Billa Ranga Baashaa: ಭವಿಷ್ಯದ ಕಥೆ ಹೇಳಲಿದೆ ಸುದೀಪ್ – ಅನೂಪ್‌ ʼಬಿಲ್ಲ ರಂಗ ಬಾಷʼ


Team Udayavani, Sep 2, 2024, 12:20 PM IST

8

ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಅವರ ಹುಟ್ಟುಹಬ್ಬಕ್ಕೆ ʼಮ್ಯಾಕ್ಸ್‌ʼ ಸಿನಿಮಾದಿಂದ ʼಮಾಸ್‌ʼ ಹಾಡು ರಿಲೀಸ್‌ ಆಗುತ್ತಿದ್ದಂತೆ ಅವರ ಮುಂದಿನ ಸಿನಿಮಾದ ಕುರಿತ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ವಿಕ್ರಾಂತ್‌ ರೋಣʼ ಬಳಿಕ ನಿರ್ದೇಶಕ ಅನೂಪ್‌ ಭಂಡಾರಿ (Anup Bhandari) ಜತೆ ಕಿಚ್ಚ ಅವರು ʼಬಿಲ್ಲ ರಂಗ ಬಾಷʼ (Billa Ranga Baashaa) ಸಿನಿಮಾವನ್ನು ಮಾಡುತ್ತಿರುವುದು ಗೊತ್ತೇ ಇದೆ. ಅನೌನ್ಸ್‌ ಆದ ಬಳಿಕದಿಂದ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳು ಕುತೂಹಲ ಹೆಚ್ಚಿಸಿದೆ.

ಈ ಹಿಂದೆ ಅನೂಪ್‌ ʼಬಾ ರಾಜಾ ಬಾ’ ಎನ್ನುವ ಸಣ್ಣ ಹಾಡಿನ ಝಲಕ್‌ ಕೇಳಿಸಿ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದ್ದರು. ಇದೀಗ ಹೇಳಿದಂತೆ ಕಿಚ್ಚನ ಹುಟ್ಟುಹಬ್ಬಕ್ಕೆ ʼಬಿಲ್ಲ ರಂಗ ಬಾಷʼ ಹೊಸ ಮಾಹಿತಿಯನ್ನು ನೀಡಿದ್ದಾರೆ.

ಬಹಳ ವಿಭಿನ್ನವಾಗಿ ಕಿಚ್ಚ ʼಬಿಲ್ಲ ರಂಗ ಬಾಷʼ ಬಗ್ಗೆ ಅಪ್ಡೇಟ್‌ ನೀಡಿದ್ದಾರೆ. ʼಬಿಲ್ಲ ರಂಗ ಬಾಷʼ ಸಿನಿಮಾದ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್‌ ವಿಡಿಯೋವನ್ನು ರಿಲೀಸ್‌ ಮಾಡಲಾಗಿದ್ದು, ʼವಿಕ್ರಾಂತ್‌ ರೋಣʼದಂತೆ ಈ ಸಿನಿಮಾದಲ್ಲೂ ವಿಎಫ್‌ ಎಕ್ಸ್‌ ಹೆಚ್ಚಾಗಿ ಇರಲಿದೆ ಎನ್ನುವುದು ಝಲಕ್‌ ನಲ್ಲಿ ಗೊತ್ತಾಗುತ್ತದೆ.

ಈ ಹಿಂದೆಯೇ ಅನೂಪ್‌ ಭಂಡಾರಿ ಅವರು ʼಬಿಲ್ಲ ರಂಗ ಬಾಷʼ ಭವಿಷ್ಯದ ಕಥೆಯನ್ನು ಹೇಳುವ ಚಿತ್ರವೆಂದು ಹೇಳಿದ್ದರು. ಅದರಂತೆ  ‘ಬಿಲ್ಲ ರಂಗ ಬಾಷ’ ಇಂದಿನಿಂದ 185 ವರ್ಷಗಳಷ್ಟು ಭವಿಷ್ಯದ ಕಥೆ ಅಂದರೆ ʼ2209 ADʼಯ ಕಥೆಯನ್ನು ಹೇಳಲಿದೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ.

ಅಂದಹಾಗೆ ಟಾಲಿವುಡ್‌ ನಲ್ಲಿ ʼಹನುಮಾನ್‌ʼ ಸಿನಿಮಾಕ್ಕೆ ಬಂಡವಾಳ ಹಾಕಿ ಗೆದ್ದಿದ್ದ ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ‘ಬಿಲ್ಲ ರಂಗ ಬಾಷ’ನಿಗೆ ʼಪ್ರೈಮ್‌ ಶೋ ಎಂಟರ್ಟೈನ್ಮೆಂಟ್ʼ ಬ್ಯಾನರ್‌ ಅಡಿಯಲ್ಲಿ ಬಂಡವಾಳ ಹಾಕಲಿದ್ದಾರೆ.

ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾವಿದು:

ಇತ್ತೀಚೆಗೆ ಸುದೀಪ್‌ ʼಬಿಲ್ಲ ರಂಗ ಬಾಷʼ ಸಿನಿಮಾ ಬಗ್ಗೆ ಮಾತನಾಡಿದ ಅವರು, ‘ಬಿಲ್ಲ ರಂಗ ಭಾಷಾ’ ಸದ್ಯದಲ್ಲೇ ಪ್ರಾರಂಭವಾಗಲಿದೆ. ಆರೇಳು ವರ್ಷಗಳಿಂದ ಕೆಲಸ ನಡೆಯುತ್ತಿದೆ. ‘ವಿಕ್ರಾಂತ್‍ ರೋಣʼಗೂ ಮೊದಲೇ ಆ ಚಿತ್ರ ಮಾಡಬೇಕೆನ್ನುವ ಯೋಚನೆ ಇತ್ತು. ‘ವಿಕ್ರಾಂತ್‍ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ. ಏಕೆಂದರೆ, ನಮ್ಮ ಹತ್ತಿರ ದುಡ್ಡಿರಬಹುದು. ಆದರೆ, ಸಾಮರ್ಥ್ಯ ಇರುತ್ತದೋ ಇಲ್ಲವೋ ಗೊತ್ತಿರುವುದಿಲ್ಲ. ನಾವು ಹೇಳೋಕೆ ಹೋಗಿ ಅದು ತೆರೆಯ ಮೇಲೆ ಜೋಕ್‍ ಆಗಿ ಕಾಣಿಸಬಹುದು. ಹಾಗಾಗಿ, ಮೊದಲು ಈ ಚಿತ್ರ ಆಗುತ್ತಾ ಎಂದು ಗೊತ್ತಾಗಬೇಕಿದ್ದರೆ, ಬೇರೆ ಏನಾದರೂ ಮಾಡಬೇಕು. ‘ವಿಕ್ರಾಂತ್‍ ರೋಣ’ ಮಾಡಿದ್ದರಿಂದ ನಮ್ಮ ಸಾಮರ್ಥ್ಯ ಅರ್ಥವಾಯಿತು. ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾಗಳು. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಅದು ಬಹಳ ಅಪರೂಪದ ಚಿತ್ರವಾಗಿರುತ್ತದೆ ಮತ್ತು ಹಲವು ಭಾಷೆಗಳಲ್ಲಿ ಮೂಡಿಬರುತ್ತದೆ” ಎಂದು ಹೇಳಿದ್ದರು.

ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಪಾತ್ರವರ್ಗ ಹಾಗೂ ಇತರೆ ಮಾಹಿತಿ ಮುಂದಿನ ದಿನಗಳಲ್ಲಿ ರಿವೀಲ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.