Bengaluru: ಟಿಪ್ಪರ್ ಲಾರಿ ಹರಿದು ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ
ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸಾವು
Team Udayavani, Aug 30, 2024, 10:45 AM IST
ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈಗ್ರೌಂಡ್ಸ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಒಡಿಶಾ ಮೂಲದ ಗೋಪಾಲ್ ದಲೈ (40) ಮೃತ ಸೈಕಲ್ ಸವಾರ. ಈ ಸಂಬಂಧ ಕೃತ್ಯ ಎಸಗಿದ ಟಿಪ್ಪರ್ ಲಾರಿ ಚಾಲಕ ಮಂಜೇ ಗೌಡ(38) ಎಂಬಾತನನ್ನು ಬಂಧಿಸಲಾಗಿದೆ.
ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿರುವ ಗೋಪಾಲ್, ಗಾಂಧಿ ನಗರದಲ್ಲಿರುವ ಹೋಟೆಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ಬುಧವಾರ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಬೆಳಗ್ಗೆ 7.45ರ ಸುಮಾರಿಗೆ ಸೈಕಲ್ನಲ್ಲಿ ಮತ್ತೂಂದು ಕಂಪನಿಯಲ್ಲಿ ಬೆಳಗ್ಗಿನ ಪಾಳಿ ಕೆಲಸಕ್ಕೆ ಚಾಲುಕ್ಯ ವೃತ್ತ ಮಾರ್ಗವಾಗಿ ಹೋಗುತ್ತಿದ್ದರು.
ಇದೇ ವೇಳೆ ಟಿಪ್ಪರ್ ಲಾರಿ ಚಾಲಕ ಟ್ರಿಲೈಟ್ ಜಂಕ್ಷನ್ ಕಡೆಯಿಂದ ಬಸವೇಶ್ವರ ಜಂಕ್ಷನ್ ಕಡೆ ಅತೀ ವೇಗವಾಗಿ ಬಂದು ಫೇರ್ ಫೀಲ್ಡ್ ಲೇಔಟ್ ಜಂಕ್ಷನ್ ಹತ್ತಿರ ಗೋಪಾಲ್ ಸೈಕಲ್ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಗೋಪಾಲ್ ಮೇಲೆ ಲಾರಿಯ ಚಕ್ರಗಳು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಂಚಾರ ಠಾಣೆ ಪೊಲೀಸರು ಹೇಳಿದರು.
ಘಟನೆ ಸಂಬಂಧ ಹೈಗ್ರೌಂಡ್ಸ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.