Belagavi; ಬಿಜೆಪಿ ದಲಿತನನ್ನು ಉಪಯೋಗಿಸಿ ದಲಿತರಿಗೆ ಅಪಮಾನ ಮಾಡುತ್ತಿದೆ: ಎಂ.ಬಿ.ಪಾಟೀಲ್
Team Udayavani, Aug 30, 2024, 3:35 PM IST
ಬೆಳಗಾವಿ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಅವರನ್ನು ಬಲಿಪಶು ಮಾಡಲು ಬಿಜೆಪಿಯವರು ದಲಿತರಿಗೆ ಅಪಮಾನ ಎಂಬ ಆಸ್ತ್ರ ಬಿಟ್ಟಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರಿಗೆ ಅಪಮಾನ ಮಾಡುವದು ಬಿಜೆಪಿಯವರ ಸಿದ್ದಾಂತ. ಚಲವಾದಿ ನಾರಾಯಣಸ್ವಾಮಿ ಮೂಲಕ ಒಬ್ಬ ದಲಿತನನ್ನು ಉಪಯೋಗಿಸಿಕೊಂಡು ದಲಿತರಿಗೆ ಅಪಮಾನ ಮಾಡುವ ಕಾಯಕವನ್ನು ಬಿಜೆಪಿ ಮುಂದುವರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದಲಿತರಿಗೆ ಅಪಮಾನ ಎಂಬ ಅಸ್ತ್ರ ಬಿಟ್ಟಿದ್ದಾರೆ ಎಂದು ಟೀಕೆ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಖರ್ಗೆ ದಲಿತರಲ್ಲವೇ ಎಂದು ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದ ಎಂ.ಬಿ.ಪಾಟೀಲ್, ಈ ಹಿಂದೆ ಇದೇ ರೀತಿ ಯಡಿಯೂರಪ್ಪ ಅವರು ಲಿಂಗಾಯತರ ವಿರುದ್ಧ ಲಿಂಗಾಯತರನ್ನು ಎತ್ತಿಕಟ್ಟಿದ್ದರು ಎಂದು ನೇರ ಅರೋಪ ಮಾಡಿದರು.
ಬಿಜೆಪಿ ಹಾಗೂ ಆರ್ ಎಸ್ಎಸ್ ನವರಿಗೆ ಒಡೆದು ಅಳುವದೇ ಕೆಲಸ. ಈಗ ಅವರ ಒಡೆದು ಆಳುವ ನೀತಿಗೆ ಚಲವಾದಿ ನಾರಾಯಣ ಸ್ವಾಮಿ ಸಿಕ್ಕಿದ್ದಾರೆ. ಮುಂದೆ ಅವರನ್ನು ಸಹ ಬಲಿಪಶು ಮಾಡದೇ ಬಿಡುವದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅವರದೇ ಪಕ್ಷದ ಯಾವ ನಾಯಕರೂ ಒಪ್ಪಿಕೊಂಡಿಲ್ಲ. ಯತ್ನಾಳ, ರಮೇಶ ಜಾರಕಿಹೊಳಿ ಮೊದಲಾದ ನಾಯಕರು ತಮ್ಮ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲ ನೋಡಿದರೆ ವಿಜಯೇಂದ್ರ ಗಾಡಿ ಬಹಳ ದಿನ ಓಡುವುದಿಲ್ಲ ಎನಿಸುತ್ತದೆ ಎಂದು ವ್ಯಂಗವಾಡಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ ಗೆ ಕೆಐಎಡಿ ಬಿಸಿಎ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ಅಕ್ರಮವಾಗಿಲ್ಲ. ಎಲ್ಲವೂ ಕಾನೂನು ಪ್ರಕಾರವೇ ಆಗಿದೆ. ರಾಹುಲ್ ಖರ್ಗೆ ಅವರು ಮೆರಿಟ್ ಆಧಾರದ ಮೇಲೆಯೇ ಈ ನಿವೇಶನ ಪಡೆದುಕೊಂಡಿದ್ದಾರೆ. ಆದರೆ ಸಿಎ ನಿವೇಶನ ಹಂಚಿಕೆ ಬಗ್ಗೆ ತಿಳುವಳಿಕೆ ಇಲ್ಲದ ಚಲವಾದಿ ನಾರಾಯಣ ಸ್ವಾಮಿ, ಲೆಹರಸಿಂಗ್ ಮೊದಲಾದ ನಾಯಕರು ಸುಳ್ಳು ದಾಖಲೆಗಳನ್ನು ನೀಡಿ ಖರ್ಗೆ ಕುಟುಂಬದ ವಿರುದ್ಧ ನಿರಾಧಾರ ಆರೋಪ ಮಾಡಿದ್ದಲ್ಲದೆ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.