Farmers Protest: ರೈತ ಪ್ರತಿಭಟನಾಕಾರರೊಂದಿಗೆ ತಮ್ಮ ಮಗಳಂತೆ ನಿಲ್ಲುವೆ: ವಿನೇಶ್‌ ಪೋಗಟ್

ಶಂಭು ಗಡಿಯಲ್ಲಿ 200ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಸಂಸದೆ ಕಂಗನಾ ರಣಾವತ್ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

Team Udayavani, Aug 31, 2024, 6:53 PM IST

Vine2

ಹರಿಯಾಣ: ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಗೆ ಆಗ್ರಹಿಸಿ ರೈತರು ಫೆ.13ರಿಂದ ಶಂಭು ಗಡಿಯಲ್ಲಿ ನಿರಂತರ ನಡೆಸುತ್ತಿರುವ ಪ್ರತಿಭಟನೆಯು  ಶನಿವಾರ  200ನೇ ದಿನಕ್ಕೆ ಕಾಲಿಟ್ಟಿರುವುದರಿಂದ ಈ ಬೃಹತ್ ಸಭೆಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಪದಕ ವಂಚಿತೆ, ಕುಸ್ತಿಪಟು ವಿನೇಶ್ ಪೋಗಟ್  ಭಾಗಿಯಾಗಿ ರೈತರಿಗೆ ಬೆಂಬಲ ಸೂಚಿಸಿದರು.

ನಿಮ್ಮ ಜೊತೆ ಮಗಳಂತೆ ನಿಲ್ಲುವೆ ಎಂದ ಪೋಗಟ್
ಫೆ. 13ರಿಂದ ರೈತರು ದೆಹಲಿಗೆ ಪ್ರವೇಶಿಸಲು ತಡೆದ ನಂತರ ರೈತರು ಶಂಭು ಗಡಿಯಲ್ಲಿ ಠಿಕಾಣಿ ಹೂಡಿ ಸಭೆ ನಡೆಸುತ್ತಿದ್ದಾರೆ.    ಶಂಭು ಗಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿನೇಶ್ ಪೋಗಟ್ ರೈತರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ರೈತರು ಬಹಳ ಸಮಯದಿಂದ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಅವರ ಶಕ್ತಿ ಮತ್ತು ದೃಢತೆ ಕಡಿಮೆಯಾಗಿಲ್ಲ ಎಂದರು. ರೈತ ಕುಟುಂಬದಲ್ಲಿ ಜನಿಸಿರುವ ಹೆಮ್ಮೆಯನ್ನು ಹಂಚಿಕೊಂಡ ಅವರು ಪ್ರತಿಭಟನಾಕಾರರ ಜೊತೆ ತಮ್ಮ ಮಗಳಂತೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ನಿಮ್ಮ ಹಕ್ಕುಗಳ ಪಡೆಯದೆ ಹಿಂತಿರುಗಬೇಡಿ
‘ನಾನು ರೈತ ಕುಟುಂಬದಲ್ಲಿ ಹುಟ್ಟಿದ್ದು ನನ್ನ ಅದೃಷ್ಟ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು ಏಕೆಂದರೆ ಯಾರೂ ನಮಗಾಗಿ ಬರುವುದಿಲ್ಲ. ನಿಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ನಿಮ್ಮ ಹಕ್ಕುಗಳನ್ನು ಪಡೆಯದೆ ಹಿಂತಿರುಗಬೇಡಿ’ ಎಂದು ಪೋಗಟ್ ಹೇಳಿದರು.

ಕೇಂದ್ರ ನಮ್ಮ ಸ್ಥೈರ್ಯ  ಪರೀಕ್ಷಿಸುತ್ತಿದೆ
ಪ್ರತಿಭಟನೆ ಶಾಂತಿಯುತವಾಗಿದ್ದರೂ ಅತ್ಯಂತ ತೀವ್ರತೆಯಿಂದ ನಡೆಸಲಾಗುತ್ತಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. ಕೇಂದ್ರವು ನಮ್ಮ ಸ್ಥೈರ್ಯ ಪರೀಕ್ಷಿಸುತ್ತಿದೆ. ಇನ್ನೂ ಕೂಡ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದರು. ‘ನಾವು ಮತ್ತೊಮ್ಮೆ ನಮ್ಮ ಬೇಡಿಕೆಗಳ ಸರ್ಕಾರಕ್ಕೆ ಸಲ್ಲಿಸುತ್ತೇವೆ ಮತ್ತು ಹೊಸ ಘೋಷಣೆಗಳ ಕೂಡ ಮಾಡಲಾಗುವುದು’ ಎಂದು ಪಂಧೇರ್ ತಿಳಿಸಿದ್ದಾರೆ.  ಪ್ರತಿಭಟನೆಯು 200 ದಿನಗಳ ಪೂರ್ಣಗೊಳಿಸಿರುವುದು ಮಹತ್ವದ ಮೈಲುಗಲ್ಲು ಎಂದು  ಒತ್ತಿ ಹೇಳಿದರು.

ರಣಾವತ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
ಬಾಲಿವುಡ್ ನಟಿ ಹಾಗೂ ಸಂಸದೆ  (MP) ಕಂಗನಾ ರಣಾವತ್ ವಿರುದ್ಧ ಕಠಿಣ ಕ್ರಮಕ್ಕೆ ರೈತರು ಒತ್ತಾಯಿಸಿದ್ದಾರೆ. ರಣಾವತ್‌ ಅವರ ಹೇಳಿಕೆಗಳು ಈ ಹಿಂದೆ ರೈತ ಸಮುದಾಯದಲ್ಲಿ ವಿವಾದ ಮತ್ತು ವಿರೋಧಕ್ಕೆ ಕಾರಣವಾಗಿದ್ದವು. ಕಂಗನಾ ವಿರುದ್ಧ ದೃಢವಾದ ನಿಲುವು ತೆಗೆದುಕೊಳ್ಳಲು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಒತ್ತಾಯಿಸಿದರು. ಮುಂಬರುವ ಹರಿಯಾಣ ಚುನಾವಣೆಗೆ ರೈತರು ತಮ್ಮ ಕಾರ್ಯತಂತ್ರ  ಬಹಿರಂಗಪಡಿಸುವ ಸುಳಿವು ನೀಡಿದ್ದಾರೆ. ಅವರು ಮುಂದಿನ ದಿನಗಳಲ್ಲಿ ತಮ್ಮ ನಿಲುವುಗಳ ಘೋಷಿಸಲು ಯೋಜಿಸಿದ್ದಾರೆ. ರಾಜ್ಯದ ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ಉದ್ದೇಶವನ್ನು ಒತ್ತಿಹೇಳಿದ್ದಾರೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.