Maharashtra: ಶಿವಾಜಿ ಮಹಾರಾಜರ ಪಾದಕ್ಕೆ ಶಿರಬಾಗಿ ಎಲ್ಲರ ಕ್ಷಮೆಯಾಚಿಸುವೆ: ಪ್ರಧಾನಿ ಮೋದಿ
ಆರಾಧ್ಯ ಪುರುಷನಿಗಿಂತ ಮಿಗಿಲಾದದ್ದು ಬೇರೇನೂ ಇಲ್ಲ
Team Udayavani, Aug 30, 2024, 4:07 PM IST
ಮಹಾರಾಷ್ಟ್ರ: ಮುಂಬೈನ ರಾಜ್ ಕೋಟ್ ನಲ್ಲಿ ನಿರ್ಮಾಣ ಮಾಡಿದ್ದ ದಂತಕಥೆ ಆಡಳಿತಗಾರ, ಛತ್ರಪತಿ ಶಿವಾಜಿಯ ಪ್ರತಿಮೆ ಕುಸಿದು ಬಿದ್ದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು (ಆ.30ಶುಕ್ರವಾರ) ತಾನು, ಛತ್ರಪತಿ ಶಿವಾಜಿಯ ಪಾದಕ್ಕೆ ತಲೆಬಾಗಿಸಿ, ಎಲ್ಲರ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.
ಶಿವಾಜಿ ಪ್ರತಿಮೆ ಕುಸಿದು ಬಿದ್ದಿರುವುದಕ್ಕೆ ನಾನು ಮೊದಲು ಎಲ್ಲರ ಕ್ಷಮೆಯಾಚಿಸುವುದಾಗಿ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ತಿಳಿಸಿದರು. ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವ ಎಂದು ಪರಿಗಣಿಸಿದವರಿಗೆ ತುಂಬಾ ನೋವಾಗಿದೆ. ಈ ಸಂದರ್ಭದಲ್ಲಿ ನಾನು ನನ್ನ ತಲೆಬಾಗಿಸಿ, ನಿಮ್ಮ ಬಳಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ನಮ್ಮ ಮೌಲ್ಯಗಳು ಭಿನ್ನವಾಗಿರಬಹುದು. ಆದರೆ ನಮಗೆ ನಮ್ಮ ಆರಾಧ್ಯ ಪುರುಷನಿಗಿಂತ ಮಿಗಿಲಾದದ್ದು ಬೇರೇನೂ ಇಲ್ಲ ಎಂದು ಪ್ರಧಾನಿ ತಿಳಿಸಿದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ನೌಕಾ ದಿನಾಚರಣೆ ಸಂಭ್ರಮದಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದರು. ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಗೌರವಾರ್ಥವಾಗಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಆದರೆ ಈ ಪ್ರತಿಮೆ ಇತ್ತೀಚೆಗೆ ಕುಸಿದು ಬಿದ್ದು ಹೋಗಿತ್ತು, ವಿಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.