Panambur: ಬಾಟಲಿ, ಪೊಟ್ಟಣ ಎಸೆಯಲು ಬೀಚ್‌ನಲ್ಲಿ ಕಿಯೋಸ್ಕ್ ಇಂದು ಉದ್ಘಾಟನೆ

ಪಣಂಬೂರು ಕಡಲತೀರ ಪ್ಲಾಸ್ಟಿಕ್‌ ಮುಕ್ತ

Team Udayavani, Aug 30, 2024, 5:41 PM IST

Panambur: Kiosk inaugurated today on the beach for throwing bottles and packets

ಪಣಂಬೂರು: ಮಂಗಳೂರಿನ ಪಣಂಬೂರು ಬೀಚ್‌ ಪ್ರದೇಶದ ಸ್ವತ್ಛ ಬೀಚ್‌ಗಳಲ್ಲಿ ಒಂದು ಎಂಬ ಖ್ಯಾತಿ ಹೊಂದಿದೆ. ಆದರೂ ಇಲ್ಲಿ ವರ್ಷಕ್ಕೆ ಹಲವಾರು ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಣೆಯಾಗುತ್ತದೆ. ಅಂತಾರಾಷ್ಟ್ರೀಯ ಖ್ಯಾತಿಯ ಬೀಚನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತಗೊಳಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನವೊಂದು ನಡೆದಿದೆ.

ಪ್ರವಾಸಿಗರು ತರುವ ನೀರಿನ ಬಾಟಲಿ, ತಿಂಡಿಯ ಪ್ಲಾಸ್ಟಿಕ್‌ ಪೊಟ್ಟಣಗಳು, ಪ್ಲಾಸ್ಟಿಕ್‌ ಬ್ಯಾಗ್‌ ಮತ್ತಿತರ ವಸ್ತುಗಳನ್ನು ಬೇಕಾಬಿಟ್ಟಿ ಎಸೆಯದೆ ಅದನ್ನು ಸರಿಯಾದ ಜಾಗದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಸಂಗ್ರಹ ಕಿಯೋಸ್ಕ್ ಕೇಂದ್ರವೊಂದನ್ನು ನಿರ್ಮಿಸಲಾಗಿದೆ. ಬೈಕಂಪಾಡಿಯ ಕೆನರಾ ಪ್ಲಾಸ್ಟಿಕ್‌ ಉತ್ಪಾದಕರ ಅಸೋಸಿಯೇಶನ್‌ ಆಂದಾಜು 2.50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟಿದೆ. ಇದರ ಮೇಲ್ವಿಚಾರಣೆಗೆ ಒಬ್ಬ ಸಿಬಂದಿ ನೇಮಕವಾಗಿದೆ.

ಪ್ರವಾಸಿಗರು ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಕಿಯೋಸ್ಕ್ಗೆ ತಂದು ಹಾಕುವಂತೆ ಪ್ರೇರೇಪಿಸುವುದು, ಸಂಗ್ರಹವಾಗುವ ಪ್ಲಾಸ್ಟಿಕ್‌ ವಿಲೇವಾರಿಯ ಬಗ್ಗೆ ಸೂಕ್ತ ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೆಶನದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಬೀಚ್‌ ನಿರ್ವಹಣೆ ಸಮಿತಿ, ಪಾಲಿಕೆ ಆಡಳಿತ ಸಹಿತ ಎಲ್ಲರೂ ಇದಕ್ಕೆ ಕೈಜೋಡಿಸಿದ್ದಾರೆ.

ಸಮುದ್ರ ತೀರದಲ್ಲಿ ಬರುವ ಜನರು ಬಳಸಿದ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸಂಗ್ರಹಿಸಿ ಮರುಬಳಕೆ ಮಾಡುವ ತಾಂತ್ರಿಕ ಘಟಕಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತದೆ.

ಸೂಕ್ತ ವ್ಯವಸ್ಥೆಗಳು ಇರಲಿಲ್ಲ
ಪಣಂಬೂರು ಬೀಚ್‌ನಲ್ಲಿ ರಜಾ ದಿನ, ವಾರಾಂತ್ಯಗಳಲ್ಲಿ ಕನಿಷ್ಠ ನೂರು ಕೆಜಿ ಕೇವಲ ಪ್ಲಾಸ್ಟಿಕ್‌ ಪೊಟ್ಟಣಗಳು, ಬಾಟಲಿ, ಕೈ ಚೀಲ ಸಂಗ್ರಹವಾಗುತ್ರವೆ, ಇದನ್ನು ಪ್ರತ್ಯೇಕಿಸಿ ಹಾಕಲು ವ್ಯವಸ್ಥೆಗಳಿರಲಿಲ್ಲ.

ಬೀಚ್‌ ಪ್ರವಾಸೋದ್ಯಮ ವಿಭಾಗಕ್ಕೆ ಸೇರಿದ್ದರೂ ತ್ಯಾಜ್ಯ ವಿಲೇವಾರಿ ಮಾಡುವ ಜವಾಬ್ದಾರಿ ಪಾಲಿಕೆಯದ್ದು. ಪಾಲಿಕೆಯು ಸ್ಥಳೀಯ ವ್ಯಾಪಾರಿಗಳಲ್ಲಿ ಒಡಂಬಡಿಕೆ ಮಾಡಿಕೊಂಡು ಪ್ಲಾಸ್ಟಿಕ್‌ ಸಹಿತ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿತ್ತು.

ಪಣಂಬೂರು ಬೀಚ್‌ನ್ನು ಕಳೆದ ಹತ್ತು ವರ್ಷದ ಹಿಂದೆಯೇ ಪ್ಲಾಸ್ಟಿಕ್‌ ಮುಕ್ತ ಎಂದು ಘೋಷಣೆ ಮಾಡಲಾಗಿದೆಯಾದರೂ ಇದುವೆರಗೂ ಸಂಪೂರ್ಣ ನಿಯಂತ್ರಣ ಸಾಧ್ಯವಾಗಿಲ್ಲ.

ಇಂದು ಸಚಿವರಿಂದ ಚಾಲನೆ
ಪಣಂಬೂರು ಬೀಚಲ್ಲಿ ಪ್ಲಾಸ್ಟಿಕ್‌ ಸಂಗ್ರಹ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಮುದ್ರ ದಡಕ್ಕೆ ಪ್ಲಾಸ್ಟಿಕ್‌ ಬಾಟಲಿಗಳನ್ನು ಒಯ್ಯದೆ, ಈ ಘಟಕದಲ್ಲಿ ಹಾಕಿ ಸ್ವತ್ಛತೆಗೆ ಕೈ ಜೋಡಿಸಬೇಕು. ಇದಕ್ಕೆ ಅಧಿಕೃತವಾಗಿ ಆ. 30ರಂದು ಉಸ್ತುವಾರಿ ಸಚಿವ ಗುಂಡೂರಾವ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಸಿಪಿಎಂಟಿಎ ಅಧ್ಯಕ್ಷ  ಬಿ.ಎ. ನಝೀರ್‌ ತಿಳಿಸಿದ್ದಾರೆ.

-ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.