DPL; ಟಿ20 ಪಂದ್ಯದಲ್ಲಿ 308 ರನ್‌, ಬದೋನಿ 165 ರನ್;‌ 6,6,6,6,6,6 ಬಾರಿಸಿದ ಆರ್ಯ| Video


Team Udayavani, Aug 31, 2024, 5:19 PM IST

DPL; ಟಿ20 ಪಂದ್ಯದಲ್ಲಿ 308 ರನ್‌, ಬದೋನಿ 165 ರನ್;‌ 6,6,6,6,6,6 ಬಾರಿಸಿದ ಆರ್ಯ| Video

ಹೊಸದಿಲ್ಲಿ: ಡಿಲ್ಲಿ ಪ್ರೀಮಿಯರ್‌ ಲೀಗ್‌ ಟಿ20 ಟೂರ್ನಮೆಂಟ್‌ ನಲ್ಲಿ ದಾಖಲೆ ನಿರ್ಮಿಸಲಾಗಿದೆ. ಸೌತ್ ಡೆಲ್ಲಿ ಸೂಪರ್‌ಸ್ಟಾರ್ಜ್ ಮತ್ತು ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ನಡುವಿನ ಪಂದ್ಯದಲ್ಲಿ ರನ್‌ ರಾಶಿ ಪೇರಿಸಲಾಗಿದೆ. ಸೌತ್ ದೆಹಲಿ ಸೂಪರ್‌‌ ಸ್ಟಾರ್ಜ್ 20 ಓವರ್‌ ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 308 ಗಳಿಸಿದ್ದು, ಇದು ಟಿ20 ಪಂದ್ಯದಲ್ಲಿ ಗರಿಷ್ಠ ಮೊತ್ತವಾಗಿದೆ.

ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 287/3 ಟ್ವೆಂಟಿ 20 ಪಂದ್ಯವೊಂದರಲ್ಲಿ ಗರಿಷ್ಠವಾಗಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ, ಮಂಗೋಲಿಯಾ ವಿರುದ್ಧ ನೇಪಾಳದ 314/3 ಗರಿಷ್ಠ ಮೊತ್ತವಾಗಿದೆ.

ಇಂದಿನ ಪಂದ್ಯದಲ್ಲಿ ಸ್ಟಾರ್‌ ಆಟಗಾರ ಆಯುಷ್‌ ಬದೋನಿ ಮತ್ತು ಪ್ರಿಯಾನ್ಶ್‌ ಆರ್ಯ ಭರ್ಜರಿಯಾಗಿ ಬ್ಯಾಟ್‌ ಬೀಸಿದರು. ಆಯುಷ್‌ ಬದೋನಿ 300ರ ಸ್ಟ್ರೈಕ್‌ ರೇಟ್‌ ನಲ್ಲಿ ಶತಕ ಬಾರಿಸಿದ್ದಾರೆ. ಕೇವಲ 55 ಎಸೆತಗಳಲ್ಲಿ 165 ರನ್‌ ಗಳಿಸಿದ್ದಾರೆ. ಮತ್ತೊಂದೆಡೆ ಪ್ರಿಯಾನ್ಶ್‌ ಆರ್ಯ 50 ಎಸೆತಗಳಲ್ಲಿ 120 ರನ್‌ ಗಳಿಸಿದರು. ಅಲ್ಲದೆ ಒಂದು ಓವರ್‌ ನಲ್ಲಿ ಆರು ಸಿಕ್ಸರ್‌ ಚಚ್ಚಿ ಮೆರೆದರು.

ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ಬೌಲರ್‌ ಗಳನ್ನು ಮೈದಾನದ ಮೂಲೆ ಮೂಲೆಗೆ ಅಟ್ಟಿದ ಆಯುಷ್‌ ಬದೋನಿ ಬರೋಬ್ಬರಿ 19 ಸಿಕ್ಸರ್‌ ಸಿಡಿಸಿದರು. ಅವರ ಬ್ಯಾಟಿಂಗ್‌ ಎಂಟು ಫೋರ್‌ ಕೂಡಾ ಬಂತು. ಆರ್ಯ ಹತ್ತು ಸಿಕ್ಸರ್‌ ಬಾರಿಸಿದರು.

ಪ್ರಿಯಾನ್ಶ್‌ ಆರ್ಯ ಅವರು ಇನ್ನಿಂಗ್ಸ್‌ ನ 12 ನೇ ಓವರ್‌ ನ ಆರು ಎಸೆತಗಳಲ್ಲಿ ಸಿಕ್ಸರ್‌ ಬಾರಿಸಿ 36 ರನ್ ಗಳಿಸಿದರು.

ಈ ಮೂಲಕ ಅವರು ದೇಶೀಯ ಟಿ20 ಪಂದ್ಯಗಳಲ್ಲಿ ಸಿಕ್ಸ್ ಸಿಕ್ಸರ್ ಬಾರಿಸಿದ ರಾಸ್ ವೈಟ್ಲಿ (2017), ಹಜರತುಲ್ಲಾ ಝಜೈ (2018) ಮತ್ತು ಲಿಯೊ ಕಾರ್ಟರ್ (2020) ಅವರ ವಿಶೇಷ ಕ್ಲಬ್‌ ಗೆ ಸೇರಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವರಾಜ್ ಸಿಂಗ್, ಕೈರನ್ ಪೊಲಾರ್ಡ್ ಮತ್ತು ದೀಪೇಂದ್ರ ಸಿಂಗ್ ಐರಿ (ಎರಡು ಬಾರಿ) ಈ ಅಪರೂಪದ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.