Nandavara: ಕಸ ತೆರವಿಗೂ ತಗಲಿತು ಗಡಿ ವಿವಾದ

ದುರ್ನಾತದ ಜತೆ ನಾಯಿಗಳಿಂದ ಅಪಾಯ; ಡಿಸಿ, ಯಾರಿಗೆ ದೂರಿತ್ತರೂ ಪ್ರಯೋಜನವಿಲ್ಲ

Team Udayavani, Sep 1, 2024, 5:34 PM IST

1

ಬಂಟ್ವಾಳ: ರಸ್ತೆ, ಸೇತುವೆ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳು ಗಡಿ ವಿವಾದಕ್ಕೆ ತುತ್ತಾಗಿ ಅಭಿವೃದ್ಧಿ ಕಾಣದ್ದನ್ನು ಕಂಡಿದ್ದೇವೆ. ಆದರೆ ಇಲ್ಲೊಂದು ಕಡೆ ರಸ್ತೆ ಬದಿ ಬಿದ್ದಿರುವ ಕಸದ ರಾಶಿಯೇ ಗಡಿ ವಿವಾದದ ಪರಿಣಾಮ ಸಮರ್ಪಕವಾಗಿ ವಿಲೇವಾರಿಯಾಗದೆ ದುರ್ನಾತ ಬೀರುವ ಜತೆಗೆ ಬೀದಿ ನಾಯಿಗಳಿಂದ ಸ್ಥಳೀಯವಾಗಿ ಓಡಾಡುವ ಮಕ್ಕಳು ಸಹಿತ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ.

ಇದು ಬಂಟ್ವಾಳ ಪುರಸಭೆ ಹಾಗೂ ಸಜೀಪಮುನ್ನೂರು ಗ್ರಾ.ಪಂ. ಗಡಿ ವ್ಯಾಪ್ತಿಯ ಪಾಣೆಮಂಗಳೂರು ನಂದಾವರ ಸೇತುವೆ ಬಳಿಯ ಕಥೆ-ವ್ಯಥೆ. ಸೇತುವೆಯ ಬಳಿಯಲ್ಲೇ ಟನ್‌ಗಟ್ಟಲೆ ಕಸ ರಾಶಿ ಬಿದ್ದಿದ್ದು, ದಿನ ಕಳೆದಂತೆ ಕಸದ ರಾಶಿ ಹೆಚ್ಚುತ್ತಿದೆಯೇ ವಿನಃ, ಅದು ವಿಲೇವಾರಿಯಾಗುವುದು ಬಹಳ ಅಪರೂಪ. ಕಸದ ಬೀಳುವ ಪ್ರದೇಶವು ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿದೆ. ಆದರೆ ಕಸ ತಂದು ಹಾಕುವವರು ಸಜೀಪಮುನ್ನೂರು ಗ್ರಾಮದ ನಂದಾವರ ಪ್ರದೇಶವರು ಎಂಬುದು ಪುರಸಭೆಯ ಆರೋಪವಾಗಿದೆ.

ಹಸಿದಿರುವ ನಾಯಿಗಳಿಂದ ಅಪಾಯ ಕಸ ರಾಶಿ ಬಿದ್ದು ದುರ್ನಾತ ಬೀರುವುದು ಒಂದು ಚಿಂತೆ ಆದರೆ ಅದರ ಜತೆಗೆ ಮತ್ತೂಂದು ಗಂಭೀರ ಸಮಸ್ಯೆಯ ಕುರಿತು ನಾವು ಗಮನ ಹರಿಸಲೇಬೇಕಿದೆ. ಕಸ ಬೀಳುವ ಪ್ರದೇಶದ ಪಕ್ಕದಲ್ಲೇ ಎರಡು ವಿದ್ಯಾಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಶಾಲೆಗೆ ನಂದಾವರ ಭಾಗದಿಂದ ಆಗಮಿಸುವ 500ಕ್ಕೂ ಅಧಿಕ ವಿದ್ಯಾರ್ಥಿಗಳು ನಡೆದುಕೊಂಡೇ ಸಾಗುತ್ತಾರೆ. ಕಸದ ರಾಶಿಯಲ್ಲಿ ತಿನ್ನುವುದಕ್ಕೆ ಏನಾದರೂ ಸಿಗುತ್ತದೆಯೇ ಎಂದು ಹತ್ತಾರು ನಾಯಿಗಳು ಹೊಂಚು ಹಾಕಿ ಕುಳಿತಿರುತ್ತವೆ.

ನೂರಾರು ವಿದ್ಯಾರ್ಥಿಗಳು ಓಡಾಡುವ ಸಂದರ್ಭದಲ್ಲಿ ಅವುಗಳು ಮಕ್ಕಳ ಮೇಲೆ ಎರಗುವ ಅಪಾಯ ಎದುರಾಗಿದ್ದು, ಇದಕ್ಕೆ ಯಾರು ಹೊಣೆ ಎಂಬ ಆತಂಕ ಸ್ಥಳೀಯ ವಿದ್ಯಾಸಂಸ್ಥೆಗಳು, ಪೋಷಕರನ್ನು ಕಾಡುತ್ತಿದೆ.

ದ.ಕ.ಜಿಲ್ಲಾಧಿಕಾರಿಗಳಿಗೆ ಮನವಿ ಶಾಲಾ ಪರಿಸರದಲ್ಲಿ ಕಸ ಬಿದ್ದು ದುರ್ನಾತ ಬೀರುವ ಜತೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿ ಮಕ್ಕಳಿಗೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕೈಗೊಂಡು ಅಪಾಯ ತಪ್ಪಿಸುವಂತೆ ಪಾಣೆಮಂಗಳೂರು ಎಸ್‌ ಎಲ್‌ಎನ್‌ಪಿ ವಿದ್ಯಾಲಯದಿಂದ ದ.ಕ. ಜಿಲ್ಲಾಧಿಕಾರಿಗಳು ಸೇರಿದಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳು, ಸಜೀಪಮುನ್ನೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೂ ದೂರು ನೀಡಲಾಗಿದೆ.

ಜತೆಗೆ ವಿದ್ಯಾಸಂಸ್ಥೆಯವರು ಆರೋಗ್ಯ ಇಲಾಖೆಯನ್ನೂ ಕೂಡ ಭೇಟಿಯಾಗಿ ಪರಿಸ್ಥಿತಿಯನ್ನು ವಿವರಿಸಿದ್ದು, ಇಲಾಖೆಯವರು ಪರಿಶೀಲನೆ ಮಾಡಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಯೋಜನ ಆಗಿಲ್ಲ ಎನ್ನಲಾಗಿದೆ

ಹೊರಗಿನ ಕಸ ಬೀಳದಂತೆ ನಿಗಾ
ಪುರಸಭಾ ವ್ಯಾಪ್ತಿಯಲ್ಲಿ ನಮ್ಮ ವಾಹನಗಳು ತೆರಳಿ ತ್ಯಾಜ್ಯ ವಿಲೇವಾರಿ ಮಾಡುತ್ತಿದೆ. ಆದರೆ ಗ್ರಾಮೀಣ ಭಾಗಗಳಿಂದ ನಮ್ಮ ವ್ಯಾಪ್ತಿಗೆ ಕಸ ತಂದು ಹಾಕುವ ಪ್ರಕರಣಗಳು ನಡೆಯುತ್ತಿದೆ. ಇದರ ತಡೆಯ ಕುರಿತು ಆರೋಗ್ಯ ನಿರೀಕ್ಷಕರ ಜತೆ ಈಗಾಗಲೇ ಚರ್ಚೆ ನಡೆಸಿದ್ದು, ಹೊರಗಿನಿಂದ ಕಸ ಬೀಳುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಅಡ್ಡಲಾಗಿ ನೆಟ್‌ ಅಳವಡಿಸುವ ಜತೆಗೆ ಬೋರ್ಡ್‌ ಹಾಕಿ ಒಂದಷ್ಟು ಸಮಯ ನಿಗಾ ಇರಿಸುವ ಆಲೋಚನೆ ಇದೆ.
-ವಾಸು ಪೂಜಾರಿ ಲೊರೆಟ್ಟೊ ಅಧ್ಯಕ್ಷರು, ಬಂಟ್ವಾಳ ಪುರಸಭೆ

ನೆರೆ ಬಂದರೆ ಮಾತ್ರ ಮುಕ್ತಿ
ನಂದಾವರ ಭಾಗದಿಂದ ಆಗಮಿಸುವವರು ಈ ಜಾಗದಲ್ಲಿ ಬೆಳಗ್ಗಿನ ಹೊತ್ತು ಕಸ ಬಿಸಾಡುತ್ತಿದ್ದು, ಬಳಿಕ ದಿನಗಟ್ಟಲೆ ಕಸದ ರಾಶಿ ಅಲ್ಲೇ ಬಿದ್ದಿರುತ್ತದೆ. ಯಾವಾಗಲಾದರೊಮ್ಮೆ ಇಲ್ಲಿನ ಕಸ ವಿಲೇವಾರಿಯಾಗುತ್ತಿದ್ದು, ಪೂರ್ತಿ ಕಸ ಹೋಗಬೇಕಾದರೆ ನೆರೆಯೇ ಬರಬೇಕಿದೆ. ಕಳೆದ ತಿಂಗಳು ನೆರೆ ಬಂದ ಸಂದರ್ಭದಲ್ಲಿ ಇಲ್ಲಿನ ಕಸದ ರಾಶಿ ಕೊಚ್ಚಿ ಹೋಗಿದ್ದು, ಈಗ ಮತ್ತೆ ರಾಶಿ ಬಿದ್ದಿದೆ. ಹೀಗಾಗಿ ಮತ್ತೆ ಕಸಕ್ಕೆ ಮುಕ್ತಿ ಸಿಗಬೇಕಾದರೆ ಮತ್ತೂಂದು ನೆರೆ ಬರಬೇಕೇನೋ ಎಂಬ ಸ್ಥಿತಿ ಇದೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.