RenukaSwamy Case: ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ
Team Udayavani, Aug 31, 2024, 6:07 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(RenukaSwamy Case) ಎ1 ಆಗಿರುವ ಪವಿತ್ರಾ ಗೌಡ(Pavithra Gowda) ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರ (ಆ.31ರಂದು) ನಡೆದಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಹಾಗೂ ಅನುಕುಮಾರ್(ಎ7) ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.
ಜಾಮೀನು ಸಂಬಂಧ ಅರ್ಜಿಯನ್ನು ಈ ಹಿಂದೆ ಆಗಸ್ಟ್ 28ರಂದು ವಿಚಾರಣೆ ನಡೆಸಿ, ಶನಿವಾರ ಆದೇಶವನ್ನು ಕಾಯ್ದಿರಿಸಲಾಗಿತ್ತು. ಅದರಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಪವಿತ್ರಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು.
ಅರ್ಜಿ ವಜಾಗೊಳ್ಳುವ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣ ಎ1 ಪವಿತ್ರಾ ಗೌಡ ಅವರಿಗೆ ಜೈಲೇ ಗತಿಯಾಗಿದೆ.
ಬಹುತೇಕ ಎರಡು ತಿಂಗಳಿನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎ2 ದರ್ಶನ್ ಅವರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಪೊಲೀಸರಿಗೆ ಪ್ರಕರಣ ಸಂಬಂಧ ಮಹತ್ವದ ಸಾಕ್ಷ್ಯಗಳು ಲಭಿಸಿದ್ದು, ಶೀಘ್ರದಲ್ಲೇ 4 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಲು ಖಾಕಿ ಸಜ್ಜಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.