Mollywood: ಲೈಂಗಿಕ ಕಿರುಕುಳ ಆರೋಪವನ್ನುಅಲ್ಲಗಳೆದ ಮಾಲಿವುಡ್‌ ನಟ ಜಯಸೂರ್ಯ

ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಚಲಿಸುತ್ತದೆ.. ಎಂದ ನಟ

Team Udayavani, Sep 1, 2024, 1:29 PM IST

Mollywood: ಲೈಂಗಿಕ ಕಿರುಕುಳ ಆರೋಪವನ್ನುಅಲ್ಲಗಳೆದ ಮಾಲಿವುಡ್‌ ನಟ ಜಯಸೂರ್ಯ

ತಿರುವನಂತಪುರಂ: ಹೇಮಾ ಸಮಿತಿ ವರದಿಯ (Hema Committee Report) ಸಲ್ಲಿಕೆಯಾದ ಬಳಿಕ ಮಾಲಿವುಡ್‌ನ(Mollywood) ಕೆಲ ಖ್ಯಾತ ಕಲಾವಿದರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.

ಮಹಿಳಾ ಕಲಾವಿದರ ಮೇಲೆ ನಡೆದಿದ್ದ ಒಂದೊಂದೇ ಕೃತ್ಯಗಳು ಬೆಳಕಿಗೆ ಬರುತ್ತಿದೆ. ಈ ಹಿಂದೆ ತಮ್ಮ ಮೇಲಾದ ಕಿರುಕುಳ ಹಾಗೂ ದೌರ್ಜನ್ಯದ ಬಗ್ಗೆ ನಟಿಯರು ಬಹಿರಂಗವಾಗಿ ಹೇಳಿಕೆಯನ್ನು ನೀಡಿ, ಆರೋಪವನ್ನು ಮಾಡುತ್ತಿದ್ದಾರೆ.

ಇತ್ತೀಚೆಗೆ ಮಲಯಾಳಂ ನಟಿ ಮಿನು ಮುನೀರ್ (Minu Muneer) ತನ್ನ ಸಹ ನಟರು ಮತ್ತು ತಂತ್ರಜ್ಞರ ವಿರುದ್ಧ ಆರೋಪಗಳನ್ನು ಮಾಡಿದ್ದು, ಪ್ರಾಜೆಕ್ಟ್‌ಗಾಗಿ ಕೆಲಸ ಮಾಡುವಾಗ ಮೌಖಿಕ ಮತ್ತು ದೈಹಿಕ ನಿಂದನೆಯನ್ನು ಎದುರಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

ನಟಿಯ ಪೋಸ್ಟ್‌ ನಲ್ಲಿ ಏನಿದೆ?:

“ನಾನು ಅನುಭವಿಸಿದ ದೈಹಿಕ ಮತ್ತು ಮೌಖಿಕ ನಿಂದನೆಯ ಘಟನೆಗಳ ಬಗ್ಗೆ ಬರೆಯುತ್ತಿದ್ದೇನೆ. ನಾನು ಇವರುಗಳ ಕೈಯಲ್ಲಿ ಬಳಲುತ್ತಿದ್ದೆ, ನಟ ಮುಕೇಶ್‌, ಮಣಿಯನ್ ಪಿಳ್ಳ ರಾಜು, ನಟ ಜಯಸೂರ್ಯ, ಚಂದ್ರಶೇಖರನ್, ಮಲಯಾಳಂ ಚಲನಚಿತ್ರೋದ್ಯಮದ ಪ್ರೊಡಕ್ಷನ್‌ ಕಂಟ್ರೋಲರ್ ನೋಬಲ್ ಮತ್ತು ವಿಚು” ಎನ್ನುವವರು ತಮಗೆ ದೈಹಿಕ ಹಾಗೂ ಮೌಖಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಅವರು ಫೋಟೋಗಳ ಸಮೇತ ಪೋಸ್ಟ್‌ ಹಾಕಿ ಆರೋಪಿಸಿದ್ದರು.

ಈ ಬಗ್ಗೆ ನಟ ಜಯಸೂರ್ಯ(Jayasurya) ಅವರು ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ತನ್ನ ಮೇಲೆ ಸುಳ್ಳು ಆರೋಪವನ್ನು ಮಾಡಿರುವುದಾಗಿ ಹೇಳಿದ್ದಾರೆ.

ಭಾನುವಾರ (ಸೆ.1 ರಂದು) ನಟ ಜಯಸೂರ್ಯ ಅವರು ತನ್ನ 46ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

“ಇಂದು ನನ್ನ ಜನ್ಮದಿನದಂದು ನನಗೆ ಶುಭ ಹಾರೈಸಿದ ನಿಮ್ಮೆಲ್ಲರಿಗೂ ಎಲ್ಲರಿಗೂ ಧನ್ಯವಾದಗಳು. ನನ್ನ ವೈಯಕ್ತಿಕ ಬದ್ಧತೆಗಳಿಂದಾಗಿ, ನಾನು ನನ್ನ ಕುಟುಂಬ ಕಳೆದ ಒಂದು ತಿಂಗಳಿನಿಂದ ಅಮೆರಿಕದಲ್ಲಿ ಇದ್ದೇವೆ. ಈ ಸಮಯದಲ್ಲಿ ನನ್ನ ವಿರುದ್ಧ ಲೈಂಗಿಕ ಕಿರುಕುಳದ ಎರಡು ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಇದು ನನ್ನನ್ನು, ನನ್ನ ಕುಟುಂಬವನ್ನು ಮತ್ತು ನನ್ನ ಆತ್ಮೀಯರಿಗೆ ತುಂಬಾ ನೋವು ತಂದಿದೆ” ಎಂದು ಹೇಳಿದ್ದಾರೆ.

“ನಾನು ಇದನ್ನು ಕಾನೂನುಬದ್ಧವಾಗಿ ಮುಂದುವರಿಸಲು ನಿರ್ಧರಿಸಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಾನೂನು ತಂಡವು ಉಳಿದ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತದೆ. ಆತ್ಮಸಾಕ್ಷಿಯ ಕೊರತೆಯಿರುವ ಯಾರಿಗಾದರೂ ಸುಳ್ಳು ಆರೋಪಗಳನ್ನು ಮಾಡುವುದು ಸುಲಭ. ಕಿರುಕುಳದ ಸುಳ್ಳು ಆರೋಪವನ್ನು ಎದುರಿಸುವುದು ಕಿರುಕುಳದಂತೆಯೇ ನೋವಿನಿಂದ ಕೂಡಿದೆ ಎಂದು ಒಬ್ಬರು ಅರಿತುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಚಲಿಸುತ್ತದೆ, ಆದರೆ ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

“ನಾನು ಇಲ್ಲಿ ನನ್ನ ಕೆಲಸ ಮುಗಿಸಿದ ತಕ್ಷಣ ಹಿಂತಿರುಗುತ್ತೇನೆ. ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಂದುವರೆಯುತ್ತವೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಈ ಜನ್ಮದಿನವನ್ನು ಅತ್ಯಂತ ನೋವಿನಿಂದ ಮಾಡಲು ಸಹಕರಿಸಿದವರಿಗೆ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ.

ಜಯಸೂರ್ಯ ವಿರುದ್ಧ ಲೈಂಗಿ ಕಿರುಕುಳದ ಆರೋಪದ ಮೇಲೆ ಎರಡು ಎಫ್‌ಐಆರ್‌ ದಾಖಲಾಗಿದೆ. ಮೊದಲ ಪ್ರಕರಣವನ್ನು ನಟಿ ಮಿನು ಮುನೀರ್ ದಾಖಲಿಸಿದ್ದರೆ, ಎರಡನೆಯದನ್ನು ಆಗಸ್ಟ್ 30 ಶುಕ್ರವಾರ ದಾಖಲಿಸಲಾಗಿದೆ.

ಎರಡನೇ ಎಫ್‌ಐಆರ್ 354, 354A (A1) (I) ಮತ್ತು 354D IPC ಅಡಿಯಲ್ಲಿ ದಾಖಲಾಗಿದ್ದು, ದೂರುದಾರರ ಹೇಳಿಕೆಯನ್ನು ದಾಖಲಿಸಿದ ನಂತರ ಪ್ರಕರಣವನ್ನು ದಾಖಲಿಸಲಾಗಿದೆ. ಈ ಎಫ್‌ಐಆರ್ ತಿರುವನಂತಪುರದಲ್ಲಿ ದಾಖಲಾಗಿದ್ದು, ತೋಡುಪುಳ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.