Udupi ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ: ಡಿಸಿ ಡಾ| ಕೆ. ವಿದ್ಯಾಕುಮಾರಿ


Team Udayavani, Sep 2, 2024, 6:25 AM IST

Udupi-DC-Dr.-vidya-kumari

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ ಶೇ. 65 ಮಾತ್ರ ಪ್ರಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಬಗ್ಗೆ ಸರಕಾರದ ನಿರ್ದೇಶನವಿದೆ. ಜಿಲ್ಲೆಯ ಕೆಲವೊಂದು ನಾಗರಿಕರು ಆಧಾರ್‌ ಲಿಂಕ್‌ ಮಾಡಲು ಹಿಂಜರಿಯುತ್ತಿದ್ದು, ಇದರಿಂದ ನಿಗದಿತ ಪ್ರಗತಿ ಸಾಧಿಸಲು ಅಸಾಧ್ಯವಾಗಿದೆ.

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್‌ ಜೋಡಣೆ ಮಾಡಿಸಿಕೊಳ್ಳಬಹುದು.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಅವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ ಮಾಡಿಸಬೇಕು. ಈ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು, ಸೈಬರ್‌, ಗ್ರಾಮ ಒನ್‌ ಸೆಂಟರ್‌ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇಲ್ಲ.

ಈವರೆಗೆ ಆಧಾರ್‌ ಜೋಡಣೆ ಮಾಡದಿರುವ ಭೂಮಾಲಕರು ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್‌ ಜೋಡಣೆ ಮಾಡದಿರುವ ಭೂಮಾಲಕರು ತತ್‌ಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Tiger-1

Kadaba: ಆಲಂಕಾರು ಗ್ರಾಮದ ನೆಕ್ಕಿಲಾಡಿ ಬಳಿ ಹುಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.