Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ
Team Udayavani, Aug 31, 2024, 5:07 PM IST
ಪುಣೆ: ವೃದ್ಧ ದಂಪತಿಗಳು ತಮ್ಮ ದ್ವಿಚಕ್ರ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ವಡಾಪಾವ್ ತರಲು ಹೋಗಿ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ ಐದು ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರ ಪಾಲಾಗಿದೆ.
ಈ ಘಟನೆ ಕಳೆದ ಗುರುವಾರ (ಆಗಸ್ಟ್ 29) ರಂದು ಮಧ್ಯಾಹ್ನ ನಾಲ್ಕು ಗಂಟೆಯ ಸುಮಾರಿಗೆ ನಡೆದಿದೆ. ವೃದ್ಧ ದಂಪತಿಗಳು ಬ್ಯಾಂಕಿನಲ್ಲಿದ್ದ ತಮ್ಮ ಆಭರಣಗಳನ್ನು ಪಡೆದುಕೊಂಡು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ದಂಪತಿಗೆ ವಡಾಪಾವ್ ತಿನ್ನುವ ಆಸೆಯಾಗಿದೆ ಅದರಂತೆ ದಂಪತಿ ಹೋಟೆಲ್ ಬಳಿ ತಮ್ಮ ಸ್ಕೂಟಿ ನಿಲ್ಲಿಸಿ ಪತಿ ವಡಾಪಾವ್ ತರಲು ಹೋಗಿದ್ದಾರೆ ಆದರೆ ಪತ್ನಿ ಸ್ಕೂಟಿ ಬಳಿಯೇ ನಿಂತಿದ್ದು ಆದರೆ ಇದನ್ನು ಗಮನಿಸಿದ ಇಬ್ಬರು ಕಳ್ಳರ ತಂಡದಲ್ಲಿ ಓರ್ವ ಸ್ಕೂಟಿ ಬಳಿ ಹೊಂಚು ಹಾಕುತ್ತಿದ್ದ ಆದರೆ ಇದು ವೃದ್ಧ ಮಹಿಳೆಯ ಗಮನಕ್ಕೆ ಬಂದಿಲ್ಲ ಅಷ್ಟೋತ್ತಿಗಾಗಲೇ ಕಳ್ಳರ ತಂಡದಲ್ಲಿದ್ದ ಇನ್ನೋರ್ವ ಬೈಕಿನಲ್ಲಿ ಬಂದು ವೃದ್ಧ ಮಹಿಳೆಯ ಬಳಿ ಹಣ ಬಿದ್ದಿದೆ ಎಂದು ಹೇಳುತ್ತಾನೆ ಯುವಕನ ಮಾತು ನಂಬಿ ಸ್ಕೂಟಿಯ ಹಿಂಬದಿಗೆ ಮಹಿಳೆ ಹೋದದ್ದನ್ನು ಗಮನಿಸುತ್ತಿದ್ದ ಇನ್ನೋರ್ವ ಕೂಡಲೇ ಸ್ಕೂಟಿಯ ಎದುರು ಇರಿಸಿದ್ದ ಚಿನ್ನಾಭರಣಗಳ ಬ್ಯಾಗ್ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಇತ್ತ ಕಳ್ಳ ಬ್ಯಾಗ್ ಎಗರಿಸುತ್ತಿರುವುದನ್ನು ಗಮನಿಸಿದ ಮಹಿಳೆ ಬೊಬ್ಬೆ ಹೊಡೆದು ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಳ್ಳರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ.
ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
Pune Crime : वडापावच्या नादात महिलेनं गमावले तब्बल १४ लाख रुपयांचे दागिने; पुण्यातील घटनेचा व्हिडिओ व्हायरल pic.twitter.com/oqLmO9YOhn
— Hindustan Times Marathi (@htmarathi) August 31, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.