Mollywood #MeToo; ಶಾಸಕ ಮುಖೇಶ್ ರಾಜೀನಾಮೆ ನೀಡಬೇಕಾಗಿಲ್ಲ:ಆಡಳಿತಾರೂಢ ಸಿಪಿಐ(ಎಂ)

ನಾನು ಯಾವುದೇ ''ಪವರ್ ಗ್ರೂಪ್''ನ ಭಾಗವಾಗಿಲ್ಲ ಎಂದ ಸೂಪರ್ ಸ್ಟಾರ್ ಮೋಹನ್ ಲಾಲ್

Team Udayavani, Aug 31, 2024, 6:57 PM IST

1-molly

ತಿರುವನಂತಪುರಂ: ನಟ, ಆಡಳಿತಾರೂಢ ಸಿಪಿಐ(ಎಂ) ಶಾಸಕ ಎಂ. ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂಬ ಕಾರಣಕ್ಕೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೇರಳ ಸರಕಾರ ಶನಿವಾರ ಹೇಳಿದೆ.

ಪಕ್ಷದ ರಾಜ್ಯ ಸಮಿತಿ ಸಭೆಯ ನಂತರ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದರು.

ಮುಖೇಶ್ ಅವರ ವಿರುದ್ಧದ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಚಲನಚಿತ್ರ ನಿರ್ಮಾಣ ನೀತಿ ಸಮಿತಿಯಿಂದ ತೆಗೆದುಹಾಕಲು ಪಕ್ಷ ನಿರ್ಧರಿಸಿದೆ. ಆರೋಪಿತ ಶಾಸಕನೊಬ್ಬ ನೈತಿಕ ನೆಲೆಯಲ್ಲಿ ರಾಜೀನಾಮೆ ನೀಡಿದರೆ, ಒಂದು ವೇಳೆ ಅವರು ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಅದೇ ಸ್ಥಾನಕ್ಕೆ ಹಿಂತಿರುಗಿ ನೀಡಲಾಗುತ್ತದೆಯೇ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಶ್ನಿಸಿದರು.
ದೇಶದಲ್ಲಿ 16 ಸಂಸದರು ಮತ್ತು 135 ಶಾಸಕರು ಮಹಿಳೆಯರ ವಿರುದ್ಧ ಅಪರಾಧ ಎಸಗಿದ ಆರೋಪ ಹೊತ್ತಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಗೋವಿಂದನ್ ಹೇಳಿದರು.

ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟ/ ಶಾಸಕ ಮುಖೇಶ್ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವರ್ಷಗಳ ಹಿಂದೆ ಮುಖೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆಕೆ ಆರೋಪಿಸಿದ್ದಾರೆ.

ನಾನು ಯಾವುದೇ ಪವರ್ ಗ್ರೂಪ್ ನ ಭಾಗವಾಗಿಲ್ಲ: ಮೋಹನ್ ಲಾಲ್

ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದ ನಂತರ AMMA (Association of Malayalam Movie Artists) ನ ಮಾಜಿ ಅಧ್ಯಕ್ಷ ಮೋಹನ್‌ಲಾಲ್ ಅವರು ಶನಿವಾರ ಮೊದಲ ಬಾರಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ನಾನು ಚಿತ್ರರಂಗದ ಯಾವುದೇ ಶಕ್ತಿ ಗುಂಪಿನ ಭಾಗವಾಗಿಲ್ಲ ಮತ್ತು ಅಂತಹ ಯಾವುದೇ ಗುಂಪಿನ ಅಸ್ತಿತ್ವದ ಬಗ್ಗೆ ನನಗೆ ತಿಳಿದಿಲ್ಲ ಎಂದು ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಹೇಳಿಕೆ ನೀಡಿದ್ದಾರೆ.

ಇಡೀ ಮಲಯಾಳ ಚಿತ್ರರಂಗ ಸ್ತ್ರೀಶೋಷಕವಲ್ಲ. ಚಿತ್ರರಂಗ­ವನ್ನು ಹಾಳು ಮಾಡಬೇಡಿ ಎಂದು ಹೇಳಿ­ದ್ದಾರೆ. ಎಲ್ಲ ವಿಷಯಗಳ ಬಗ್ಗೆ AMMA ಮಾತನಾಡಲು ಸಾಧ್ಯವಿಲ್ಲ. ತಪ್ಪಿತ­ಸ್ಥರಿಗೆ ಶಿಕ್ಷೆಯಾಗಬೇಕು’ ಎಂದರು.

ಕಿರುಕುಳ ಪ್ರಕರಣದಲ್ಲಿ ಅಮ್ಮ ಮೇಲೆ ಮಾತ್ರ ಗಮನವನ್ನು ಕೇಂದ್ರೀಕರಿಸಬೇಡಿ. ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಚಿತ್ರರಂಗವನ್ನು ನಾಶ ಮಾಡಬೇಡಿ. ನಾವು ಹೇಮಾ ಸಮಿತಿ ವರದಿಯನ್ನು ಸ್ವಾಗತಿಸುತ್ತೇವೆ. ರಾಜ್ಯ ಸರಕಾರ ಈ ವರದಿಯನ್ನು ಬಿಡುಗಡೆ ಮಾಡಿರು­ವುದು ಸರಿಯಿದೆ. ಹಲವರು ಇದರಲ್ಲಿ ಭಾಗಿಯಾಗಿರಬಹುದು. ಆದರೆ ಇದ­ಕ್ಕಾಗಿ ಎಲ್ಲ ನಟರನ್ನೂ ದೂಷಿಸುವುದು ಸರಿಯಲ್ಲ ಎಂದರು.

ಮಲಯಾಳಂ ಚಿತ್ರರಂಗವು ಸಾವಿರಾರು ಜನರು ಕೆಲಸ ಮಾಡುವ ದೊಡ್ಡ ಉದ್ಯಮವಾಗಿದೆ ಮತ್ತು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ  ದಲ್ಲಿ ಉದ್ಭವಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ನಂತರ ಅನೇಕ ಉನ್ನತ ಮಲಯಾಳಂ ಚಿತ್ರರಂಗದ ವ್ಯಕ್ತಿಗಳ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.