Mangaluru: ಹಾಲಿ ಮೇಯರ್‌ ಅವಧಿ ಅಂತ್ಯ; ಹೊಸ ಆಯ್ಕೆಗೆ ಬಾರದ ಮೀಸಲಾತಿ


Team Udayavani, Aug 30, 2024, 5:28 PM IST

Mangaluru: Incumbent mayor’s term ends; Reservation not available for new selection

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ಪ್ರಸಕ್ತ ಆಡಳಿತದ ಕೊನೆಯ ಅವಧಿಯ ಮೇಯರ್‌ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಸರಕಾರದಿಂದ ಇನ್ನೂ ಮೀಸಲಾತಿ ಪ್ರಕಟಗೊಂಡಿಲ್ಲ. ಇದರಿಂದಾಗಿ ಮುಂದಿನ ಮೇಯರ್‌, ಉಪಮೇಯರ್‌ ಆಯ್ಕೆ ವಿಚಾರ ಕಗ್ಗಂಟು ಸೃಷ್ಟಿಸಿದೆ.

ಹಾಲಿ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಮತ್ತು ಉಪಮೇಯರ್‌ ಸುನೀತಾ ಅವರ ಅಧಿಕಾರಾವಧಿ ಸೆ. 8ರಂದು ಪೂರ್ಣಗೊಳ್ಳಲಿದೆ. ಈ ವೇಳೆ ನೂತನ ಮೇಯರ್‌-ಉಪಮೇಯರ್‌ ಆಯ್ಕೆ ನಡೆಯಬೇಕು. ಅದಕ್ಕೂ ಮುನ್ನ ಸರಕಾರದಿಂದ ಮೀಸಲಾತಿ ಪ್ರಕಟಗೊಳ್ಳಬೇಕು. ಬಳಿಕ ಆಯ್ಕೆ ಪ್ರಕ್ರಿಯೆ ನಡೆಯಲು ಸುಮಾರು ಎರಡರಿಂದ ಮೂರು ವಾರಗಳು ಬೇಕು. ನಂತರ ನಡೆಯುವ ಹೊಸ ಮೇಯರ್‌ ಅಧಿಕಾರಾವಧಿ ಫೆ. 28ರ ವರೆಗೆ (6 ತಿಂಗಳು ಮಾತ್ರ) ಮಾತ್ರ ಇರಲಿದೆ.

2019ರ ನವೆಂಬರ್‌ 12ರಂದು ಪಾಲಿಕೆ ಕಳೆದ ಚುನಾವಣೆ ನಡೆದಿತ್ತು. ಪಾಲಿಕೆ ಚುನಾವಣೆ ನಡೆದರೂ, ಮೇಯರ್‌ ʼಮೀಸಲಾತಿ’ ಗೊಂದಲದಿಂದಾಗಿ ಮೇಯರ್‌ ಚುನಾವಣೆ ನಡೆಯಲು 3 ತಿಂಗಳು ತಡವಾಗಿತ್ತು. ಅಲ್ಲಿಯವರೆಗೆ ಆಡಳಿತಾಧಿಕಾರಿ ನೇಮಕವಾಗಿತ್ತು. ಅಂತೂ ಕೊನೆಗೆ 2020ರ ಫೆ. 28ಕ್ಕೆ ಮೇಯರ್‌ ಆಗಿ ದಿವಾಕರ್‌ ಪಾಂಡೇಶ್ವರ ಅಧಿಕಾರ ಸ್ವೀಕರಿಸಿದರು. ಪಾಲಿಕೆಯಲ್ಲಿ ಜನಪ್ರತಿನಿಧಿ ಆಡಳಿತ ಆರಂಭವಾಗುವುದು ಮೊದಲ ಮೇಯರ್‌ ಚುನಾವಣೆ ನಡೆದ ದಿನದಿಂದಾಗಿರುತ್ತದೆ. ಹೀಗಾಗಿ 5 ವರ್ಷಗಳ ಪಾಲಿಕೆ ಆಡಳಿತ ಮುಂದಿನ ವರ್ಷ ಫೆ. 28ಕ್ಕೆ ಕೊನೆಗೊಳ್ಳಲಿದೆ.

ಸರಕಾರಕ್ಕೆ ಪತ್ರ
ಮಂಗಳೂರು ಪಾಲಿಕೆಯ ನೂತನ ಮೇಯರ್‌ ಆಯ್ಕೆ ಸಂಬಂಧಿಸಿ ಇನ್ನೂ ಕೂಡ ಮೀಸಲಾತಿ ಆದೇಶ ಪಾಲಿಕೆಗೆ ಬಂದಿಲ್ಲ. ಮೀಸಲಾತಿ ಕಲ್ಪಿಸುವಂತೆ ಈಗಾಗಲೇ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸರಕಾರದ ಸೂಚನೆಯ ಪ್ರಕಾರ ನಿರ್ಧರಿಸಲಾಗುವುದು.

-ಆನಂದ್‌ ಸಿ.ಎಲ್‌.,ಆಯುಕ್ತರು, ಮನಪಾ

ಬಿಜೆಪಿ ಆಡಳಿತದ ಮೊದಲ ಅವಧಿಯಲ್ಲಿ ಹಿಂದುಳಿದ ವರ್ಗ ಎ ಮೀಸಲಾತಿಯ ಪ್ರಕಾರ ದಿವಾಕರ್‌ ಪಾಂಡೇಶ್ವರ ಮೇಯರ್‌ ಆಗಿದ್ದರು. ಅನಂತರ ಮೂರು ಅವಧಿಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಯಾಗಿ ಪ್ರೇಮಾನಂದ ಶೆಟ್ಟಿ, ಜಯಾನಂದ ಅಂಚನ್‌ ಬಳಿಕ ಸುಧೀರ್‌ ಶೆಟ್ಟಿ ಕಣ್ಣೂರು ಮೇಯರ್‌ ಆಗಿ ಆಯ್ಕೆಯಾಗಿದ್ದರು. ಮುಂದಿನ ಮೇಯರ್‌ ಮಹಿಳೆ ಅಥವಾ ಪರಿಶಿಷ್ಟ ಜಾತಿಗೆ ಮೀಸಲಾಗುವ ಸಾಧ್ಯತೆ ಇದೆ ಎಂದು ಚರ್ಚಿಸಲಾಗುತ್ತಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.