Sagara; ಹಿರಿಯ ರಾಜಕಾರಣಿ, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ
Team Udayavani, Aug 30, 2024, 5:50 PM IST
ಸಾಗರ: ಮಾಜಿ ಸಚಿವ ಹಾಗೂ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ ನಿಕಟಪೂರ್ವ ಅಧ್ಯಕ್ಷ ಕೆ.ಎಚ್.ಶ್ರೀನಿವಾಸ್ (85) ಶುಕ್ರವಾರ ಬೆಂಗಳೂರಿನಲ್ಲಿ ವಯೋಸಹಜ ಕಾರಣಗಳಿಂದಾಗಿ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೈಸೂರು ಪ್ರಜಾಪ್ರತಿನಿಧಿ ಸಭಾದ ಸದಸ್ಯರಾಗಿದ್ದ ಕಾನುಗೋಡು ಹರಿಯಪ್ಪನವರ ಮೂರನೇ ಪುತ್ರ ಕೆ.ಹೆಚ್. ಶ್ರೀನಿವಾಸ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜಕೀಯ ಶಾಸ್ತ್ರದಲ್ಲಿ ಎಂ.ಎ. ಪದವಿಯನ್ನು ಪಡೆದು, ಮೈಸೂರು ಶಾರದಾ ಕಾಲೇನಿನಲ್ಲಿ ಕಾನೂನು ಪದವಿಯನ್ನು ಪಡೆದ ನಂತರ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಅಲ್ಪಕಾಲದ ಸೇವೆ ಸಲ್ಲಿಸಿದ್ದರು. ನಂತರ ವಕೀಲ ವೃತ್ತಿಯನ್ನು ಕೈಗೊಂಡಿದ್ದರು.
ಮಲೆನಾಡು ಪ್ರದೇಶದ ಜನರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಸಿವನ್ನು ನೀಗಿಸುವ ಉದ್ದೇಶ ಹೊತ್ತು ಸಾಗರ ಪ್ರಾಂತ್ಯ ವಿದ್ಯಾವರ್ಧಕ ಸಂಘದಲ್ಲಿ ಪ್ರಥಮ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ನಂತರ ಬದಲಾದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ರಿ. ಸಂಸ್ಥೆಯ ಅಧ್ಯಕ್ಷರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಸಾಗರದ ಪ್ರತಿಷ್ಠಿತ ಲಾಲ್ಬಹದ್ದೂರ್ ಕಾಲೇಜಿನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ಒಬ್ಬರು. ಅನೇಕ ವರ್ಷಗಳ ಕಾಲ ಅಧ್ಯಕ್ಷರಾಗಿ ಗುಣಮಟ್ಟದ ವಿದ್ಯಾಭ್ಯಾಸ ನೀಡುವ ಜೊತೆಗೆ ಅಂಗಸಂಸ್ಥೆಗಳಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗಳಿಗೂ ಕಾರಣರಾದವರು.
1967 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಪ್ರಬಲ ಪ್ರತಿಸ್ಪರ್ಧಿ ಕಾಗೋಡು ತಿಮ್ಮಪ್ಪನವರನ್ನು 700 ಮತಗಳ ಅಂತರದಲ್ಲಿ ಪರಾಭಗೊಳಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1974ರಲ್ಲಿ ಮುಖ್ಯಮಂತ್ರಿ ದೇವರಾಜ ಅರಸು ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು.
1978ರಲ್ಲಿ ಶಿವಮೊಗ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಗೊಂಡು ದೇವರಾಜ ಅರಸು ಸಂಪುಟದಲ್ಲಿ ವಾರ್ತಾ ಮತ್ತು ಇಂಧನ ಖಾತೆ ಸಚಿವರಾಗಿ ಪ್ರಸಿದ್ಧರಾದರು. ನಂತರ 1985ರಲ್ಲಿ ಪುನಾ ಶಿವಮೊಗ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಗೊಂಡರು. 1996-2002ರವರೆಗೆ ವಿಧಾನಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿ ವಿಧಾನಪರಿಷತ್ತಿನಲ್ಲಿ ವಿಪಕ್ಷನಾಯಕರಾಗಿ ಕಾರ್ಯನಿರ್ವಹಿಸಿದರು.
ಉತ್ತಮ ಸಾಹಿತಿಯೂ, ಬರಹಗಾರ, ಸಂಗೀತ ಪ್ರೇಮಿ, ಓದುಗ, ವಿಶೇಷ ಜ್ಯಾನಿಯೂ, ವಾಗ್ಮಿಯೂ ಆದ ಶ್ರೀನಿವಾಸ್ ಅವರ ಕಾನುಗೋಡು ಮನೆ, ಕವನ ಸಂಕಲನಗಳನ್ನೊಳಗೊಂಡ ಐದು ಪುಸ್ತಕಗಳು ಬಿಡುಗಡೆಗೊಂಡಿವೆ.
ಬಹುಮುಖ ಪ್ರತಿಭೆಯ ಶ್ರೀನಿವಾಸ್ ಯಕ್ಷಗಾನ ತಾಳಮದ್ದಳೆಯ ಅರ್ಥಧಾರಿಯಾಗಿಯೂ ಗುರುತಿಸಿಕೊಂಡವರು. ಶ್ರೀನಿವಾಸ್ರವರ ಪತ್ನಿ ಶಾಲಿನಿ ಶ್ರೀನಿವಾಸ್ ಸಹ ಕವಯಿತ್ರಿ, ಬರಹಗಾರ್ತಿಯಾಗಿ ಹೆಸರು ಮಾಡಿದವರು.
ಸಂತಾಪ: ಅವರ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಎಂ. ಹರನಾಥರಾವ್, ಬಿ.ಆರ್. ಜಯಂತ್, ರವಿಕುಮಾರ್, ಎಚ್.ಎಂ. ಶಿವಕುಮಾರ್, ಕವಲಕೋಡು ವೆಂಕಟೇಶ್, ಎಂ.ಆರ್. ಸತ್ಯನಾರಾಯಣ, ಶರಾವತಿ ಸಿ.ರಾವ್ ಸಂತಾಪ ಸೂಚಿಸಿದ್ದಾರೆ. ಎಂಡಿಎಫ್ ಸಂಸ್ಥೆಯ ಎಲ್ಲ ವಿದ್ಯಾಸಂಸ್ಥೆಗಳಿಗೆ ಶನಿವಾರ ಶ್ರೀಯುತರ ಗೌರವಾರ್ಥ ರಜೆಯನ್ನು ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.