PM ಮೋದಿ ಅವರ ಕ್ಷಮೆಯಾಚನೆ ದುರಹಂಕಾರಕ್ಕೆ ಹೊಡೆತ: ಉದ್ಧವ್ ಠಾಕ್ರೆ ಕಿಡಿ
ಶಿಂಧೆ, ಫಡ್ನವಿಸ್ , ಅಜಿತ್ ಪವಾರ್ ಭಾವಚಿತ್ರಗಳಿಗೆ ಚಪ್ಪಲಿ ಸೇವೆ
Team Udayavani, Sep 1, 2024, 7:25 PM IST
ಮುಂಬಯಿ: ‘ಸಿಂಧುದುರ್ಗದಲ್ಲಿ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ( Narendra Modi) ಕ್ಷಮೆಯಾಚನೆಯು ಅವರ ದುರಹಂಕಾರಕ್ಕೆ ಹೊಡೆತ. ಮಹಾರಾಷ್ಟ್ರದ ಜನರು ದುರಹಂಕಾರವನ್ನು ತಿರಸ್ಕರಿಸಿದ್ದಾರೆ” ಎಂದು ರವಿವಾರ(ಸೆ1) ಶಿವಸೇನೆ (UBT)ನಾಯಕ, ಮಾಜಿ ಸಿಎಂ ಉದ್ಧವ್ ಠಾಕ್ರೆ ಕಿಡಿ ಕಾರಿದ್ದಾರೆ.
ಮಹಾ ವಿಕಾಸ್ ಅಘಾಡಿಯ “ಜೋಡೆ ಮಾರೋ”(ಚಪ್ಪಲಿಗಳಿಂದ ಹೊಡೆಯಿರಿ) ರ್ಯಾಲಿ ಉದ್ದೇಶಿಸಿ ಮಾತನಾಡಿದ ಠಾಕ್ರೆ ”ಮರಾಠ ದೊರೆಯ ಪ್ರತಿಮೆ ಕುಸಿತ, ಅಯೋಧ್ಯೆಯ ರಾಮ ಮಂದಿರ ಮತ್ತು ನೂತನ ಸಂಸತ್ತಿನ ಸಂಕೀರ್ಣದಲ್ಲಿ ನೀರು ಸೋರಿಕೆ ವಿಚಾರಗಳನ್ನು ಪ್ರಸ್ತಾವಿಸಿ ಕಿಡಿ ಕಾರಿದರು.
”ಎಂಟು ತಿಂಗಳ ಹಿಂದೆ ಉದ್ಘಾಟಿಸಿದ ಪ್ರತಿಮೆ ಕುಸಿತಕ್ಕೆ ಪ್ರಧಾನಿ ಕ್ಷಮೆಯಾಚಿಸಿದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿಯೇ? ಶಿವಾಜಿ ಮಹಾರಾಜರನ್ನು ಅವಮಾನಿಸಿದ ಶಕ್ತಿಗಳನ್ನು ಸೋಲಿಸಲು ಎಂವಿಎ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಪ್ರತಿಮೆ ಕುಸಿತವು ಮಹಾರಾಷ್ಟ್ರದ ಆತ್ಮಕ್ಕೆ ಮಾಡಿದ ಅವಮಾನ” ಎಂದು ಕಿಡಿ ಕಾರಿದರು.
INDIA bloc ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಶರದ್ ಪವಾರ್ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ಪಾಲ್ಗೊಂಡಿದ್ದರು.ಪ್ರತಿಭಟನಾ ಮೆರವಣಿಗೆ ಹುತಾತ್ಮ ಚೌಕ್ನಿಂದ ಆರಂಭಗೊಂಡು ಗೇಟ್ವೇ ಆಫ್ ಇಂಡಿಯಾ ತಲುಪಿತು.
ಚಪ್ಪಲಿ ಸೇವೆ
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ ನಡೆಸಲಾಯಿತು.
जोडे मारा आंदोलन! pic.twitter.com/Ol2xUn2aFK
— ShivSena – शिवसेना Uddhav Balasaheb Thackeray (@ShivSenaUBT_) September 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.