Arrested: ಇ-ಸಿಗರೇಟ್, ಚಿನ್ನದ ಪೇಸ್ಟ್ ಸಾಗಣೆ; 32 ಬಂಧನ
Team Udayavani, Sep 2, 2024, 9:25 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಇ-ಸಿಗರೇಟ್, ಲ್ಯಾಪ್ಟಾಪ್, ಐಫೋನ್ ಹಾಗೂ ಚಿನ್ನದ ಪೇಸ್ಟ್ ಸಾಗಾಟ ಮಾಡುತ್ತಿದ್ದ ಶ್ರೀಲಂಕಾ ಪ್ರಜೆ ಸೇರಿ 32 ಮಂದಿಯನ್ನು ಬಂಧಿಸಿದ್ದಾರೆ.
ಆ.23ರಿಂದ 30ರ ಅವಧಿಯಲ್ಲಿ ಥೈಲ್ಯಾಂಡ್, ಮಲೇಷಿಯಾ, ಸಿಂಗಾಪುರ ಹಾಗೂ ಯುಎಇಯಿಂದ ಬೆಂಗಳೂರಿಗೆ ಇ-ಸಿಗರೇಟ್, ನವೀಕರಿಸಲಾದ ಲ್ಯಾಪ್ಟಾಪ್ ಹಾಗೂ ಐಫೋನ್ಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 31 ಮಂದಿ ಪ್ರಯಾಣಿಕರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 3.40 ಕೋಟಿ ರೂ. ಮೌಲ್ಯದ 5,13,400 ಇ-ಸಿಗರೇಟ್ಗಳು, 43 ನವೀಕರಿಸಿದ ಲ್ಯಾಪ್ಟಾಪ್ಗ್ಳು, 16ಐಫೋನ್ಗಳು ಪತ್ತೆಯಾಗಿವೆ. ತನಿಖೆ ಮುಂದುವರಿದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶ್ರೀಲಂಕಾ ಪ್ರಜೆ ಬಂಧನ: ಕೊಲಂಬೋದಿಂದ ಬೆಂಗಳೂರಿಗೆ ತನ್ನ ಗುದದ್ವಾರದಲ್ಲಿ ಚಿನ್ನದ ಪೇಸ್ಟ್ ತುಂಬಿದ ಕ್ಯಾಪುÕಲ್ಗಳು ಹಾಗೂ ಬಿಸ್ಕೆಟ್ಗಳನ್ನು ಕೊಂಡೊಯ್ಯುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಆ.31ರಂದು ಶ್ರೀಲಂಕಾದ ಕೊಲಂಬೋದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದ. ಆದರೆ, ಆರೋಪಿಯ ವರ್ತನೆ ಹಾಗೂ ತಪಾಸಣೆ ವೇಳೆ ಆತನ ಅಸಹಕಾರದಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಕೂಡಲೇ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದಾಗ ಚಿನ್ನದ ಪೇಸ್ಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಬಳಿಕ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತನ ಗುದದ್ವಾರದಲ್ಲಿ ಚಿನ್ನದ ಪೇಸ್ಟ್ ತುಂಬಿದ್ದ ಆರು ಕ್ಯಾಪುÕಲ್ಸ್ಗಳು ಹಾಗೂ ಮೂರು ಬಿಸ್ಕೆಟ್ ಮಾದರಿಯ ವಸ್ತುಗಳು ಪತ್ತೆಯಾಗಿದ್ದು, ಸುಮಾರು 1,19 ಕೋಟಿ ರೂ. ಮೌಲ್ಯದ 1670 ಗ್ರಾಂ ಚಿನ್ನದ ಪೇಸ್ಟ್ ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.