Sugarcane; ಎರಡು ಕಬ್ಬಿನ‌ ತಳಿ ಬೆಳೆಯದಂತೆ ರೈತರಿಗೆ ಕೃಷಿ ವಿವಿ ಮನವಿ


Team Udayavani, Sep 2, 2024, 5:42 PM IST

Agriculture University appeals to farmers not to grow two varieties of sugarcane

ಧಾರವಾಡ: ಕಬ್ಬಿನ ಎರಡು ತಳಿಗಳಲ್ಲಿ ಶಿಲೀಂದ್ರ ರೋಗ ತೀವ್ರವಾಗಿ ಕಾಣಿಸಿಕೊಂಡಿದ್ದು, ಹೀಗಾಗಿ ಈ ಎರಡು ತಳಿಯ ಕಬ್ಬು ಬೆಳೆಯದಂತೆ ಹಾಗೂ ಇದರ ಬೀಜ ಖರೀದಿ, ಮಾರಾಟ ಮಾಡದಂತೆ ಕೃಷಿ ವಿಶ್ವವಿದ್ಯಾಲಯವು ಕಬ್ಬು ಬೆಳೆಗಾರರಿಗೆ ಮನವಿ ಮಾಡಿದೆ.

ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಸಂಶೋಧನಾ ಕೇಂದ್ರಗಳಲ್ಲಿ ಹಾಗೂ ಕೆಲ ರೈತ / ಸಂಸ್ಥೆಗಳ ಕ್ಷೇತ್ರಗಳಲ್ಲಿ ಪ್ರಾಯೋಗಿಕ ಹಂತದಲ್ಲಿದ್ದ ಎರಡು ಕಬ್ಬಿನ ತಳಿಗಳಲ್ಲಿ ಹೆಚ್ಚಿನ ಸಂಶೋಧನಾ ವಿಶ್ಲೇಷಣೆ ಕೈಗೊಳ್ಳಲಾಗಿದೆ. ಆಗ ಕಬ್ಬಿನ ತಳಿಗಳಾದ CoSNK 13436 ಮತ್ತು SNK 13374 ತಳಿಗಳು ಪಕ್ಕಾ ಬೋಯಿಂಗ್ ಎಂಬ ಗಾಳಿಯ ಮೂಲಕ ಹರಡುವ ಶಿಲೀಂದ್ರ ರೋಗಕ್ಕೆ ತೀವ್ರವಾಗಿ ತುತ್ತಾಗಿರುವ ಗುಣಲಕ್ಷಣಗಳು ಈಗಾಗಲೇ ಕಂಡು ಬಂದಿದ್ದು, ಹೀಗಾಗಿ ಈ ತಳಿಗಳನ್ನು ಬೆಳೆಯಬಾರದೆಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಕೃಷಿ ವಿಶ್ವವಿದ್ಯಾಲಯದ ವಿವಿಧ ಸಂಶೋಧನಾ ಕೇಂದ್ರಗಳಾದ ಮುಧೋಳ, ಸಂಕೇಶ್ವರ ಮತ್ತು ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ (ವಾಲ್ಮಿ) ಹಾಗೂ ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪದಲ್ಲಿ ಕೈಗೊಂಡ ಪ್ರಾಯೋಗಿಕ ಪರಿಶೀಲನಾ ಹಂತದ ತಾಕುಗಳಲ್ಲಿ ಈ ರೋಗವು ಅತಿಯಾಗಿ ಕಂಡು ಬಂದಿದ್ದು ದಾಖಲಾಗಿದೆ. ಹವಾಮಾನದ ವೈಪರೀತ್ಯಗಳಿಂದ ಉಂಟಾಗುವ ಉಷ್ಣತೆಯ ಏರುಪೇರುಗಳಿಗೆ ವಿಶೇಷವಾಗಿ ಹೆಚ್ಚು ಮಳೆಯಾದ ನಂತರ ಒಮ್ಮೆಲೆ ತಾಪಮಾನದಲ್ಲಿ ಉಷ್ಣ ತಾಪಮಾನ ಏರಿಕೆಯಾಗುವ (ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್) ಸಂದರ್ಭದಲ್ಲಿ ಈ ರೋಗವು ಹಠಾತ್ತಾಗಿ ಉಲ್ಬಣಗೊಳ್ಳುತ್ತದೆ. ಆದ್ದರಿಂದ, ಕೃಷಿ ವಿಶ್ವವಿದ್ಯಾಲಯದ ಹಿಂಗಾರು ವಲಯ ಸಂಶೋಧನಾ ಮತ್ತು ವಿಸ್ತರಣಾ ಸಲಹಾ ಸಮಿತಿಯ ನಡಾವಳಿಗಳ ಪ್ರಕಾರ ಈ ತಳಿಗಳನ್ನು ಬೆಳೆಯದಿರಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಕಾರಣ, ರೈತ ಬಾಂಧವರು ಈ ತಳಿಗಳ ಬೀಜಗಳನ್ನು ಯಾರಿಂದಲೂ ಖರೀದಿಸಕೂಡದೆಂದು ಮತ್ತು ಮಾರಾಟ ಮಾಡಬಾರದು ಎಂದು ಕೃಷಿ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.