Fraud Case: ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

ವಾಹನ ಸಾಲದ ಕಂತು ಬಾಕಿಯಿದೆ; ತತ್‌ಕ್ಷಣ ಗೂಗಲ್‌ ಪೇ ಮಾಡಿ ಇಲ್ಲವೇ ಕೋರ್ಟ್‌ ಕೇಸ್‌ ಆಗಲಿದೆ ಎಂದು ಬೆದರಿಕೆ

Team Udayavani, Aug 31, 2024, 7:05 AM IST

Fraud Case: ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

ಕಟಪಾಡಿ: ಆನ್‌ಲೈನ್‌ ವಂಚಕರೆಲ್ಲ ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ; ಹಾಗಾಗಿ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂಬ ನಂಬಿಕೆ ಈಗ ಹುಸಿಯಾಗುತ್ತಿದೆ. ಕಟ
ಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ ಘಟನೆ ನಡೆದಿದೆ.

ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ವಕೀಲನೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, “ನಿಮ್ಮ ಸಾಲದ ಕಂತು ಬಾಕಿ ಇದ್ದು, ಕೇಸ್‌ ಆಗಿದೆ. ಕೋರ್ಟ್‌ಗೆ ಹಾಜರಾಗಬೇಕು’ ಎಂದು ದರ್ಪದಿಂದ ಮಾತನಾಡಿ ಸಾಲದ ಕಂತನ್ನು ಗೂಗಲ್‌ ಪೇ ಮೂಲಕ ಭರಿಸುವಂತೆ ಒತ್ತಡ ಹಾಕಿದ್ದಾನೆ. ಕರೆ ಬಂದಿರುವ ನಂಬರ್‌ 8792701216 ಆಗಿದ್ದು ಟ್ರೂ ಕಾಲರ್‌ನಲ್ಲಿ ನಾಗ ಆರ್‌. ಎಂದು ಹೆಸರು ಬರುತ್ತದೆ.

“ಏ ಚಂದ್ರ ಕೂಡಲೇ ಕೋರ್ಟ್‌ಗೆ ಬಾ. ಎಷ್ಟು ಹೊತ್ತಿನಲ್ಲಿ ಬರುತ್ತೀ..’ ಎಂದು ದಬ್ಟಾಳಿಕೆಯಿಂದ ಮಾತಿಗಿಳಿದ ವ್ಯಕ್ತಿಯು ಸಾಲ ಕೊಟ್ಟ ಮ್ಯಾನೇಜರ್‌ ಅವರೊಂದಿಗೂ ಮಾತನಾಡುವಂತೆ ಹೇಳಿ ಇನ್ನೊಬ್ಬನಿಗೆ ಫೋನನ್ನು ಹಸ್ತಾಂತರಿದ್ದಾನೆ. ಮ್ಯಾನೇಜರ್‌ ಎನ್ನುವ ವ್ಯಕ್ತಿ ಮಾತನಾಡಿ, “ತಾಂತ್ರಿಕ ಸಮಸ್ಯೆ ಇರುವುದರಿಂದ ಸಾಲದ ಕಂತು ಅಟೋ ಮ್ಯಾಟಿಕ್‌ ಆಗಿ ನಿಮ್ಮ ಖಾತೆಯಿಂದ ಪಾವತಿ ಆಗುತ್ತಿಲ್ಲ. ಕೂಡಲೇ ಗೂಗಲ್‌ ಪೇ ಮೂಲಕ ಪಾವತಿ ಮಾಡಿ’ ಎಂದು ಆತನೂ ಒತ್ತಡ ಹೇರಿದ. ಇದು ವಂಚಕರ ಕರೆಯೆಂದು ಅರಿತ ಚಂದ್ರ ಪೂಜಾರಿ ಅವರು, “ನನ್ನ ಸಾಲದ ಕಂತು ಬಾಕಿ ಇಲ್ಲ. ಹಾಗೂ ಬಾಕಿ ಇದ್ದಲ್ಲಿ ಕಚೇರಿಗೇ ಬಂದು ಪಾವತಿಸುತ್ತೇನೆ. ನಿಮ್ಮ ಕಚೇರಿ ಉಡುಪಿಯಲ್ಲಿ ಎಲ್ಲಿದೆ?’ ಎಂದು ಕೇಳಿದಾಗ ತಡವರಿಸಿದ ವ್ಯಕ್ತಿಯು “ಲೊಕೇಷನ್‌ ಕಳಿಸುತ್ತೇನೆ’ ಎಂದು ಹೇಳಿ ಕರೆ ಕಡಿತ ಮಾಡಿದ್ದ.

ಬಳಿಕ ವಾಹನ ಸಾಲ ನೀಡಿದ್ದ ಆರ್ಥಿಕ ಸಂಸ್ಥೆಗೆ ಕರೆ ಮಾಡಿ ವಿಚಾರಿಸಿದಾಗ, !ಅಂತಹ ಯಾವುದೇ ಕರೆ ನಮ್ಮ ಕಚೇರಿಯಿಂದ ಮಾಡಿಲ್ಲ. ನಿಮ್ಮ ಸಾಲದ ಯಾವುದೇ ಕಂತು ಬಾಕಿ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಚಂದ್ರ ಅವರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ನಾನು ಅವರ ಒತ್ತಡಕ್ಕೆ ಮಣಿದು ಗೂಗಲ್‌ ಮೂಲಕ ಪಾವತಿಸಿದ್ದಲ್ಲಿ ವಂಚನೆಗೊಳಗಾಗುತ್ತಿದ್ದೆ. ಆದರೆ ಎಲ್ಲೆಡೆ ಇಂತಹ ವಂಚನೆ ಜಾಲಗಳು ಬೇರೆ ಬೇರೆ ಮಾದರಿಯಲ್ಲಿ ವಂಚಿಸಿ ಹಣ ದೋಚುತ್ತಿರುವ ಬಗ್ಗೆ ಉದಯವಾಣಿ ಪತ್ರಿಕೆಯೂ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರಿಂದ ನಾನೂ ಕೂಡ ಜಾಗೃತನಾಗಿಯೇ ಇದ್ದೆ. ಆದ ಕಾರಣ ಹಣ ಕಳೆದುಕೊಳ್ಳಲಿಲ್ಲ ಎಂದು ಚಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

Udupi: ಜಿಲ್ಲೆಯಲ್ಲಿ ಮಾದಕ ಜಾಲ ವ್ಯಾಪಕ; ವರ್ಷದಲ್ಲಿ  28 ಮಾರಾಟ, 223 ಸೇವನೆ ಪ್ರಕರಣ

Udupi: ಜಿಲ್ಲೆಯಲ್ಲಿ ಮಾದಕ ಜಾಲ ವ್ಯಾಪಕ; ವರ್ಷದಲ್ಲಿ  28 ಮಾರಾಟ, 223 ಸೇವನೆ ಪ್ರಕರಣ

muniyal (2)

Parashurama Statue; ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಸಮಾಜ ಬಹಿಷ್ಕರಿಸಬೇಕು

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Cylinder

Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.