Bengaluru: ಲಂಗೋಟಿ ಮ್ಯಾನ್ ಚಿತ್ರಕ್ಕೆ ಸೆನ್ಸಾರ್ ಬೇಡ: ಹಿಂದೂ ಸಮಿತಿ
Team Udayavani, Aug 31, 2024, 11:06 AM IST
ಬೆಂಗಳೂರು: ಕನ್ನಡದ “ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್ ನಲ್ಲಿ ಬ್ರಾಹ್ಮಣ ಸಮುದಾಯವನ್ನು ಹಾಸ್ಯಾಸ್ಪದ ರೀತಿಯಲ್ಲಿ ತೋರಿಸಲಾಗಿದ್ದು, ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಈ ಸಿನಿಮಾ ಪ್ರದರ್ಶನಕ್ಕೆ ಸೆನ್ಸಾರ್ ಮಂಡಳಿ ಒಪ್ಪಿಗೆ ಸೂಚಿಸಬಾರದು ಎಂದು ಹಿಂದೂ ಜನ ಜಾಗೃತ ಸಮಿತಿ ಆಗ್ರ ಹಿಸಿದೆ.
ಚಿತ್ರದಲ್ಲಿ ಒಬ್ಬ ಜನಿವಾರಧಾರಿ ಮತ್ತು ಲಂಗೋಟಿ ಹಾಕಿರುವ ವ್ಯಕ್ತಿಯನ್ನು ಹಾಸ್ಯದ ರೀತಿಯಲ್ಲಿ ತೋರಿಸಿದ್ದಾರೆ. ಹಾಗಾಗಿ ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ಅನುಮತಿ ನೀಡಬಾರದು. ಅನುಮತಿ ನೀಡಿದ್ದಲ್ಲಿ ತಕ್ಷಣವೇ ಹಿಂಪಡೆಯಬೇಕು. ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುವ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಉದ್ದೇಶಪೂರ್ವಕ ವಾಗಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಚಿತ್ರಗಳು ಬರುತ್ತಿದೆ. ಸೆನ್ಸಾರ್ ಮಂಡಳಿ ತಕ್ಷಣವೇ ಇದನ್ನು ನಿಯಂತ್ರಿಸಬೇಕು ಎಂದು ಸಮಿತಿಯ ಜಿಲ್ಲಾ ಸಮನ್ವಯಕ ಶರತ್ ಕುಮಾರ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.