Indiana Hospital: “ಇಂಡಿಯಾನ ಕ್ಯಾನ್ಸರ್ ಸೆಂಟರ್’ ಉದ್ಘಾಟನೆ
Team Udayavani, Aug 31, 2024, 12:48 AM IST
ಮಂಗಳೂರು: ನಗರದ ಪಂಪ್ವೆಲ್ನಲ್ಲಿರುವ ಇಂಡಿಯಾನ ಆಸ್ಪತ್ರೆ ಮತ್ತು ಹೃದಯ ಚಿಕಿತ್ಸಾ ಕೇಂದ್ರದಲ್ಲಿ “ಇಂಡಿಯಾನ ಕ್ಯಾನ್ಸರ್ ಸೆಂಟರ್’ ಶುಕ್ರವಾರ ಉದ್ಘಾಟನೆಗೊಂಡಿತು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನೆರವೇರಿಸಿದ ಮಾತನಾಡಿ, ದೇಶದಲ್ಲಿ ಉತ್ತಮ ಆಸ್ಪತ್ರೆಗಳ ಆವಶ್ಯಕತೆ ಇದ್ದು ಇಂಡಿಯಾನ ಆಸ್ಪತ್ರೆ ಇದಕ್ಕೆ ಪೂರಕವಾಗಿ ಸಾಮಾಜಿಕ ಚಿಂತನೆಯೊಂದಿಗೆ ಸೇವೆ ನೀಡುತ್ತಿದೆ. ಜಿಲ್ಲೆ ಹಾಗೂ ಹೊರಗಿನವರಿಗೆ ಗುಣಮಟ್ಟದ ಚಿಕಿತ್ಸೆ ಇಂಡಿಯಾನದ ಮೂಲಕ ಲಭಿಸುವಂತಾಗಲಿ. ಆಸ್ಪತ್ರೆಯ ಮಾಲಕರು ಸಾಮಾಜಿಕ ಚಿಂತನೆ ಇರುವವರಾಗಿದ್ದು, ಸಂಸ್ಥೆಯೂ ಅದೇ ಸಿದ್ಧಾಂತದಲ್ಲಿ ನಿಂತಿದೆ. ಇಂಡಿಯಾನ ಆಸ್ಪತ್ರೆ ಜನರ ನಂಬಿಕೆ ಯನ್ನು ಉಳಿಸಿಕೊಂಡಿದೆ ಹಾಗೂ ಪಾರದರ್ಶಕತೆ ಕಾಯ್ದುಕೊಂಡಿದೆ ಎಂದರು.
ರಾಜ್ಯದ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ “ಕ್ಯಾನ್ಸರ್ ಡೇಕೇರ್ ಕಿಮೋ ಸೆಂಟರ್’ಗಳನ್ನು ಮುಂದಿನ ತಿಂಗಳಿನಿಂದ ಆರಂಭಿಸಲಾಗುವುದು. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿದರೆ ರೋಗಿ ಗುಣಮುಖನಾಗಲು ಸಾಧ್ಯವಿದ್ದು, ಇಂಡಿಯಾನ ಆಸ್ಪತ್ರೆ ಇದಕ್ಕೆ ಪೂರಕವಾಗಿ ಸೇವೆ ನೀಡುತ್ತಿದೆ ಎಂದರು.
ಕರ್ನಾಟಕ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ| ಯು.ಟಿ. ಇಫ್ತಿಕಾರ್ ಮಾತನಾಡಿ, ಇಂಡಿಯಾನ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಿಗುವಂತಾಗಲಿ. ಸಂಸ್ಥೆ ಆರೋಗ್ಯಕರ ಸೇವೆಯೊಂದಿಗೆ ಬೆಳೆಯಲಿ ಎಂದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ಯೂಸುಫ್ ಕುಂಬ್ಳೆ ಮಾತನಾಡಿ, 13 ವರ್ಷಗಳ ಹಿಂದೆ ಸಣ್ಣದಾಗಿ ಆರಂಭಿಸಿ ಆಸ್ಪತ್ರೆಯನ್ನು ಹಂತಹಂತವಾಗಿ ಬೆಳೆಸಲಾಗಿದೆ. ಅನೇಕ ಸವಾಲುಗಳನ್ನು ಎದುರಿಸಿದ ಬಳಿಕ ಇಂದಿನ ಹಂತಕ್ಕೆ ತಲುಪಲು ಸಾಧ್ಯವಾಗಿದೆ. ಇಂಡಿಯಾನ ಕ್ಯಾನ್ಸರ್ ಸೆಂಟರ್ ಅನ್ನು ವಿಶೇಷವಾದ, ಅಂಗ-ನಿರ್ದಿಷ್ಟ ಕ್ಯಾನ್ಸರ್ ಆರೈಕೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ.
ಕ್ಯಾನ್ಸರ್ಗೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚುವ ತಂತ್ರಜ್ಞಾನದ ಅಗತ್ಯವಿದ್ದು, ಗುಣಪಡಿಸಬಹುದಾದ ನುರಿತ ಚಿಕಿತ್ಸೆಯನ್ನು ಕಂಡುಕೊಳ್ಳಬೇಕಾಗಿದೆ ಎಂದರು.
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್. ತಿಮ್ಮಯ್ಯ, ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ವೈದ್ಯಕೀಯ ಆಡಳಿತ ನಿರ್ದೇಶಕ ಡಾ| ಆದಿತ್ಯ ಭಾರದ್ವಾಜ್, ಸಿಇಒ ವಿಜಯಚಂದ್ರ ಇ., ಗೈನಕಾಲಜಿಸ್ಟ್ ಡಾ| ಸಂಗೀತಾ ಕೆ., ವೈದ್ಯಕೀಯ ನಿರ್ದೇಶಕ ಡಾ| ಅಪೂರ್ವ ಶುಭ ಹಾರೈಸಿದರು.
ಸರ್ಜಿಕಲ್ ಆಂಕಾಲಜಿಸ್ಟ್ ಡಾ| ಅಜಯ್ ಕುಮಾರ್ ರೇಡಿಯೇಷನ್ ಆಂಕಾಲಜಿಸ್ಟ್ ಡಾ| ಕೃಷ್ಣರಾಜ್ ಎಚ್.ಆರ್. ಉಪಸ್ಥಿತರಿದ್ದರು.ಮೆಡಿಕಲ್ ಆಂಕಾಲಜಿ ವಿಭಾಗದ ಡಾ| ರಮಾನಾಥ ಶೆಣೈ ವಂದಿಸಿದರು. ಕ್ವಾಲಿಟಿ ಮ್ಯಾನೇಜರ್ ನಿಧಿ ಶಾ ನಿರೂಪಿಸಿದರು.
ಹೊಸ ಕ್ಯಾನ್ಸರ್ ಸೆಂಟರ್ನಲ್ಲೇನಿದೆ?
ಸಂಸ್ಥೆಯ ಚೇರ್ಮನ್ ಡಾ| ಅಲಿ ಕುಂಬ್ಳೆ ಮಾತನಾಡಿ, ವಿಶಿಷ್ಟ, ಪರಿಷ್ಕೃತ ಹಾಗೂ ಸುಧಾರಿತ ಚಿಕಿತ್ಸಾ ಪದ್ಧತಿ ಇರಲಿದೆ. ಹಲವು ವಿಧದ ಕ್ಯಾನ್ಸರ್ಗಳಿಗೆ ಒಂದೇ ಕಡೆ ಆಧುನಿಕ ಚಿಕಿತ್ಸೆ ನೀಡಲಾಗುತ್ತದೆ. ಆಧುನಿಕ ತಂತ್ರಜ್ಞಾನದ ಮೂಲಕ ದೇಹದ ಯಾವುದೇ ಭಾಗಗಳಿಗೆ ಕ್ಯಾನ್ಸರ್ ತಗಲಿದರೂ ಅದಕ್ಕೆ ವಿಶಿಷ್ಟ ಹಾಗೂ ಪರಿಣಾಮಕಾರಿ ಚಿಕಿತ್ಸೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatta: ಪಲ್ಟಿಯಾದ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್!
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.