Kasaragod ಅಪರಾಧ ಸುದ್ದಿಗಳು


Team Udayavani, Sep 1, 2024, 8:32 PM IST

kas-a

ಬಾಲಕಿ ಅಪಹರಣ: ಬಂಧನ
ಕಾಸರಗೋಡು: ಎರಡು ವರ್ಷದ ಬಾಲಕಿಯನ್ನು ಅಪಹರಿಸಿದ್ದ ಎರ್ನಾಕುಳಂ ನಿವಾಸಿ ಅನೀಶ್‌ ಕುಮಾರ್‌(49)ನನ್ನು ಕಾಸರಗೋಡು ರೈಲ್ವೇ ಪೊಲೀಸ್‌ ಹಾಗೂ ಆರ್‌ಪಿಎಫ್‌ ಬಂಧಿಸಿದೆ.

ಮಂಗಳೂರಿನ ಕಂಕನಾಡಿಯಿಂದ ಈ ಮಗುವನ್ನು ಅಪಹರಿಸಲಾಗಿತ್ತು. ಈ ಮಗುವನ್ನು ಗೋವಾದಿಂದ ಅಪಹರಿಸಲಾಗಿದೆ ಎಂದು ವಿಚಾರಣೆಯ ಸಂದರ್ಭ ಆತ ಆರಂಭದಲ್ಲಿ ಹೇಳಿದ್ದ. ಆ ಬಳಿಕ ತನ್ನ ಹೇಳಿಕೆಯನ್ನು ಬದಲಾಯಿಸಿ ಕಂಕನಾಡಿಯಿಂದ ಅಪಹರಿಸಲಾಗಿದೆ ಎಂದಿದ್ದಾನೆ.

ಗಾಂಧಿ ಧಾಂ – ನಾಗರಕೋವಿಲ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ. ಈತನ ನಡವಳಿಕೆ ಕಂಡು ಸಂಶಯಿಸಿದ ಇತರ ಪ್ರಯಾಣಿಕರು ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದರು. ಅದರಂತೆ ಮಗು ಸಹಿತ ಈತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಈ ಮಗುವನ್ನು ಹೇಗೆ ಅಪಹರಿಸಲಾಯಿತು ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೂ ಲಭಿಸಿಲ್ಲ. ಹೆಚ್ಚಿನ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಲಭಿಸಲಿದೆ. ವ್ಯಕ್ತಿ ಹಾಗೂ ಮಗುವನ್ನು ಕಂಕನಾಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಎರಡಂತಸ್ತಿನ ಕಟ್ಟಡ ಕುಸಿತ
ಕಾಸರಗೋಡು: ನಗರದ ಎಂ.ಜಿ. ರಸ್ತೆಯ ಹಳೆಯ ಎರಡಂತಸ್ತಿನ ಕಟ್ಟಡ ಆ. 31ರಂದು ರಾತ್ರಿ ಕುಸಿದು ಬಿದ್ದಿದೆ. ಈ ಕಟ್ಟಡದಲ್ಲಿದ್ದ ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿ ಹೋಗಿದ್ದರಿಂದ ಸಂಭವನೀಯ ದುರಂತ ತಪ್ಪಿತು.

ಹಳೆ ಬಸ್‌ ನಿಲ್ದಾಣ ಸಮೀಪದ ಮೀನು ಮಾರುಕಟ್ಟೆ ರಸ್ತೆಯ ಹೆಂಚು ಹಾಸಿದ ಹಳೆಯ ಕಟ್ಟಡ ಮುರಿದು ಬಿದ್ದಿದೆ. ಮಳೆಯಿಂದಾಗಿ ಎಲ್ಲ ವ್ಯಾಪಾರಿಗಳು ಬೇಗನೆ ಮನೆಗೆ ಹೋಗಿದ್ದರು. ಏಳು ಅಂಗಡಿಗಳು ಕುಸಿದು ಬಿದ್ದಿದೆ. ತರಕಾರಿ, ಒಣಗಿದ ಮೀನು ಮಾರಾಟದ ಅಂಗಡಿಗಳು ಕುಸಿದಿವೆ. ಇದರ ಸಮೀಪದ ಅಂಗಡಿಗಳು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಅತ್ತ ಸಾಗದಂತೆ ತಡೆಹಿಡಿದಿದ್ದಾರೆ. ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಕಾರು ಢಿಕ್ಕಿ: ಬೈಕ್‌ ಸವಾರ ಸಾವು
ಕುಂಬಳೆ: ಸೀತಾಂಗೋಳಿ ಸೂರಂಬೈಲ್‌ನಲ್ಲಿ ಕಾರು ಢಿಕ್ಕಿ ಹೊಡೆದು ಬೈಕ್‌ ಸವಾರ ವಸಂತ (53) ಸಾವಿಗೀಡಾದರು. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.