Yograj Singh; ನಾನೆಂದೂ ಎಂ.ಎಸ್.ಧೋನಿಯನ್ನು ಕ್ಷಮಿಸಲಾರೆ: ಯುವರಾಜ್ ಸಿಂಗ್ ತಂದೆ
Team Udayavani, Sep 2, 2024, 11:14 AM IST
ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಅವರನ್ನು ಸದಾ ದೂರುವ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) ತಂದೆ ಯೋಗರಾಜ್ ಸಿಂಗ್ (Yograj Singh) ಅವರು ಇದೀಗ ಮತ್ತೆ ಎಂ.ಎಸ್.ಧೋನಿ ವಿರುದ್ದ ಕಿಡಿಕಾರಿದ್ದಾರೆ. ಭಾರತ ತಂಡದ ಪರ ಏಳು ಅಂತಾರಾಷ್ಟ್ರೀಯ ಪಂದ್ಯವಾಡಿರುವ ಯೋಗರಾಜ್ ಸಿಂಗ್ ಅವರು ತಮ್ಮ ಪುತ್ರನ ವೃತ್ತಿಜೀವನವನ್ನು ಧೋನಿ ಹಾಳು ಮಾಡಿದ ಎಂದು ಸದಾ ಕಿಡಿಕಾರುತ್ತಲೇ ಇರುತ್ತಾರೆ. ಆಗೊಮ್ಮೆ ಈಗೊಮ್ಮೆ ಸಾರ್ವಜನಿಕ ವೇದಿಕೆಯಲ್ಲಿ ಮಹೇಂದ್ರ ಸಿಂಗ್ ಧೋನಿ ವಿರುದ್ದ ಹೇಳಿಕೆ ನೀಡುತ್ತಾ ಇರುತ್ತಾರೆ.
ಇದೀಗ ಯೂಟ್ಯೂಬ್ ಚಾನೆಲ್ ಒಂದಕ್ಕೆ ಯೋಗರಾಜ್ ಸಿಂಗ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
“ನಾನೆಂದೂ ಎಂ.ಎಸ್.ಧೋನಿಯನ್ನು ಕ್ಷಮಿಸುವುದಿಲ್ಲ. ಅವರು ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಆತ ದೊಡ್ಡ ಕ್ರಿಕೆಟಿಗ, ಆದರೆ ಆತ ನನ್ನ ಮಗನ ವಿರುದ್ದ ಏನು ಮಾಡಿದ್ದಾನೆ, ಅದೆಲ್ಲಾ ಇದೀಗ ಹೊರಬರುತ್ತಿದೆ. ಅದು ಜೀವನದಲ್ಲಿ ಎಂದೂ ಮರೆಯಲಾಗದು. ನಾನು ಎರಡು ವಿಷಯಗಳನ್ನು ಜೀವನದಲ್ಲಿ ಎಂದೂ ಮಾಡಿಲ್ಲ. ಮೊದಲನೆಯದಾಗಿ, ನನಗೆ ಕೆಟ್ಟದು ಮಾಡಿದ ಯಾರನ್ನೂ ಎಂದೂ ಕ್ಷಮಿಸಿಲ್ಲ. ಎರಡನೆಯದಾಗಿ, ನಾನೆಂದೂ ಅವರನ್ನೂ ತಬ್ಬಿಕೊಂಡಿಲ್ಲ, ಅದು ನನ್ನ ಕುಟುಂಬಿಕರೇ ಆಗಲಿ, ಅಥವಾ ಮಕ್ಕಳೇ ಆಗಿರಲಿ” ಎಂದು ಯೋಗರಾಜ್ ಸಿಂಗ್ ಅವರು ಹೇಳಿದ್ದರೆ.
ಯೋಗರಾಜ್ ಅವರು ಧೋನಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದು ಇದೇ ಮೊದಲಲ್ಲ. ಈ ವರ್ಷದ ಆರಂಭದಲ್ಲಿ, ಧೋನಿಯ ಕೆಟ್ಟ ಆಸೆಗಳಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2024ರಲ್ಲಿ ಸೋಲನುಭವಿಸಿತು ಎಂದು 66 ವರ್ಷ ವಯಸ್ಸಿನ ಯೋಹರಾಜ್ ಹೇಳಿದ್ದರು. ಯುವರಾಜ್ ಬಗ್ಗೆ ಧೋನಿ ಅಸೂಯೆ ಹೊಂದಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.