Heavy Rain: ಕಲಬುರಗಿ ಜಿಲ್ಲೆಯಲ್ಲಿ ವ್ಯಾಪಕ ಮಳೆ; ಉತ್ತರಾಧಿಮಠ, ಗೋಶಾಲೆ ಜಲಾವೃತ
ಸತತ ಮಳೆಗೆ ಕಾಗಿಣಾ ನದಿ ಅಬ್ಬರ, ತುಂಬಿ ಹರಿಯುತ್ತಿರುವ ಹಳ್ಳ, ಕೊಳ್ಳಗಳು, ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು
Team Udayavani, Sep 2, 2024, 6:06 PM IST
ಕಲಬುರಗಿ: ಜಿಲ್ಲೆಯಲ್ಲಿ ಸತತ ಮೂರನೇ ದಿನವಾದ ಸೋಮವಾರವೂ ಮಳೆ ಮುಂದುವರಿದಿದ್ದು, ಹುಬ್ಬಿ ಮಳೆಯು ಹುಬ್ಬೇರಿವಂತೆ ಮಾಡಿದೆ. ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಿಂದಾಗಿ ಸೋಮವಾರ (ಸೆ. 2) ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದರು.
ಜಿಲ್ಲೆಯ ಚಿಂಚೊಳಿ ತಾಲೂಕಿನ ಗಾರಂಪಳ್ಳಿ ಗ್ರಾಮದ ಬಳಿಯ ಹಳ್ಳದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ನೀರು ಆವರಿಸಿರುವುದರಿಂದ ಕುರಿಗಳ ಸಾಗಿಸಲು ಕುರಿಗಾಹಿಗಳು ಹರಸಾಹಸ ಪಡಬೇಕಾಯಿತು. ಪ್ರತಿ ವರ್ಷ ಮಳೆಗಾಲದಲ್ಲೂ ಸೇತುವೆ ಮುಳುಗಡೆಯಿಂದಾಗಿ ಜನರ ಪರದಾಟ ತಪ್ಪುತ್ತಿಲ್ಲ. ಸತತ ಮಳೆಯಿಂದ ಕಲಬುರಗಿ ಜಿಲ್ಲೆಯಾದ್ಯಂತ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿದೆ.
ಮೀನು ಹಿಡಿಯಲು ತೆರಳಿ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ:
ಜಿಲ್ಲೆಯ ಸೇಡಂ ತಾಲೂಕಿನ ಕುರಕುಂಟಾ ಗ್ರಾಮದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೊಚ್ಚಿ ಹೋದ ಘಟನೆ ನಡೆದಿದೆ. ಕುರಕುಂಟಾ ಗ್ರಾಮದ ರಾಜು ನಾಮವಾರ (38) ಸತತ ಮಳೆಯ ನಡುವೆಯೂ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯವು ಮುಂದುವರಿದಿದ್ದು, ಕುರಕುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಾಧಿಮಠ, ಗೋ ಶಾಲೆಗೆ ಜಲ ದಿಗ್ಬಂಧನ:
ಕಾಗಿಣಾ ನದಿ ಅಬ್ಬರಕ್ಕೆ ಉತ್ತರಾಧಿಮಠದ ಗೋ ಶಾಲೆಗೂ ಜಲ ದಿಗ್ಬಂಧನ ಹಾಕಿದೆ. ಪ್ರಮುಖವಾಗಿ ಸೋಮವಾರದ
ಜಯತೀರ್ಥರ ಪೂಜಾ ಕೈಂಕರ್ಯಕ್ಕೂ ವರ್ಷಧಾರೆ ಅಡ್ಡಿ ಉಂಟು ಮಾಡಿದೆ. ನದಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ಮೂಲ ಬೃಂದಾವನ ಮುಳುಗಡೆಯಾಗಿದೆ. ಕಾಗಿಣಾ ನದಿ ಅಬ್ಬರಕ್ಕೆ ಉತ್ತರಾಧಿಮಠ ಅಕ್ಷರಶಃ ನಲುಗಿದೆ.
ಉತ್ತರಾಧಿಮಠದ ಗೋ ಶಾಲೆಯಲ್ಲಿ 40ಕ್ಕೂ ಹೆಚ್ಚು ಗೋವುಗಳಿದ್ದು ಸತತ ಮಳೆಯಿಂದಾಗಿ ಈಗ ಮೇವಿಗೂ ಸಮಸ್ಯೆ ಎದುರಾಗಿದೆ. ನಮ್ಮಲ್ಲಿ ಒಂದು ದಿನ ಮಟ್ಟಿಗೆ ಮೇವು ಶೇಖರಣೆ ಇದ್ದು, ನಾಳೆ ಗೋವುಗಳಿಗೆ ಸಂಕಷ್ಟ ಎದುರಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಮೇವು ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು. ನದಿ ನೀರಿನ ಪ್ರಮಾಣದಲ್ಲಿ ಕ್ಷಣ ಕ್ಷಣವೂ ಹೆಚ್ಚಾಗುತ್ತಲೇ ಇದೆ. ಮಠದ ಒಳಗಡೆ ತೆರಳಲು ಆಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ಮೇಲೆ ಜಯತೀರ್ಥರ ಪೂಜೆ ನಡೆಯುತ್ತೆ. ಅಲ್ಲಿಯವರೆಗೆ ಪೂಜಾ ಕೈಂಕರ್ಯ ನಡೆಯುವುದಿಲ್ಲ ಎಂದು ಉತ್ತರಾಧಿಮಠದ ಅರ್ಚಕರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.