Actor Rajinikanth: ಹೇಮಾ ಸಮಿತಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದ ಹಿರಿಯ ನಟ ರಜಿನಿಕಾಂತ್
Team Udayavani, Sep 2, 2024, 11:20 AM IST
ಚೆನ್ನೈ: ಮಾಲಿವುಡ್ನಲ್ಲಿ(Mollywood) ಸಂಚಲನ ಸೃಷ್ಟಿಸಿರುವ ಹೇಮಾ ಸಮಿತಿ ವರದಿ(Hema Committee report) ಬಗ್ಗೆ ಸೂಪರ್ ಸ್ಟಾರ್ ನಟರೊಬ್ಬರು ತನಗೇನು ಗೊತ್ತಿಲ್ಲ ಎನ್ನುವ ಪ್ರತಿಕ್ರಿಯೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ನಿರ್ದೇಶಕ ರಂಜಿತ್(Director Ranjith), ನಟ ಜಯಸೂರ್ಯ (Actor Jayasurya), ಮುಕೇಶ್(Actor Mukesh) ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಕೇಳಿ ಬಂದಿದೆ.
ಈ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಮಾಲಿವುಡ್ ಸಿನಿರಂಗದ ಹಿರಿಯ ನಟರಾದ ಮೋಹನ್ ಲಾಲ್(Mohanlal) ಹಾಗೂ ಮಮ್ಮುಟ್ಟಿ(Mammootty) “ಹೇಮಾ ಸಮಿತಿಯ ವರದಿಯಲ್ಲಿ ಹೇಳಲಾದ ಶಿಫಾರಸುಗಳು ಮತ್ತು ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ” ಎಂದು ಹೇಳುವ ಮೂಲಕ ಮೌನ ಮುರಿದಿದ್ದಾರೆ.
ಮಾಲಿವುಡ್ನಲ್ಲಿ ಹೇಮಾ ಸಮಿತಿ ವರದಿ ಸಂಚಲನ ಸೃಷ್ಟಿಸಿದ ಬಳಿಕ ಇತರೆ ಚಿತ್ರರಂಗದಲ್ಲೂ ಇದೇ ರೀತಿಯ ಸಮಿತಿಯನ್ನು ರಚಿಸಬೇಕೆನ್ನುವ ಕೂಗು ಕೇಳಿ ಬರುತ್ತಿದೆ.
ಈ ನಡುವೆ ಸೂಪರ್ ಸ್ಟಾರ್ ರಜಿನಿಕಾಂತ್ (Superstar Rajinikanth) ಹೇಮಾ ಸಮಿತಿ ವರದಿ ಬಗ್ಗೆ ಹೇಳಿರುವ ಮಾತೊಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
VIDEO | Actor Rajinikanth (@rajinikanth) speaks on Hema committee report.
(Source: Third Party) pic.twitter.com/HyWyiUlfCc
— Press Trust of India (@PTI_News) September 1, 2024
ಹೇಮಾ ಸಮಿತಿ ವರದಿ ಹಾಗೂ ಸಿನಿಮಾರಂಗದಲ್ಲಿನ ಕಿರುಕುಳ ಪ್ರಕರಣದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, “ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ ಕ್ಷಮಿಸಿ” ಎಂದು ಹೇಳಿ ಮುಂದೆ ಸಾಗಿದ್ದಾರೆ.
ಈ ಬಗೆಗಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ರಜಿನಿಕಾಂತ್ ರಂತಹ ಹಿರಿಯ ನಟ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ ಎಂದು ನೆಟ್ಟಿಗರು ಮಾತನಾಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಮೇಲೆ ನಟ ಜಯಸೂರ್ಯ,ನಿರ್ದೇಶಕ ರಂಜಿತ್ ಅವರ ಮೇಲೆ ಈಗಾಗಲೇ ದೂರು ದಾಖಲಾಗಿದೆ. ಈ ಆರೋಪಗಳು ಸುಳ್ಳು ಇದರ ವಿರುದ್ಧ ನಾನು ಕಾನೂನು ಹೋರಾಟವನ್ನು ಮುಂದುವರೆಸುತ್ತೇನೆ ಎಂದು ಜಯಸೂರ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.