Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼ ಓಟಿಟಿ ರೈಟ್ಸ್ ದಾಖಲೆ ಬೆಲೆಗೆ ಸೇಲ್?
Team Udayavani, Sep 1, 2024, 5:33 PM IST
ಹೈದರಾಬಾದ್: ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಅಲ್ಲು ಅರ್ಜುನ್(Allu Arjun) ಅವರ ʼಪುಷ್ಪ-2ʼ (Pushpa 2: The Rule ) ರಿಲೀಸ್ ವಿಚಾರವಾಗಿ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗೆ ಸಿನಿಮಾ ರಿಲೀಸ್ ಆಗಿ ಓಟಿಟಿಗೂ ದಾಪುಗಾಲಿಡುವ ಸಮೀಪಕ್ಕೆ ಬರುತ್ತಿತ್ತು.
ಆದರೆ ಟೀಸರ್ ಮತ್ತು ಹಾಡುಗಳನ್ನು ರಿಲೀಸ್ ಮಾಡಿ, ಬಿಡುಗಡೆ ದಿನಾಂಕ ಮುಂದೂಡಿದ ಬಳಿಕ ಚಿತ್ರದ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ಚಿತ್ರ ಆಗಸ್ಟ್ 15 ರಂದು ರಿಲೀಸ್ ಆಗಲಿದೆ ಎಂದು ಬಹಳ ಹಿಂದೆಯೇ ಅನೌನ್ಸ್ ಮಾಡಿದ್ದ ಚಿತ್ರತಂಡ ರಿಲೀಸ್ ಡೇಟ್ ಮುಂದೂಡಿದೆ. ಡಿಸೆಂಬರ್ 6ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಹೊಂದಾಣಿಕೆ ಕೊರತೆಯ ಕಾರಣದಿಂದ ಆ ದಿನ ಕೂಡ ಸಿನಿಮಾ ರಿಲೀಸ್ ಡೌಟ್ ಎನ್ನಲಾಗುತ್ತಿತ್ತು.
ಆದರೆ ಇಬ್ಬರು ಜತೆಯಾಗಿ ಕಾಣಿಸಿಕೊಂಡಿದ್ದು, ಇದೇ ವರ್ಷ ಸಿನಿಮಾ ರಿಲೀಸ್ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ʼಪುಷ್ಪ-2ʼ ಓಟಿಟಿ ರೈಟ್ಸ್ ಬೃಹತ್ ಮೊತ್ತಕ್ಕೆ ಮಾರಾಟವಾಗಿದೆ ಎಂದು ವರದಿಯಾಗಿದೆ.
ʼಪುಷ್ಪ-2ʼ ಸಿನಿಮಾದ ಓಟಿಟಿ ಡೀಲ್ (OTT Rights) 270 ಕೋಟಿ ರೂಪಾಯಿಗಳಿಗೆ ನೆಟ್ ಫ್ಲಿಕ್ಸ್ ಖರೀದಿಸಿದೆ ಎಂದು ‘ಆಕಾಶವಾಣಿ’ ವರದಿ ಮಾಡಿದೆ.
ಚಿತ್ರದ ಮೊದಲ ಭಾಗದ ಓಟಿಟಿ ರೈಟ್ಸ್ ನ್ನು ಅಮೆಜಾನ್ ಪ್ರೈಮ್ ವಿಡಿಯೋ ಖರೀದಿಸಿತ್ತು. ಎರಡನೇ ಭಾಗದ ಓಟಿಟಿ ಹಕ್ಕುಗಳನ್ನು ನೆಟ್ಫ್ಲಿಕ್ಸ್ ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಚಿತ್ರದ ನಂತರದ ಥಿಯೇಟ್ರಿಕಲ್ ಹಕ್ಕುಗಳನ್ನು ಪಡೆದುಕೊಳ್ಳಲು 270 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು, ಇದುವರೆಗೆ ಯಾವುದೇ ಭಾರತೀಯ ಚಿತ್ರಕ್ಕೆ ನೀಡಲಾದ ದೊಡ್ಡ ಮೊತ್ತ ಇದಾಗಿದೆ ಎಂದು ವರದಿಯಾಗಿದೆ.
ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮುಂದೆ ಫಾಹದ್ ಫಾಸಿಲ್ ಅಬ್ಬರಿಸಲಿದ್ದಾರೆ. ಇನ್ನುಳಿದಂತೆ ರಶ್ಮಿಕಾ ಮಂದಣ್ಣ, ಧನಂಜಯ, ಜಗದೀಶ್ ಪ್ರತಾಪ್ ಬಂಡಾರಿ, ರಾವ್ ರಮೇಶ್, ಅಜಯ್, ಸುನಿಲ್, ಅನಸೂಯಾ ಭಾರದ್ವಾಜ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.