದರೂ ದರ್ಗಾ ಜೈಲು ಅಧಿಕಾರಿಗಳಿಗೆ ಅಧಿಕೃತವಾಗಿ ಯಾವುದೇ ಮಾಹಿತಿಯೂ ಇರಲಿಲ್ಲ, ವಿನಯ ಹಸ್ತಾಂತರವೂ ಆಗಿರಲಿಲ್ಲ.
ಆದರೆ ಆ.30ರ ಶುಕ್ರವಾರ ದರ್ಗಾ ಜೈಲಿಗೆ ವಿನಯನನ್ನು ಸ್ಥಳಾಂತರ ಮಾಡುವ ಕುರಿತು ವಿಜಯಪುರ ಜೈಲು ಅಧೀಕ್ಷಕತಿಗೆ ಮಾಹಿತಿ ನೀಡಲಾಗಿದೆ.
ಈ ಹತ್ಯಾ ಪ್ರಕರಣದ 10ನೇ ಆರೋಪಿಯಾಗಿರುವ ವಿನಯ್ ಬೆಂಗಳೂರಿನಿಂದ ವಿಜಯಪುರ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಕಾನೂನು ಶಿಷ್ಟಾಚಾರದ ಪ್ರಕ್ರಿಯೆ ಮುಗಿಯದ ಕಾರಣ 2 ದಿನಗಳಿಂದ ಮಾಧ್ಯಮ ಪ್ರತಿನಿಧಿಗಳು ಜೈಲು ಎದುರು ಸುದ್ದಿಗಾಗಿ ಕಾಯುವಂತಾಗಿದೆ.
ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ರಸ್ತೆ ಮಾರ್ಗವಾಗಿ ವಿನಯ್ ನನ್ನು ದರ್ಗಾ ಜೈಲಿಗೆ ಕರೆತರಲಾಗುತ್ತಿದೆ. ಆರೋಪಿ ತಮ್ಮ ಜೈಲಿಗೆ ಬರುತ್ತಲೇ ಆತನನ್ನು ಯಾವ ಬ್ಯಾರಕ್ ಅಥವಾ ಸೆಲ್ ನಲ್ಲಿ ಇರಿಸಬೇಕೆಂದು ನಿರ್ಧರಿಸಲಾಗುತ್ತದೆ. ಇತರೆ ಆರೋಪಿಗಳಂತೆ ಆತನನ್ನೂ ನೋಡಿಕೊಳ್ಳುವ ಸಹಜ ಪ್ರಕ್ರಿಯೆ ನಡೆಯಲಿದೆ ಎಂದು ಜೈಲು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.