Kangana Ranaut ‘ಎಮರ್ಜೆನ್ಸಿ’ಸೆನ್ಸಾರ್ ಮಂಡಳಿಯಲ್ಲೇ ಅಂಟಿಕೊಂಡಿದೆ: ಬಿಡುಗಡೆಗೆ ಸಂಕಷ್ಟ!
ನನಗೆ, ಸಿಬಿಎಫ್ಸಿ ಸದಸ್ಯರಿಗೆ ಬೆದರಿಕೆಗಳು ಬರುತ್ತಿವೆ ಎಂದ ಸಂಸದೆ
Team Udayavani, Aug 30, 2024, 9:02 PM IST
ಹೊಸದಿಲ್ಲಿ: “ಎಮರ್ಜೆನ್ಸಿ”(Emergency) ಚಿತ್ರವು ಸೆನ್ಸಾರ್ ಮಂಡಳಿಯಲ್ಲಿ ಇನ್ನೂ ಅಂಟಿಕೊಂಡಿದ್ದು, ಬಿಡುಗಡೆಗೆ ಅನುಮತಿ ನೀಡಲಾಗಿದೆ ಎಂಬ ವದಂತಿಗಳನ್ನು ನಟಿ-ಸಂಸದೆ ಕಂಗನಾ ರಣಾವತ್(Kangana Ranaut ) ಶುಕ್ರವಾರ(ಆ 30) ತಳ್ಳಿಹಾಕಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಸಂದೇಶದಲ್ಲಿ, ತನಗೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ಸದಸ್ಯರಿಗೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
“ನಮ್ಮ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ನಿಜವಲ್ಲ. ವಾಸ್ತವವಾಗಿ, ನಮ್ಮ ಚಲನಚಿತ್ರವನ್ನು ಮೊದಲೇ ಬಿಡುಗಡೆಗೆ ಅನುಮತಿ ನೀಡಲಾಗಿತ್ತು ಆದರೆ ಹಲವಾರು ಬೆದರಿಕೆಗಳಿಂದಾಗಿ ಅದರ ಪ್ರಮಾಣೀಕರಣವನ್ನು ನಿಲ್ಲಿಸಲಾಗಿದೆ, ”ಎಂದು ಕಂಗನಾ ಹೇಳಿದ್ದಾರೆ.
ಇಂದಿರಾ ಗಾಂಧಿ, ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಹತ್ಯೆ ಮತ್ತು ಪಂಜಾಬ್ ಗಲಭೆಗಳನ್ನು ತೋರಿಸದಂತೆ ನಮ್ಮ ಮೇಲೆ ಒತ್ತಡವಿದೆ. ನಂತರ ನಾವು ಏನು ತೋರಿಸುತ್ತೇವೆ ಎಂದು ನನಗೆ ತಿಳಿದಿಲ್ಲ, ಚಿತ್ರದಲ್ಲಿ ಬ್ಲ್ಯಾಕೌಟ್ ಇದೆ ಎಂದು ಹೇಳಲಾಗಿದೆ. ಇದು ನನಗೆ ನಂಬಲಾಗದ ಸಮಯ ಮತ್ತು ಈ ದೇಶದ ಈ ಸ್ಥಿತಿಗೆ ನಾನು ತುಂಬಾ ವಿಷಾದಿಸುತ್ತೇನೆ”ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಬೇಕಿದ್ದ ಚಿತ್ರದಲ್ಲಿ ಕಂಗನಾ ರಣಾವತ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಶಿರೋಮಣಿ ಅಕಾಲಿದಳ ಶುಕ್ರವಾರ ಸಿಬಿಎಫ್ಸಿಗೆ ಲೀಗಲ್ ನೋಟಿಸ್ ಕಳುಹಿಸಿದ್ದು, ರಣಾವತ್ ಅವರ ಚಲನಚಿತ್ರ “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತದೆ” ಮತ್ತು “ತಪ್ಪು ಮಾಹಿತಿ ಹರಡಬಹುದು” ಎಂದು ಆರೋಪಿಸಿ ಬಿಡುಗಡೆಯನ್ನು ತಡೆಯುವಂತೆ ಕೋರಿದೆ. ಹಲವು ಸಿಖ್ ಸಂಘಟನೆಗಳೂ ಆಕ್ಷೇಪ ವ್ಯಕ್ತಪಡಿಸಿವೆ.
#Emergency pic.twitter.com/Klko20kkqY
— Kangana Ranaut (@KanganaTeam) August 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.