ಭಯೋತ್ಪಾದನೆ-ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ: PAKಗೆ ಜೈಶಂಕರ್ ಕಟು ಸಂದೇಶ
ಭಯೋತ್ಪಾದನೆ ವಿಚಾರದಲ್ಲಿ ನಾವು ಯಾವ ರಾಜಿಗೂ ಸಿದ್ಧವಿಲ್ಲ
Team Udayavani, Aug 30, 2024, 3:22 PM IST
ನವದೆಹಲಿ: ಪಾಕಿಸ್ತಾನದ ಕುರಿತ ಭಾರತದ ನಿಲುವು ಏನು ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಶುಕ್ರವಾರ (ಆ.30) ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಪಾಕ್ ಜತೆಗಿನ ಅನಿರ್ಬಂಧಿತ ಮಾತುಕತೆಯ ಕಾಲಘಟ್ಟ ಮುಗಿದುಹೋದ ಅಧ್ಯಾಯ ಎಂದು ತಿಳಿಸಿದ್ದಾರೆ.
ತೆಗೆದುಕೊಳ್ಳುವ ನಿರ್ಧಾರಗಳು ಪರಿಣಾಮಕಾರಿಯಾಗಿರಬೇಕು. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕುರಿತು ಭಾರತಕ್ಕೆ ಮಾಹಿತಿ ಇದೆ. ಹೀಗಾಗಿ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದು ಜೈಶಂಕರ್ ಪಾಕ್ ಗೆ ತಿರುಗೇಟು ನೀಡಿದ್ದಾರೆ.
ಪಾಕಿಸ್ತಾನ ಜತೆಗಿನ ಅನಿರ್ಬಂಧಿತ ಮಾತುಕತೆಯ ಕಾಲ ಮುಗಿದುಹೋಗಿದೆ ಎಂದು ಎಸ್.ಜೈಶಂಕರ್ ಶುಕ್ರವಾರ ದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈವರೆಗೆ ಜಮ್ಮು-ಕಾಶ್ಮೀರದ ಬಗ್ಗೆ ಇದ್ದ ಕಳವಳಕ್ಕೆ ಪರಿಹಾರ ನೀಡಲು ಆರ್ಟಿಕಲ್ 370 ಅನ್ನು ರದ್ದುಪಡಿಸಲಾಗಿದೆ. ಆದರೆ ಭಯೋತ್ಪಾದನೆ ಚಟುವಟಿಕೆ, ಸೈನಿಕರ ಮೇಲಿನ ದಾಳಿ ಮುಂದುವರಿದಿದೆ. ಹೀಗಾಗಿ ಪಾಕಿಸ್ತಾನದ ಜತೆ ನಾವು ಯಾವ ರೀತಿಯ ಸಂಬಂಧ ಹೊಂದಿರಬೇಕೆಂಬ ಬಗ್ಗೆ ಆಲೋಚಿಸಬೇಕಾಗಿದೆ ಎಂದ ಸಚಿವ ಜೈಶಂಕರ್, ಭಯೋತ್ಪಾದನೆ ವಿಚಾರದಲ್ಲಿ ನಾವು ಯಾವ ರಾಜಿಗೂ ಸಿದ್ಧವಿಲ್ಲ ಎಂದು ಹೇಳಿದರು.
ಗಡಿ ನುಸುಳುವಿಕೆ ಭಯೋತ್ಪಾದನೆ ತಂತ್ರಗಾರಿಕೆ ಮೂಲಕ ಭಾರತವನ್ನು ಮಾತುಕತೆಗೆ ಆಹ್ವಾನಿಸುವ ಉದ್ದೇಶ ಪಾಕಿಸ್ತಾನದ್ದಾಗಿದೆ. ಆದರೆ ಇಂತಹ ವಿಚಾರಗಳು ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂಬುದನ್ನು ಭಾರತ ಸ್ಪಷ್ಟಪಡಿಸಿದ್ದು, ಭಯೋತ್ಪಾದನೆ ಮತ್ತು ಮಾತುಕತೆ ಜತೆ, ಜತೆಗೆ ಹೋಗಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನವು ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಶಾಂಘೈ ಕೋ ಆಪರೇಶನ್ ಆರ್ಗನೈಸೇಶನ್ ಸಭೆಗೆ ಅಧಿಕೃತವಾಗಿ ಆಹ್ವಾನಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜೈಶಂಕರ್ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.