Udupi: ಮಳೆಹಾನಿ ನಷ್ಟ 234 ಕೋ.ರೂ. ಸರಕಾರದಿಂದ ಬಂದಿದ್ದು ಸದ್ಯ ಶೂನ್ಯ!

ವಿವಿಧ ಇಲಾಖೆಯಿಂದ ಮಾಹಿತಿ ಪಡೆದು, ಸಮೀಕರಿಸಿ ಸಮಗ್ರ ವರದಿ ಸಿದ್ಧಪಡಿಸಿ ಸರಕಾರಕ್ಕೆ ರವಾನೆ

Team Udayavani, Sep 1, 2024, 6:50 AM IST

Rajatadri

ಉಡುಪಿ: ಜಿಲ್ಲೆಯಲ್ಲಿ ಜೂನ್‌1ರಿಂದ ಆ.29ರ ವರೆಗೆ ಸುರಿದ ಗಾಳಿಮಳೆ, ಇದರಿಂದ ಉಂಟಾದ ನೆರೆಯಿಂದ ಮನೆ, ರಸ್ತೆ, ಟ್ರಾನ್ಸ್‌ಫಾರ್ಮರ್‌ ಹಾನಿ ಸಹಿತ ಬರೋಬರಿ 234.58 ಕೋ.ರೂ. ನಷ್ಟವಾಗಿದೆ. ಆದರೆ ರಾಜ್ಯ ಸರಕಾರದಿಂದ ಈವರೆಗೂ ನಯಾಪೈಸೆ ಪರಿಹಾರ ಬಂದಿಲ್ಲ. ಜಿಲ್ಲಾಧಿಕಾರಿ/ ತಹಶೀಲ್ದಾರ್‌ ಪಿ.ಡಿ. ಖಾತೆಯಲ್ಲಿರುವ ಸುಮಾರು 16 ಕೋ.ರೂ.ಗಳನ್ನು ತುರ್ತು ಪರಿಹಾರ ಕಾರ್ಯಕ್ಕೆ ಮಾತ್ರ ಬಳಸಲಾಗುತ್ತಿದೆ.

ಜಿಲ್ಲೆಯ 7 ತಾಲೂಕಿನಲ್ಲಿ ಎರಡು ತಿಂಗಳಲ್ಲಿ ಗಾಳಿ ಮಳೆಯಿಂದ 38 ಮನೆ ಸಂಪೂರ್ಣ ಹಾನಿಯಾಗಿದ್ದು, 796 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪೂರ್ಣ ಹಾನಿಯಾದ ಅಥವಾ ಭಾಗಶಃ ಹಾನಿಯಾದ ಮನೆಗಳ ವರದಿಯನ್ನು ಸ್ಥಳೀಯ ಪಂಚಾಯತಿ, ತಹಶೀಲ್ದಾರ್‌ ಮೂಲಕ ರಾಜ್ಯ ಕಚೇರಿ ತಲುಪಿದ್ದರೂ ಪರಿಹಾರ ಇನ್ನೂ ಬಂದಿಲ್ಲ. ಗುಡ್ಡ ಕುಸಿತ, ಸಿಡಿಲು ಬಿಡಿದು 3 ಜೀವ ಹಾನಿಯಾಗಿದ್ದು, ಪ್ರತಿ ಕುಟುಂಬಕ್ಕೂ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. 5 ಜಾನುವಾರು ಜೀವಹಾನಿಯಾಗಿದ್ದು, ಒಟ್ಟಾರೆ 1.55 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ.

ಎಷ್ಟೆಷ್ಟು ಹಾನಿ?
ರಾಜ್ಯ ಹೆದ್ದಾರಿ, ನಗರ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು, ಗ್ರಾಮೀಣ ರಸ್ತೆಗಳು ಸೇರಿ 1,457.36 ಕಿ.ಮೀ. ರಸ್ತೆಗಳು ಜಿಲ್ಲೆಯಲ್ಲಿ ಹಾಳಾಗಿದೆ. ಇದರಿಂದಲೇ ಸುಮಾರು 171.62 ಕೋ.ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಿಂಡಿ ಅಣೆಕಟ್ಟು, ಸೇತುವೆ, ಮೋರಿ ಇತ್ಯಾದಿ ಸೇರಿ 132 ಹಾಳಾಗಿದ್ದು 53.25 ಕೋ.ರೂ. ನಷ್ಟವಾಗಿದೆ.

4,125 ವಿದ್ಯುತ್‌ ಕಂಬ, 2 ಟ್ರಾನ್ಸ್‌ಫಾರ್ಮರ್‌, 72.35 ಕಿ.ಮೀ. ವಿದ್ಯುತ್‌ ಲೇನ್‌ ಹಾಳಾಗಿ ಸುಮಾರು 7 ಕೋ.ರೂ. ನಷ್ಟವಾಗಿದೆ. ಪ್ರಾಥಮಿಕ ಶಾಲೆ, ಸರಕಾರಿ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕಟ್ಟಡ ಸೇರಿ 116 ಕಟ್ಟಡಕ್ಕೆ ಹಾನಿಯಾಗಿದ್ದು, 2.16 ಕೋ.ರೂ. ನಷ್ಟ ಅಂದಾಜಿಸಲಾಗಿದೆ.

ವರದಿ ರಾಜ್ಯಕ್ಕೆ ಸಲ್ಲಿಕೆಯಾಗಿದೆ
ಮಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿ ಸಂಪೂರ್ಣ ದಾಖಲೆ ಆಧಾರದಲ್ಲಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದೇವೆ. ಸರಕಾರದಿಂದ ಅನುದಾನವನ್ನು ಕೋರಲಾಗಿದೆ. ವಿವಿಧ ಇಲಾಖೆಯಿಂದ ಮಾಹಿತಿ ಪಡೆದು, ಸಮೀಕರಿಸಿ ಸಮಗ್ರ ವರದಿ ಸಿದ್ಧಪಡಿಸಿ ಕಳುಹಿಸಿದ್ದೇವೆ. ಅಲ್ಲದೆ ಆಯಾ ದಿನದ ವರದಿಯನ್ನು ನೀಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೃಷಿ, ತೋಟಗಾರಿಕೆ ಬೆಳೆ ಹಾನಿ
ಮುಂಗಾರು ಅವಧಿಯಲ್ಲಿ ಜಿಲ್ಲೆಯ ಭತ್ತವೇ ಪ್ರಧಾನ ಬೆಳೆ ಆಗಿರುವುದರಿಂದ ಎಲ್ಲ ತಾಲೂಕುಗಳಲ್ಲೂ ಭತ್ತದ ಬೆಳೆಗೆ ಹಾನಿಯಾಗಿದೆ. ಕುಂದಾಪುರದಲ್ಲಿ 155 ಹೆಕ್ಟೇರ್‌, ಬೈಂದೂರಿನಲ್ಲಿ 100 ಹೆ., ಬ್ರಹ್ಮಾವರದಲ್ಲಿ 171 ಹೆ., ಉಡುಪಿಯಲ್ಲಿ 47 ಹೆ., ಕಾರ್ಕಳದಲ್ಲಿ 10 ಹೆ., ಕಾಪುವಿನದಲ್ಲಿ 18 ಹೆ. ಹಾಗೂ ಹೆಬ್ರಿಯಲ್ಲಿ 14 ಹೆ.ಸೇರಿ ಜಿಲ್ಲೆಯಲ್ಲಿ 518.74 ಹೆಕ್ಟೇರ್‌ ಬೆಳೆ ಕೃಷಿ ಹಾನಿಯಾಗಿದೆ. 145 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಇದರಲ್ಲಿ ಅಡಿಕೆ ಪ್ರಧಾನವಾಗಿದೆ.

“ಜಿಲ್ಲೆಯಲ್ಲಿ ಸುಮಾರು 234 ಕೋ.ರೂ.ಗಳಷ್ಟು ಮಳೆಹಾನಿ ಅಂದಾಜಿಸಲಾಗಿದೆ. ಇದರ ಸಮಗ್ರ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದೇವೆ ಮತ್ತು ಅನುದಾನ ಒದಗಿಸಲು ಕೋರಿದ್ದೇವೆ. ಇಲ್ಲಿಯವರೆಗೆ ಅನುದಾನ ಬಂದಿಲ್ಲ. ತುರ್ತು ಅಗತ್ಯಗಳಿಗೆ ಪಿ.ಡಿ. ಖಾತೆಯ ಅನುದಾನವನ್ನು ನಿಯಮಾನುಸಾರ ಬಳಸುತ್ತಿದ್ದೇವೆ.” –ಡಾ| ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.