Road Mishap: ಐಟಿಐ ಗೇಟ್ ಬಳಿ ಸರಣಿ ಅಪಘಾತ; ಬೈಕ್ ಸವಾರ ಬಲಿ, 5 ವಾಹನ ಜಖಂ
Team Udayavani, Sep 1, 2024, 11:30 AM IST
ಬೆಂಗಳೂರು: ಬಿಎಂಟಿಸಿ ಬಸ್ ಸರಣಿ ಅಪಘಾತ ಎಸಗಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಬುಲೆಟ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯ ಐಟಿಐ ಗೇಟ್ ಬಳಿ ನಡೆದಿದೆ.
ಮೈಸೂರು ಮೂಲದ ಮೃತ ಸುಪ್ರಿತ್ (33) ಮೃತ ಸವಾರ. ಮಾಲ್ ಆಫ್ ಏಷಿಯಾದಲ್ಲಿ ಕೆಲಸ ಮಾಡುತ್ತಿದ್ದ ಸುಪ್ರಿತ್, ಕೆಲ ವರ್ಷಗಳಿಂದ ಕೆ.ಆರ್. ಪುರದ ನಿಸರ್ಗ ಬಡಾವಣೆಯಲ್ಲಿ ಪತ್ನಿ ಮತ್ತು ಮಗಳೊಂದಿಗೆ ವಾಸವಾಗಿದ್ದರು.
ಸುಪ್ರಿತ್, ಶುಕ್ರವಾರ ರಾತ್ರಿ ರಾತ್ರಿ 9.45ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದು, ಹಳೇ ಮದ್ರಾಸ್ ರಸ್ತೆಯ ಐಟಿಐ ಗೇಟ್ ಮುಂಭಾಗದ ರಸ್ತೆ ಬದಿ ಬುಲೆಟ್ ನಿಲ್ಲಿಸಿಕೊಂಡು ನಿಂತಿದ್ದರು. ಅದೇ ವೇಳೆ ಬಿಎಂಟಿಸಿ ಬಸ್ ಚಾಲಕ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಎಂ.ಎಂ.ಟೆಂಪಲ್ ಕಡೆಯಿಂದ ಕೆ.ಆರ್.ಪುರ ಕಡೆಗೆ ಬಂದು, ನಿಂತಿದ್ದ ಸುಪ್ರಿತ್ ಬುಲೆಟ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೆ, ಅದೇ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ವಾಹನಕ್ಕೆ ಬುಲೆಟ್ ಸಮೇತ ಅಪ್ಪಳಿಸಿದೆ. ಪರಿಣಾಮ ತೀವ್ರವಾಗಿ ಗಾಯ ಗೊಂಡಿದ್ದ ಸುಪ್ರಿತ್ನನ್ನು ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸುಪ್ರಿತ್ ಮೃತಪಟ್ಟಿದ್ದಾರೆ. ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಅಲ್ಲದೆ, ಘಟನೆಯಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ, ಟ್ಯಾಂಕರ್, ಬುಲೆಟ್, ಒಂದು ಬಿಎಂಟಿಸಿ ಬಸ್ ಹಾಗೂ ವೋಲ್ವೋ ಬಸ್ ಕೂಡ ಹಾನಿಗೊಂಡಿವೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಕೆ.ಆರ್. ಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.