Kunthur ಶಾಲೆ:ಕೆಲವೇ ವರ್ಷದಲ್ಲಿ ಬಿರುಕುಬಿಟ್ಟ ಗೋಡೆ;ನಿರುಪಯುಕ್ತವಾದ ಮುಖ್ಯಶಿಕ್ಷಕರ ಕೊಠಡಿ


Team Udayavani, Aug 30, 2024, 4:33 PM IST

Kunthur ಶಾಲೆ:ಕೆಲವೇ ವರ್ಷದಲ್ಲಿ ಬಿರುಕುಬಿಟ್ಟ ಗೋಡೆ;ನಿರುಪಯುಕ್ತವಾದ ಮುಖ್ಯಶಿಕ್ಷಕರ ಕೊಠಡಿ

ಕಡಬ: ಕುಂತೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಗೆ ಸರ್ವಶಿಕ್ಷಣ ಅಭಿಯಾನದಡಿ 2011-12ನೇ ಸಾಲಿನಲ್ಲಿ 4.46 ಲಕ್ಷ ರೂ.ಸರಕಾರದ ಅನುದಾನ ಹಾಗೂ ದಾನಿಯೊಬ್ಬರ 75 ಸಾವಿರ ರೂ. ದೇಣಿಗೆ ಸೇರಿ ಮುಖ್ಯಶಿಕ್ಷಕರ ಕೊಠಡಿ ನಿರ್ಮಾಣಗೊಂಡಿತ್ತು. ಆದರೆ ಆ ಕಟ್ಟಡದ ಗೋಡೆ ಕೆಲವೇ ವರ್ಷದಲ್ಲಿ ಬಿರುಕು ಬಿಟ್ಟು ನಿರುಪಯುಕ್ತವಾಗಿದೆ.

ದುರಸ್ತಿ ಕಾಮಗಾರಿಯ ವೇಳೆ ಕುಸಿದಿರುವ ಶಾಲೆಯ ಹಳೆಯ ಕಟ್ಟಡ ವನ್ನು ತೆರವುಗೊಳಿಸುವ ಸಂದರ್ಭ ನಿರುಪ ಯುಕ್ತಗೊಂಡಿರುವ ಈ ಕಟ್ಟಡವನ್ನೂ ತೆರವುಗೊಳಿಸಲು ತೀರ್ಮಾನಿಸಲಾಗಿದೆ. 50 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಹೆಂಚಿನ ಕಟ್ಟಡದ ಜತೆ ಕೆಲವೇ ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಕಾಂಕ್ರೀಟ್‌ ಕಟ್ಟಡವನ್ನೂ ತೆರವುಗೊಳಿಸಬೇಕಾಗಿ ಬಂದಿರುವುದು ವಿಪರ್ಯಾಸ.

ಕಾಂಕ್ರಿಟ್‌ ಕಟ್ಟಡವೊಂದು ಐದೇ ವರ್ಷದಲ್ಲಿ ನಿರುಪಯುಕ್ತವಾಗಿ ಬಾಗಿಲು ಮುಚ್ಚಿಕೊಂಡಿರುವುದಕ್ಕೆ ಯಾರು ಹೊಣೆ ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಅದಕ್ಕೆ ಅಧಿಕಾರಿಗಳು, ಗುತ್ತಿಗೆದಾರರು ಉತ್ತರಿಸಬೇಕಾಗಿದೆ.

ಬುಧವಾರ ಶಾಸಕರ ಭೇಟಿಯ ಸಂದರ್ಭದಲ್ಲಿ ಈ ವಿಚಾರವನ್ನೂ ಪ್ರಸ್ತಾಪಿಸಿದ ಸ್ಥಳೀಯರು ಕಳಪೆ ಕಾಮಗಾರಿಗೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಆಗದ ಬದಲಿ ವ್ಯವಸ್ಥೆ
ಶಾಲೆಯ 7 ತರಗತಿ ಕೊಠಡಿಗಳು ಸುರಕ್ಷಿತವಾಗಿಲ್ಲ. ತರಗತಿ ನಡೆಸಲು ಬದಲಿ ವ್ಯವಸ್ಥೆಯೂ ಇರುವುದಿಲ್ಲ ಎಂದು ಕಳೆದ ಮೇ ತಿಂಗಳಿನಲ್ಲೇ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಜಿಲ್ಲಾ ಪಂಚಾಯತ್‌ಗೆ ವರದಿ ನೀಡಲಾಗಿತ್ತು. ಆದರೂ ಪರ್ಯಾಯ ವ್ಯವಸ್ಥೆ ಮಾಡಲಾಗಿಲ್ಲ ಎಂಬ ಆರೋಪ ಈಗ ಕೇಳಿಬಂದಿದೆ.

2024ರ ಮುಂಗಾರು ಮಳೆ ಪ್ರಾರಂಭ ವಾಗುವ ಮೊದಲು ಅಂಗನವಾಡಿ, ಶಾಲೆ ಹಾಗೂ ಕಾಲೇಜು ಕಟ್ಟಡಗಳ ಸುರಕ್ಷತೆಯ ಬಗ್ಗೆ ದೃಢೀಕರಣವನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದು ಸಲ್ಲಿಸುವಂತೆ ಮೇ 3 ರಂದು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚಿಸಲಾಗಿತ್ತು. ಅದರಂತೆ ಕುಂತೂರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯ ಕಟ್ಟಡಗಳ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸಲಾಗಿತ್ತು. ಆ ಶಾಲೆಯಲ್ಲಿನ 10 ಕೊಠಡಿಗಳ ಪೈಕಿ 3 ಕೊಠಡಿಗಳು ಮಾತ್ರ ಸುರಕ್ಷಿತವಾಗಿವೆ. 7 ಕೊಠಡಿಗಳು ಸುರಕ್ಷಿತ ವಾಗಿಲ್ಲ. ಆ ಕೊಠಡಿಗಳ ಅಡಿಪಾಯ ಮತ್ತು ಗೋಡೆಗಳು ಬಿರುಕು ಬಿಟ್ಟಿವೆ ಎಂದು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ ಪುತ್ತೂರು ಉಪವಿಭಾಗದ ಕಿರಿಯ ಎಂಜಿನಿಯರ್‌, ಪೆರಾಬೆ ಪಿಡಿಒ ಹಾಗೂ ಶಾಲಾ ಮುಖ್ಯಶಿಕ್ಷಕರ ರುಜು ಹಾಕಿ ಶಾಲಾ ಕಟ್ಟಡದ ಸುರಕ್ಷತೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ವರದಿ ನೀಡಿದ್ದರು. ಆಗಲೇ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿತ್ತು ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಶಾಲಾ ತರಗತಿ ಪುನರಾರಂಭ
ಶಾಲಾ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಒಂದು ದಿನದ ರಜೆಯ ಬಳಿಕ ಕುಂತೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಗುರುವಾರ (ಆ.29) ದಿಂದ ಎಂದಿನಂತೆ ತರಗತಿ ಪುನರಾರಂಭಗೊಂಡಿದೆ.

ಆ.27ರಂದು ಮಧ್ಯಾಹ್ನ ಶಾಲೆಯ ಹಳೆಯ ಕಟ್ಟಡದ ಒಂದು ಭಾಗ ಕುಸಿತಗೊಂಡ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.28ರಂದು ಶಾಲೆಗೆ ರಜೆ ನೀಡಲಾಗಿತ್ತು. ಶಿಥಿಲಗೊಂಡಿರುವ ಹಳೆಯ ಕಟ್ಟಡ ಹೊರತುಪಡಿಸಿ ಉಳಿದಂತೆ ನಲಿಕಲಿ ತರಗತಿ ನಡೆಯುತ್ತಿದ್ದ ಕಟ್ಟಡ, ಶಾಲಾ ಶಿಕ್ಷಕರ ಕಚೇರಿಯಿದ್ದ ಕಟ್ಟಡ ಹಾಗೂ ರಂಗಮಂದಿರ ಉಪಯೋಗಿಸಿಕೊಂಡು ತರಗತಿ ನಡೆಸಲಾಗಿದೆ. ಆ.30ರಿಂದ 6,7 ಹಾಗೂ 8ನೇ ತರಗತಿಗಳು ಶಾಲಾ ಪಕ್ಕದಲ್ಲೇ ಇರುವ ಸಫ್ವಾನ್‌ ಎಂಬವರಿಗೆ ಸೇರಿದ ಖಾಸಗಿ ಕಟ್ಟಡದಲ್ಲಿ ನಡೆಯಲಿದ್ದು, ಕಟ್ಟಡದ ಸುತ್ತ ಶಾಲಾ ಪೋಷಕರು ಹಾಗೂ ಸಾರ್ವಜನಿಕರು ಸೇರಿಕೊಂಡು ಆ.29ರಂದು ಸ್ವತ್ಛತೆ ಮಾಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.