Mangaluru: ಸಂಚಾರ ವ್ಯವಸ್ಥೆ ಸುಧಾರಣೆಗೆ “ಡಿವೈಡರ್‌’ ನಿರ್ಮಾಣ

ರಸ್ತೆ ಮಧ್ಯದ ಬ್ಯಾರಿಕೇಡ್‌, ಟ್ರಾಫಿಕ್‌ ಕೋನ್‌ ತೆರವು; ಪೊಲೀಸರಿಂದ ಹಲವು ಬದಲಾವಣೆ

Team Udayavani, Aug 30, 2024, 5:51 PM IST

Mangaluru: ಸಂಚಾರ ವ್ಯವಸ್ಥೆ ಸುಧಾರಣೆಗೆ “ಡಿವೈಡರ್‌’ ನಿರ್ಮಾಣ

ಮಹಾನಗರ: ನಗರದ ವಿವಿಧೆಡೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಮಧ್ಯದಲ್ಲಿ ಡಿವೈಡರ್‌ ಇಲ್ಲದಿರುವ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌, ಟ್ರಾಫಿಕ್‌ ಕೋನ್‌ಗಳನ್ನು ತೆರವುಗೊಳಿಸಿ ಮತ್ತೆ ಶಾಶ್ವತ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ.

ನಗರದಲ್ಲಿ 18 ಸ್ಥಳಗಳನ್ನು ಗುರುತಿಸಿ ಪೊಲೀಸ್‌ ಇಲಾಖೆ ವತಿಯಿಂದ ಮಹಾನಗರ ಪಾಲಿಕೆಗೆ ಪಟ್ಟಿ ನೀಡಲಾಗಿದ್ದು, ಈ ಪೈಕಿ 8 ಸ್ಥಳಗಳಲ್ಲಿ ಈಗಾಗಲೇ ಡಿವೈಡರ್‌ಗಳನ್ನು ನಿರ್ಮಿಸಲಾಗಿದೆ.

ಕಾಂಕ್ರೀಟ್‌ ರಸ್ತೆಗಳನ್ನು ನಿರ್ಮಿಸುವಾಗ ಕೆಲವು ಕಡೆಗಳಲ್ಲಿ ವಾಹನಗಳು ತಿರುವು ಪಡೆಯಲು ಅನುಕೂಲವಾಗುವಂತೆ ಡಿವೈಡರ್‌ ನಿರ್ಮಿಸದೆ ಹಾಗೇ ಬಿಡಲಾಗಿತ್ತು. ವಾಹನಗಳ ಸಂಖ್ಯೆ ಹೆಚ್ಚಾದ ಕಾರಣ, ಅಂತಹ ಸ್ಥಳಗಳಲ್ಲಿ ವಾಹನಗಳು ತಿರುವು ಪಡೆದುಕೊಳ್ಳುವಾದ ದಟ್ಟಣೆ ಉಂಟಾಗುತ್ತದೆ ಎಂದು ಪೊಲೀಸ್‌ ಇಲಾಖೆ ಬ್ಯಾರಿಕೇಡ್‌, ಟ್ರಾಫಿಕ್‌ ಕೋನ್‌ಗಳನ್ನು ಅಳವಡಿಸಿತ್ತು. ಕೆಲವು ದ್ವಿಚಕ್ರವಾಹನ ಸವಾರರು ಇವುಗಳ ನಡುವೆಯೂ ವಾಹನ ನುಗ್ಗಿಸಿ ಒಂದು ರಸ್ತೆಯಿಂದ ಇನ್ನೊಂದು ರಸ್ತೆಗೆ ತಿರುವುದು ಪಡೆದುಕೊಳ್ಳುವುದು ಅಲ್ಲಲ್ಲಿ ಕಂಡು ಬರುತ್ತಿತ್ತು. ಆದ್ದರಿಂದ ಇಂತಹ ಸ್ಥಳಗಳಲ್ಲಿ ಶಾಶ್ವತ ಡಿವೈಡರ್‌ಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಎಲ್ಲೆಲ್ಲ ನಿರ್ಮಾಣ ಮಾಡಲಾಗಿದೆ?
ಸ್ಟೇಟ್‌ ಬ್ಯಾಂಕ್‌ ಬಳಿಯ ಹ್ಯಾಮಿಲ್ಟನ್‌ ವೃತ್ತ ಸಮರ್ಪಕವಾಗಿ ನಿರ್ಮಾಣವಾಗ ದಿರುವ ಹಿನ್ನೆಲೆಯಲ್ಲಿ ಬ್ಯಾರಿಕೇಡ್‌ಗಳನ್ನು ಇರಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಆ ಸ್ಥಳದಲ್ಲಿ ಮತ್ತೆ ಟ್ರಾಫಿಕ್‌ ಐಲ್ಯಾಂಡ್‌ಗಳನ್ನು ನಿರ್ಮಿಸಲು ಕಲ್ಲುಗಳನ್ನು ಇರಿಸಲಾಗಿದೆ. ಕೆ.ಎಸ್‌. ರಾವ್‌ ರಸ್ತೆಯ ಶರವು ಕ್ರಾಸ್‌, ಹೊಟೇಲ್‌ ಪೂಂಜಾ ಆರ್ಕೇಡ್‌ ಎದುರು ಬ್ಯಾರಿಕೇಡ್‌ಗಳನ್ನು ತೆಗೆದು ಡಿವೈಡರ್‌ ನಿರ್ಮಿಸಲಾಗಿದೆ.

ಲೇಡಿಗೋಶನ್‌ ರಸ್ತೆಯಲ್ಲಿ ಬಸ್‌ ನಿಲುಗಡೆಗೆ ತಡೆ?
ಲೇಡಿಗೋಶನ್‌ ಆಸ್ಪತ್ರೆ ಎದುರಿನ ರಸ್ತೆಯಲ್ಲಿ ಬಸ್‌ ಸಂಚಾರ ವ್ಯವಸ್ಥೆಯಲ್ಲಿ ಮಹ್ವದ ಬದಲಾವಣೆ ತರಲು ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಿಟಿ ಮತ್ತು ಸರ್ವಿಸ್‌ ಬಸ್‌ಗಳನ್ನು ರಸ್ತೆಯ ಎಡಬದಿಯಲ್ಲಿ ಮತ್ತು ಎಕ್ಸ್‌ಪ್ರೆಸ್‌ ಹಾಗೂ ಇತರ ವಾಹನಗಳನ್ನು ಬ್ಯಾರಿಕೇಡ್‌ನ‌ ಬಲಬದಿಯಲ್ಲಿ ಸಂಚರಿಸಲು ಕೆಲವು ತಿಂಗಳುಗಳಿಂದ ವ್ಯವಸ್ಥೆ ಮಾಡಲಾಗಿದೆ. ಹೊಸ ಬದಲಾವಣೆಯಂತೆ ರಾವ್‌ ಆ್ಯಂಡ್‌ ರಾವ್‌ ವೃತ್ತದಿಂದ ಟೌನ್‌ ಹಾಲ್‌ ಮುಂಭಾಗದ ವರೆಗೆ ಡಿವೈಡರ್‌ ನಿರ್ಮಿಸಿ ಎಲ್ಲ ಬಸ್‌ಗಳು ಡಿವೈಡರ್‌ನ ಬಲಬದಿಯಿಂದಲೇ ಸಂಚರಿಸುವಂತೆ ಮಾಡಲು ಉದ್ದೇಶಿಸಲಾಗಿದೆ. ಇತರ ವಾಹನಗಳು ಎಡಬದಿಯಲ್ಲಿ ಅವಕಾಶ ನೀಡಲಾಗುತ್ತದೆ. ಲೇಡಿಗೋಶನ್‌ ಬಳಿ ಯಾವುದೇ ಬಸ್‌ಗಳಿಗೆ ನಿಲುಗಡೆ ಇಲ್ಲ. ನಿಲ್ದಾಣದಿಂದ ಹೊರಡುವ ಬಸ್‌ಗಳಿಗೆ ಹಂಪನಕಟ್ಟೆ ವರೆಗೆ ಯಾವುದೇ ನಿಲುಗಡೆ ಇರುವುದಿಲ್ಲ. ಸ್ಟೇಟ್‌ಬ್ಯಾಂಕ್‌ ಭಾಗದ ಪ್ರಯಾಣಿಕರು ತಂಗುದಾಣಕ್ಕೆ ಬಂದೇ ಬಸ್‌ಗಳನ್ನು ಹಿಡಿಯಬೇಕು ಎನ್ನುವುದು ಪೊಲೀಸರ ಚಿಂತನೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂದು ಅನುಷ್ಠಾನಕ್ಕೆ ಬಂದ ಬಳಿಕವಷ್ಟೇ ತಿಳಿಯಲಿದೆ.

ಸಾರ್ವಜನಿಕರ ಸಹಕಾರ ಅಗತ್ಯ
ನಗರದ ವಿವಿಧೆಡೆ ಸುಗಮ ವಾಹನ ಸಂಚಾರ ಉದ್ದೇಶದಿಂದ ಒಂದಷ್ಟು ಬದಲಾವಣೆಗಳನ್ನು ತರಲು ಉದ್ದೇಶಿಸಲಾಗಿದೆ. ಡಿವೈಡರ್‌ಗಳ ಬದಲಾಗಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಮತ್ತೆ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಬದಲಾವಣೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ.
-ಬಿ.ಪಿ. ದಿನೇಶ್‌ ಕುಮಾರ್‌,ಡಿಸಿಸಿ, ಅಪರಾಧ, ಸಂಚಾರ ವಿಭಾಗ

ಅಂಬೇಡ್ಕರ್‌ ವೃತ್ತದಿಂದ ಬಂಟ್ಸ್‌ ಹಾಸ್ಟೆಲ್‌ ಕಡೆಗೆ ಸಾಗುವ ರಸ್ತೆಯಲ್ಲಿ ಸೋಮಯಾಜಿ ಬಿಲ್ಡಿಂಗ್‌ ಎದುರು ಮತ್ತು ಮಹಾರಾಜ ಹೊಟೇಲ್‌ ಎದುರು ಕೋನ್‌ಗಳನ್ನು ತೆಗೆದು ಡಿವೈಡರ್‌ ನಿರ್ಮಾಣ ಮಾಡಲಾಗಿದೆ. ಲೇಡಿಗೋಶನ್‌ ಆಸ್ಪತ್ರೆ ಎದುರು, ಕರಂಗಲಪಾಡಿ ಜಂಕ್ಷನ್‌, ಬಂಟ್ಸ್‌ ಹಾಸ್ಟೆಲ್‌ ಜಂಕ್ಷನ್‌, ಭಾರತ್‌ ಬೀಡಿ ಜಂಕ್ಷನ್‌, ಸೈಂಟ್‌ ಆ್ಯಗ್ನೇಸ್‌ ಕಾಲೇಜು ಮುಂಭಾಗದಲ್ಲಿ, ಬೆಂದೂರುವೆಲ್‌ ಜಂಕ್ಷನ್‌, ಕರಾವಳಿ ಜಂಕ್ಷನ್‌, ಕಂಕನಾಡಿ ಜಂಕ್ಷನ್‌ 1 ಮತ್ತು 2ರಲ್ಲಿರುವ ಬ್ಯಾರಿಕೇಡ್‌ಗಳನ್ನು ತೆರವು ಗೊಳಿಸಿ ಡಿವೈಡರ್‌ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.