Bigg Boss ನಿರೂಪಣೆ ಹಿಂದಿನ ಕಷ್ಟ ನನಗೆ ಮಾತ್ರ ಗೊತ್ತು – ಕಿಚ್ಚ

ಈ ಬಾರಿ ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಕಿಚ್ಚ ಹೇಳಿದ್ದೇನು?

Team Udayavani, Aug 31, 2024, 2:07 PM IST

11-kiccha-big-boss

ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಅವರ ‘ಮ್ಯಾಕ್ಸ್’ ಸಿನಿಮಾದ ರಿಲೀಸ್ ಬಗ್ಗೆ ಮಾತು ಜೋರಾಗಿ‌ ನಡೆಯುತ್ತಿರುವ ಬೆನ್ನಲ್ಲೇ ಅವರ ಬಿಗ್ ಬಾಸ್ ನಿರೂಪಣೆ ವಿಚಾರವೂ ಸುದ್ದಿಯಲ್ಲಿದೆ.

ಬಿಗ್ ಬಾಸ್ ಕನ್ನಡ -11(Big Boss Kannada -11) ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಆದರೆ ಈ ಬಾರಿ ಶೋ ಶುರುವಿಗೂ ಮುನ್ನ ನಿರೂಪಕ ಯಾರು ಎನ್ನುವುದೇ ಕುತೂಹಲಕಾರಿ ಪ್ರಶ್ನೆಯಾಗಿ ಉಳಿದಿದೆ.

ಕಿಚ್ಚ ಸುದೀಪ್ ಅವರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಕಿಚ್ಚ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿರುವುದು ಅವರು ಬಿಗ್ ಬಾಸ್ ನಡೆಸಿಕೊಡುವ ಬಗ್ಗೆ ಅನುಮಾನ ಬರುವಂತೆ ಮಾಡದೆ.

“ಕಳೆದ 10 ಸೀಸನ್ ನಾನು ಬಿಗ್ ಬಾಸ್ ನಡೆಸಿಕೊಟ್ಟಿದ್ದೇನೆ ಅನ್ನೋದು ಮಾತ್ರ ಎಲ್ಲರಿಗೂ ಗೊತ್ತು. ಆದರೆ ಅದರ ಹಿಂದಿನ ಕಷ್ಟ ಎಲ್ಲರಿಗೂ ಗೊತ್ತಿಲ್ಲ” ಎಂದಿದ್ದಾರೆ.

“ಬಿಗ್ ಬಾಸ್ ಸೀಸನ್ -11 ಕ್ಕೆ ಬೇರೆಯವರೂ ಬರಲಿ ಅಂತಾ ಕಾಯ್ತಾ ಇದೀನಿ. ಬಿಗ್ ಬಾಸ್‌ನ 10 ಸೀಸನ್‌ಗಳನ್ನು ನಾನು ಡೆಡಿಕೇಟ್ ಮಾಡಿದ್ದೀನಿ. ಕಳೆದ 10 ಸೀಸನ್‌ಗಳನ್ನು ನಾನು ನಡೆಸಿಕೊಂಡು ಬಂದಿದ್ದೀನಿ. ನಾನು ಬಿಗ್ ಬಾಸ್ ನಡೆಸಿಕೊಡ್ತೀನಿ ಅಂತಾ ಎಲ್ಲರಿಗೂ ಗೊತ್ತಿದೆ. ಆದರೆ ನಾನು ಹೇಗೆ ನಡೆಸಿಕೊಡುತ್ತಿದ್ದೆ ಅಂತಾ ಯಾರಿಗಾದರೂ ಗೊತ್ತಿದ್ಯಾ? ಬಿಗ್ ಬಾಸ್‌ಗಾಗಿ ನಾನು ಎಲ್ಲಿದ್ದರೂ ಬರಬೇಕಾಗುತ್ತದೆ. ಬಿಗ್ ಬಾಸ್ ನಡೆಸಬೇಕಾದರೆ ಅದರ ಹಿಂದಿನ ಸ್ಥಿತಿ ಹೇಗಿರುತ್ತದೆ ಅಂತಾ ನನಗೆ ಗೊತ್ತಿದೆ ” ಎಂದಿದ್ದಾರೆ.

ಸಿನಿಮಾಗೆ ನ್ಯಾಯ ಕೊಡಬೇಕಾ? ಅಥವಾ ಬಿಗ್ ಬಾಸ್ ಶೋಗೆ ನ್ಯಾಯ ಕೊಡಬೇಕಾ? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಬಾರಿ ಕಿಚ್ಚ ಬಿಗ್ ಬಾಸ್ ನಡೆಸಿಕೊಡುತ್ತಾರಾ ಇಲ್ವಾ ಎನ್ನುವುದರ ಬಗ್ಗೆ ಸ್ಪಷ್ಟವಾಗಿ ಹೇಳಿಲ್ಲ.

ಈ ಹಿಂದೆ ಈ ಬಾರಿ ಕಿಚ್ಚ ಸುದೀಪ್ ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ರಮೇಶ್ ಅರವಿಂದ್, ರಿಷಬ್ ಶೆಟ್ಟಿ ಅವರ ಹೆಸರು ನಿರೂಪಕರ ಸಾಲಿನಲ್ಲಿ ಕೇಳಿ ಬಂದಿತ್ತು.

ಆದರೆ ಶೀಘ್ರದಲ್ಲೇ ಪ್ರೋಮೊ ಶೂಟ್ ಆಗಲಿದ್ದು ಕಿಚ್ಚ ಅವರೇ ಈ ಬಾರಿಯೂ ಶೋ‌ ನಡೆಸಿಕೊಡುತ್ತಾರೆ ಎನ್ನಲಾಗುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಶೋ ಶುರುವಾಗುವ ಸಾಧ್ಯತೆಯಿದೆ. ಈ ಬಗ್ಗೆ ವಾಹಿನಿ ಅಧಿಕೃತ ಮಾಹಿತಿ‌ ಇನ್ನಷ್ಟೇ‌ ನೀಡಬೇಕಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.