ED Raids: ಯಾವುದೇ ಕ್ಷಣದಲ್ಲೂ ನನ್ನ ಬಂಧನವಾಗಬಹುದು… ಆಪ್ ನಾಯಕ ಅಮಾನತುಲ್ಲಾ ಖಾನ್
ಬೆಳ್ಳಂಬೆಳಗ್ಗೆ ನನ್ನ ಬಂಧಿಸಲು ಇಡಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ...
Team Udayavani, Sep 2, 2024, 9:35 AM IST
ನವದೆಹಲಿ: ಬೆಳ್ಳಂಬೆಳಗ್ಗೆ ನನ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನ್ನ ಮನೆಗೆ ಬಂದಿರುವುದಾಗಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ಹೇಳಿಕೊಂಡಿದ್ದಾರೆ.
ಈ ಕುರಿತು ಸ್ವತಃ ಅವರೇ X ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು, ಸೋಮವಾರ (ಸಪ್ಟೆಂಬರ್ 2) ಬೆಳಿಗ್ಗೆ ತನ್ನ ಮನೆಗೆ ಇಡಿ ಅಧಿಕಾರಿಗಳು ಬಂದಿದ್ದು ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಯಾವುದೇ ಕ್ಷಣದಲ್ಲೂ ನನ್ನನ್ನು ಬಂಧಿಸಬಹುದು ಎಂದು ಬರೆದುಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ತಂಡ ಓಖ್ಲಾದಲ್ಲಿರುವ ತನ್ನ ಮನೆಗೆ ಬಂದಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಕ್ರಮ ನೇಮಕಾತಿ ಮತ್ತು ಹಣಕಾಸಿನ ಅವ್ಯವಹಾರದ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಇಡಿ ಅಧಿಕಾರಿಗಳು ದಾಳಿ ನಡೆಸುವ ಹಿನ್ನೆಲೆಯಲ್ಲಿ ಅಮಾನತುಲ್ಲಾ ಖಾನ್ ಮನೆಯ ಸುತ್ತ ದೆಹಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ. ಈ ಕುರಿತು ಖಾನ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿಕೊಂಡಿದ್ದಾರೆ.
ಇನ್ನೊಂದು ಪೋಸ್ಟ್ ನಲ್ಲಿ, ಸೋಮವಾರ ಮುಂಜಾನೆಯೇ, ಸರ್ವಾಧಿಕಾರಿಯ ಆಜ್ಞೆಯ ಮೇರೆಗೆ, ಆತನ ಕೈಗೊಂಬೆಯಾಗಿರುವ ಇಡಿ ಅಧಿಕಾರಿಗಳು ನನ್ನ ಮನೆಗೆ ತಲುಪಿದ್ದಾರೆ, ನನ್ನ ಹಾಗೂ ಆಪ್ ನಾಯಕರಿಗೆ ಕಿರುಕುಳ ನೀಡಲು ಸರ್ವಾಧಿಕಾರಿ ಯಾವುದೇ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ, ಇಲ್ಲಿ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದು ಅಪರಾಧವೇ? ಅಷ್ಟಕ್ಕೂ ಈ ಸರ್ವಾಧಿಕಾರ ಎಷ್ಟು ಕಾಲ ಉಳಿಯುತ್ತದೆ? ಎಂದು ಖಾನ್ ಪೋಸ್ಟ್ ಮಾಡಿದ್ದಾರೆ.
अभी सुबह-सुबह तानाशाह के इशारे पर उनकी कटपुतली ED मेरे घर पर पहुँच चुकी है, मुझे और AAP नेताओं को परेशान करने में तानाशाह कोई कसर नहीं छोड़ रहा।
ईमानदारी से अवाम की ख़िदमत करना गुनाह है?
आख़िर ये तानाशाही कब तक?#EDRaid #Okhla pic.twitter.com/iR2YN7Z9NL
— Amanatullah Khan AAP (@KhanAmanatullah) September 2, 2024
ED की तानाशाही! pic.twitter.com/JgJgreIPfR
— Amanatullah Khan AAP (@KhanAmanatullah) September 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.