Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

ಶಿವಮೊಗ್ಗ ಮೂಲದ ಬಂಧಿತ ಕೋಮಲಾಳಿಂದ ಕುಂದಾಪುರ ನಿವಾಸಿಗೂ ಮೋಸ, ಆ್ಯಪಲ್ ಪೋನ್, 20,940 ರೂ. ನಗದು ವಶ

Team Udayavani, Aug 30, 2024, 11:23 PM IST

1-aaaa

ಚಿಕ್ಕಬಳ್ಳಾಪುರ: ಮರು ಮದುವೆ ಮಾಡಿಕೊಳ್ಳಲು ಕಲ್ಯಾಣ್ ಮ್ಯಾಟ್ರಿಮೋನಿ.ಕಾಮ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ ಜಿಲ್ಲೆಯ ವ್ಯಕ್ತಿಗೆ ಮದುವೆ ಮಾಡಿಕೊಳ್ಳಲು ಒಪ್ಪಿ ಮೇಸೆಜ್ ಕಳಿಸಿ ಬಳಿಕ ಆತನಿಂದ 7.40 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಶಿವಮೊಗ್ಗ ಮೂಲದ ಮಹಿಳೆಯನ್ನು ಜಿಲ್ಲೆಯ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಶಿವಮೊಗ್ಗ ಮೂಲದ ಕೋಮಲಾ ಎಂದು ಗುರುತಿಸಲಾಗಿದೆ. ಮಹಿಳೆಯಿಂದ  ಆ್ಯಪಲ್ ಪೋನ್, 20,940 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿದ್ದಾರೆ.  ಈಕೆಯ ಪತಿ ಕೆಪಿಟಿಸಿಎಲ್ ನೌಕರರಾಗಿ 2017 ರಲ್ಲಿ ಮೃತಪಟ್ಟಿದ್ದು, ಬಳಿಕ ಆಕೆಯು ಬೆಂಗಳೂರಿನಲ್ಲಿ ನೆಲೆಸಿ ತನ್ನ ವಿಲಾಸಿ ಜೀವನಕ್ಕಾಗಿ ಹಲವು ಪುರುಷರಿಗೆ ಇದೇ ರೀತಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಜಿಲ್ಲೆಯ ಗೌರಿಬಿದನೂರಿನ ಸುಮಂಗಲಿ ಬಡಾವಣೆ ನಿವಾಸಿ ರಾಘವೇಂದ್ರ ಬಿನ್ ದೊಡ್ಡಲಿಂಗಪ್ಪ (35) ಮರು ಮದುವೆಯಾಗಲು ಕಲ್ಯಾಣ್ ಮ್ಯಾಟ್ರಿಮೋನಿ.ಕಾಮ್ ನಲ್ಲಿ, ರಿಜಿಸ್ಟರ್ ಮಾಡಿದ್ದು ಕೋಮಲ ಕೂಡ ಮಾಟ್ರಿಮೋನಿ ಐಡಿಗೆ ರಿಕ್ವೆಸ್ಟ್‌ ಕಳುಹಿಸಿದ್ದಾಳೆ.

ಬಳಿಕ ಮೊಬೈಲ್‌ನಿಂದ ರಾಘವೇಂದ್ರಗೆ ಮೆಸೇಜ್ ಮಾಡಿ ತನ್ನ ಗಂಡ ತೀರಿ ಹೋಗಿದ್ದು ಮಕ್ಕಳಿಲ್ಲ ನಾನು ನಿನ್ನ ಜೊತೆ ಮದುವೆ ಆಗುತ್ತೇನೆಂದು ನಂಬಿಸಿ ನನ್ನ ಗಂಡನು ಮೃತ ಪರಿಹಾರ ಹಣ 6 ಕೋಟಿ ರೂಪಾಯಿಗಳು ತೆರಿಗೆ ಕಟ್ಟದ ಕಾರಣ ನನ್ನ ಬ್ಯಾಂಕ್ ಖಾತೆಯಲ್ಲಿ ಬ್ಲಾಕ್‌ ಆಗಿದ್ದು, ತೆರಿಗೆ  ಹಣ ಕಟ್ಟಲು  7,40,000 ರೂ.ಗಳನ್ನು ಬೇಕೆಂದು ಆಕೆಯ ತಾಯಿ ರಾಧಾ ಎಂಬವರ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ನಂತರ ಮಹಿಳೆ ರಾಘವೇಂದ್ರ ಅವರ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಬ್ಲಾಕ್ ಮಾಡಿದ್ದಾಳೆ. ಈ ಬಗ್ಗೆ ರಾಘವೇಂದ್ರ ಸೈಬರ್ ಠಾಣೆಗೆ ದೂರು ನೀಡಿದ್ದರು.

ಕುಂದಾಪುರ ನಿವಾಸಿಗೂ ಮೋಸ:
ಬಂಧಿತ ಕೋಮಲಾ ಈ ಹಿಂದೆ ಗುಜರಾತ್ ನಲ್ಲಿ ನೆಲೆಸಿರುವ ಕುಂದಾಪುರದ ನಿವಾಸಿ ರಾಘವೇಂದ್ರ ಎಂಬವರಿಗೆ ಮೋಸ ಮಾಡಿ 25,000 ರೂ. ಹಣ ಹಾಕಿಸಿಕೊಂಡಿದ್ದಳು. ಇದೇ ರೀತಿ ಬೆಂಗಳೂರು ನಗರದ ವಾಸಿಯಾದ ನಾಗರಾಜು ಕೂಡ ಮೋಸ ಮಾಡಿ 1,50,000 ರೂ. ಹಣ ಹಾಕಿಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಈಗಾಗಲೇ 20 ವರ್ಷದ ಗಂಡು ಮಗ ಮತ್ತು 16 ವರ್ಷದ ಮಗಳಿದ್ದು ಈಕೆಯ ಗಂಡ ರಮೇಶ್ ಶಿವಮೊಗ್ಗದಲ್ಲಿ ಕೆ.ಪಿ.ಟಿ.ಸಿ.ಎಲ್. ನೌಕರನಾಗಿದ್ದು 2017 ರಲ್ಲಿ ನಿಧನರಾಗಿದ್ದಾರೆ. ತನ್ನ ವಿಲಾಸಿ ಜೀವನಕ್ಕಾಗಿ ಬೆಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಈಕೆ ಜನರಿಗೆ ಮೋಸ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆಂದು ಎಸ್ಪಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.