KPSC: ಮರು ಪರೀಕ್ಷೆಗೆ ಸೂಚನೆ; ಸರಕಾರದ ನಿರ್ಧಾರ ವಿವೇಚನಾಯುತ: ಶಾಸಕ ಯತ್ನಾಳ್‌

ಲೋಕಸೇವಾ ಆಯೋಗದಲ್ಲಿ ಕೆಲವು ಸುಧಾರಣೆಗಳ ತರಲು ಬಿಜೆಪಿ ನಾಯಕ ನೀಡಿದ ಸಲಹೆಗಳೇನು ಗೊತ್ತಾ?

Team Udayavani, Sep 2, 2024, 10:07 PM IST

yathnal

ಬೆಂಗಳೂರು: ಕೆಪಿಎಸ್‌ಸಿ(KPSC) ಗೆಜೆಟೆಡ್‌ ಪ್ರೊಬೆಷನರಿ (Gazetted Probationers) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ, ದೋಷದಿಂದಾಗಿ ಮರು ಪರೀಕ್ಷೆಗೆ ಆಗ್ರಹಿಸಿದ್ದ ಪರೀಕ್ಷಾರ್ಥಿಗಳಿಗೆ  ಅನುಕೂಲ ಮಾಡಿದ ರಾಜ್ಯ ಸರಕಾರದ ನಿರ್ಧಾರವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಾಗತಿಸಿದ್ದಾರೆ.

ಆ.​ 27ರಂದು ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ  350 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ತರ್ಜುಮೆ ದೋಷ ಕಂಡು ಬಂದಿದ್ದರಿಂದ ಈ ಕುರಿತು ಶಾಸಕ ಯತ್ನಾಳ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೆಪಿಎಸ್​​ಸಿ ವಿರುದ್ಧ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆ, ಮರು ಪರೀಕ್ಷೆ ನಡೆಸಬೇಕೆಂಬ ಕೂಗು ಜೋರಾಗಿ ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿಕ್ರಿಯಿಸಿ “ಕೆಎಎಸ್ ಪರೀಕ್ಷಾರ್ಥಿಗಳ ಹಾಗೂ ನಮ್ಮ ನಿರಂತರ ಪ್ರಯತ್ನ, ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮರುಪರೀಕ್ಷೆ ಮಾಡಲು ನಿರ್ಧರಿಸಿದೆ. ಈ ವಿವೇಚನಾಯುತ ನಿರ್ಧಾರವನ್ನು ಸ್ವಾಗತಿಸಿ, ಈ ಕೆಳಕಂಡ ಸುಧಾರಣೆಗಳ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಸರ್ಕಾರ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಆಯೋಗಕ್ಕೆ ಶಾಸಕ ಯತ್ನಾಳ್‌ ಸಲಹೆಗಳು ಈ ಕೆಳಗಿನಂತಿವೆ:
1
. ಪರೀಕ್ಷಾರ್ಥಿಗಳು ವಾಸಿಸುವ ಊರು ಅಥವಾ ಗರಿಷ್ಠ  50 ಕಿ.ಮೀ. ದೂರವಿರುವ ಪರೀಕ್ಷಾ ಕೇಂದ್ರದಲ್ಲೇ ಅವರಿಗೆ ಪರೀಕ್ಷೆ ಬರೆಯುವ ಅವಕಾಶ ನೀಡಬೇಕು.

2. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಭಾನುವಾರವೇ ಪರೀಕ್ಷೆ ಆಗಬೇಕು ಮತ್ತು ಯಾವುದೇ ಇತರೆ ಪರೀಕ್ಷೆ ಇದ್ದ ದಿನ ಶೆಡ್ಯೂಲ್‌ ಮಾಡಬಾರದು

3. ಲೋಕಸೇವಾ ಆಯೋಗದಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ ಐಎಎಸ್‌ ಕೆ.ಎಸ್.ಲತಾ ಕುಮಾರಿ ಅವರನ್ನು ಆಯೋಗದ ಕಾರ್ಯದರ್ಶಿಯಾಗಿ ನೇಮಕ ಮಾಡಬೇಕು.

4. ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷಾ ನಿಯಂತ್ರಕರನ್ನು (ಕಂಟ್ರೋಲರ್‌ ಆಫ್‌ ಎಕ್ಸ್‌ಮಿನೇಷನ್‌)  ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡಬೇಕು. ಹಾಗೆಯೇ ಆಯೋಗದ ಅಧ್ಯಕ್ಷರನ್ನು ಕೂಡಲೇ ಬದಲಿಸಲಿ.

5. ಆಯೋಗವು ಆಯೋಜಿಸಿದ್ದ ಎಲ್ಲಾ ಪರೀಕ್ಷೆಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು.

6. ಆಯೋಗವು ನಡೆಸುವ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ನಡೆದ 100 ದಿನಗಳಲ್ಲಿ ಬಿಡುಗಡೆ ಮಾಡಬೇಕು.

7. ಪ್ರಶ್ನೆ ಪತ್ರಿಕೆಯ ಗುಣಮಟ್ಟವನ್ನು ಧೃಡೀಕರಿಸಲು ಆಯೋಗದ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಆಗಬೇಕು. ಆಯೋಗದಲ್ಲೇ ಪ್ರಶ್ನೆಗಳು ತರ್ಜುಮೆ ಆಗಬೇಕು.

8. ಪರೀಕ್ಷೆಯ ಕ್ಯಾಲೆಂಡರ್ ಅನ್ನು ಮುಂಚಿತವಾಗಿಯೇ ಆಯೋಗ ಪ್ರಕಟಿಸಬೇಕು. ಇದರಿಂದ ಪರೀಕ್ಷಾರ್ಥಿಗಳಿಗೆ ಎಷ್ಟು ಸಮಯ ಇದೆ ಮತ್ತು ಅವರ ಅಧ್ಯಯನಕ್ಕೆ ಸಹಕಾರಿಯಾಗಲಿದೆ.

9. ಆಯೋಗದಲ್ಲಿರುವ ಭ್ರಷ್ಟರು, ದಲ್ಲಾಳಿಗಳ ಮೇಲೆ ಹಾಗೂ ಪರೀಕ್ಷಾರ್ಥಿಗಳ ಹಿತಾಸಕ್ತಿಯ ವಿರುದ್ಧ ನಿರ್ಧಾರವನ್ನು ಕೈಗೊಳ್ಳುವವರ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅಂತಹವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಿ ಅಥವಾ ಶಿಸ್ತು ಕ್ರಮ ಜರುಗಿಸಿ.

10. ಪರೀಕ್ಷೆಗಳು ಸಂಪೂರ್ಣವಾಗಿ ಪಾರದರ್ಶಕವಾಗಿರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಫೂಲ್‌ ಪ್ರೂಫ್‌  ವ್ಯವಸ್ಥೆ ಕಲ್ಪಿಸಲಿ ಎಂದು ಶಾಸಕ ಯತ್ನಾಳ್‌ ಆಯೋಗಕ್ಕೆ ಹಾಗೂ ಸರಕಾರಕ್ಕೆ ಸಲಹೆಗಳ ನೀಡಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.