![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2024, 5:17 PM IST
ಪುತ್ತೂರು: ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಕಂಟೈನರ್ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರದಲ್ಲಿ ಸೋಮವಾರ ಸಂಜೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಗು ಸಹಿತ ಐವರು ಗಾಯಗೊಂಡಿದ್ದಾರೆ.
ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಅಪ ಘಾತ ಸಂಭವಿಸಿದೆ. ಸುಳ್ಯ ದಿಂದ ಮಂಗಳೂರು ಆಸ್ಪತ್ರೆಗೆ ಮಗು ವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗ ಲಾಗುತಿತ್ತು. ಜಯಪ್ರಕಾಶ್ ಅವರು ಚಲಾಯಿಸುತ್ತಿದ್ದ ಆ್ಯಂಬು ಲೆನ್ಸ್ ಇದಾಗಿದ್ದು, ಇದರಲ್ಲಿ ಒಟ್ಟು ಐವರಿದ್ದರು. ಕಂಟೈನರ್ ಲಾರಿ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿತ್ತು.
ಘಟನ ಸ್ಥಳದಿಂದ ಇನ್ನೊಂದು ಆ್ಯಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಂಟೈನರ್ ಚಾಲಕ ಜೆಸಿಬಿಯೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದ್ದ ಎನ್ನಲಾಗಿದೆ.
ಅಪಘಾತದಿಂದ ಆ್ಯಂಬುಲೆನ್ಸ್ನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಂಟೈನರ್ಗೂ ಹಾನಿ ಉಂಟಾಗಿದೆ. ಕೆಲ ಕಾಲ ಸಂಚಾರ ಅಸ್ತವ್ಯಸ್ತ ಗೊಂಡಿತು. ಸಂಪ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.