Gadag: ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?
Team Udayavani, Aug 30, 2024, 5:45 PM IST
ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ.
ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.
ಮಂಜುನಾಥ್ ಕೋಟುಮಚಗಿಯಲ್ಲಿ ಅಕ್ಕನನ್ನ ಭೇಟಿಯಾಗಿ ರಾತ್ರಿ ಮನೆಗೆ ಮರಳಿದ್ದ. ಅಕ್ಕನ ಮನೆಯ ಪಕ್ಕದ ಬಡಾವಣೆಯಲ್ಲಿ ಹೆಂಡತಿ, ಮಕ್ಕಳ ಜತೆ ವಾಸವಿದ್ದ. ಶುಕ್ರವಾರ ನಸುಕಿನ 3 ಗಂಟೆಗೆ ರಸ್ತೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಲಾಗಿದ್ದು ಸ್ಥಳಕ್ಕೆ ಪೊಲೀಸರು, ಶ್ವಾನದಳ ಸಿಬಂದಿ ದೌಡಾಯಿಸಿದ್ದಾರೆ.
ಶ್ವಾನದಳ ಸಿಬಂದಿ ಶ್ವಾನಕ್ಕೆ ಶವದ ವಾಸನೆ ತೋರಿಸಿದ ಎರಡೇ ನಿಮಿಷದಲ್ಲಿ ಮನೆ ಮುಂದೆ ಬಂದು ನಿಂತಿತ್ತು. ತತ್ ಕ್ಷಣ ಶಾರದಮ್ಮಳ ವಿಚಾರಣೆಯನ್ನು ಗದಗ ಗ್ರಾಮೀಣ ಪೊಲೀಸರು ನಡೆಸಿದ್ದಾರೆ. ಸ್ಥಳಕ್ಕೆ ಗದಗ ಎಸ್ ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.