Daily Horoscope: ವ್ಯವಹಾರಸ್ಥರಿಗೆ ನಿರಾಳ ಭಾವ, ಉದ್ಯೋಗ ಹುಡುಕುವವರಿಗೆ ಶುಭಸೂಚನೆ
Team Udayavani, Sep 1, 2024, 7:25 AM IST
ಮೇಷ: ವಿರಾಮವಾದರೂ ದಿನವಿಡೀ ಚಟುವಟಿಕೆಗಳು. ನಾನಾಬಗೆಯ ವ್ಯವಹಾರಗಳ ಧಾವಂತ. ಮನೆಯಲ್ಲಿ ಸಂಭ್ರಮದ ವಾತಾವರಣ. ಹತ್ತಿರದ ದೇವಾಲಯ, ವೃದ್ಧಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣೆ, ಮಕ್ಕಳಿಗೆ ಸಮಾಧಾನದ ದಿನ.
ವೃಷಭ: ವಿಶಿಷ್ಟ ವ್ಯಕ್ತಿಗಳ ಪರಿಚಯ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಅನುಭವ. ಸಂಸ್ಥೆಯ ಹೊಸ ನಿವೇಶನದಲ್ಲಿ ಕಟ್ಟಡದ ಕೆಲಸ ವೀಕ್ಷಣೆ ಅನಾಥಾಶ್ರಮ, ಆಸ್ಪತ್ರೆಗಳಿಗೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.
ಮಿಥುನ: ಮನೆಯಲ್ಲಿ ವಿರಾಮದ ಭಾವ. ಬಾಕಿಯುಳಿದಿರುವ ಕೆಲಸಗಳನ್ನು ನಾಳೆ ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಭಾವ. ಉದ್ಯೋಗ ಹುಡುಕುವವರಿಗೆ ಶುಭಸೂಚನೆ. ಹಿರಿಯರಿಗೆ, ಗೃಹಿಣಿ, ಮಕ್ಕಳಿಗೆ ಸಮಾಧಾನದ ವಾತಾವರಣ.
ಕರ್ಕಾಟಕ: ದೇವತಾರಾಧನೆಯಿಂದ ಮನೆಯಲ್ಲಿ ಶಾಂತಿ. ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರ ಕ್ಷೇತ್ರದ ಮಿತ್ರರ ಸಂದರ್ಶನ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶಗಳು ಗೋಚರ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ.
ಸಿಂಹ: ವ್ಯವಹಾರ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು ಮೊದಲಾದವರಿಗೆ ಕೆಲಸದ ಒತ್ತಡ.
ಕನ್ಯಾ: ಸಹೋದ್ಯೋಗಿ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಮೂರ್ತರೂಪ.
ತುಲಾ: ಹಿರಿಯ ಆತ್ಮೀಯರಿಂದ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.
ವೃಶ್ಚಿಕ: ನೆಮ್ಮದಿಯ ಜೀವನಕ್ಕೆಕೊರತೆಯಾಗದು. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.
ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಸಮಾಜಸೇವೆ ಹಾಗೂ ಪರಿಸರ ರಕ್ಷಣೆ ಚಟುವಟಿಕೆಗಳಲ್ಲಿ ಮಗ್ನತೆ.
ಮಕರ: ಸಾವಧಾನದಿಂದ ಮುಂದುವರಿದರೆ ಕಾರ್ಯಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಪೂರ್ವ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ.ಹಳೆಯ ಒಡನಾಡಿಗಳ ಭೇಟಿ.
ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು.ಗೃಹಿಣಿಯರಿಗೆ ಸೊÌàದ್ಯೋಗದಲ್ಲಿ ಮುನ್ನಡೆ.
ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ ನೀಡಿಕೆ. ಗಳಿಕೆಯ ಅನ್ಯಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.