Udupi: ಶ್ರೀಕೃಷ್ಣ ಮಠಕ್ಕೆ ತೆಲುಗು ನಟ ಜ್ಯೂ. ಎನ್ ಟಿಆರ್ ಭೇಟಿ
ತಾಯಿಯ 40 ವರ್ಷದ ಕನಸು ಈಡೇರಿಸಿದ ನಟ
Team Udayavani, Aug 31, 2024, 3:10 PM IST
ಉಡುಪಿ: ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂನಿಯರ್ ಎನ್ಟಿಆರ್ (Jr NTR) ಅವರು ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.
ತಮ್ಮ ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಅವರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.
ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇದೀಗ ಈ ಕನಸು ನೆರವೇರಿದೆ ಎಂದು ಶ್ರೀ ಮಠದ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ನನ್ನ ತಾಯಿ ಮೂಲತ ಕುಂದಾಪುರದವರಾಗಿದ್ದು, ನನ್ನ ತಾಯಿ ಕನ್ನಡತಿ ಎಂದು ಹಲವು ಬಾರಿ ಜ್ಯೂ. ಎನ್ಟಿಆರ್ ಸುದ್ದಿವಾಹಿನಿಗಳ ಸಂದರ್ಶನದಲ್ಲಿ ಹೇಳಿದ್ದರು. ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.