MUDA ಸಿಎಂ ನಂಟು; ಅರ್ಜಿದಾರರ ವಾದ : ದೂರುದಾರರ ವಾದವೇನು?

 ಮುಖ್ಯಮಂತ್ರಿ ಪಾತ್ರದ ಬಗ್ಗೆ ಸರಣಿ ದೃಷ್ಟಾಂತ ಕೊಟ್ಟ ವಕೀಲ ಕೆ.ಜಿ. ರಾಘವನ್‌... ನಿವೇಶನ ಪ್ರಕ್ರಿಯೆ ವೇಳೆ ಅಧಿಕಾರದಲ್ಲಿ ಸಿದ್ದರಾಮಯ್ಯ

Team Udayavani, Sep 3, 2024, 6:30 AM IST

siddanna-2

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರ ಇರುವುದಕ್ಕೆ ಒಂದಲ್ಲ, ಎರಡಲ್ಲ ಸಾಲು-ಸಾಲು ಸಾಕ್ಷ್ಯಗಳಿವೆ. ಮುಖ್ಯವಾಗಿ 50:50ರ ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಪ್ರಾಧಿಕಾರ 2017ರಲ್ಲಿ ತೆಗೆದುಕೊಂಡ ನಿರ್ಣಯ ಸಿದ್ದರಾಮಯ್ಯ ಅವರ ಪಾತ್ರ ಇರುವುದಕ್ಕೆ ಬಹುದೊಡ್ಡ ಲಿಂಕ್‌ ಆಗಿದೆ. ಏಕೆಂದರೆ ಆ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು ಎಂದು ಹಿರಿಯ ವಕೀಲ ಕೆ.ಜಿ. ರಾಘವನ್‌ ಹೈಕೋರ್ಟ್‌ ಮುಂದೆ ಪ್ರಬಲವಾಗಿ ವಾದ ಮಂಡಿಸಿದರು.

ಅಷ್ಟೇ ಅಲ್ಲ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಡಾಕ್ಕೆ ಅರ್ಜಿ ಸಲ್ಲಿಸಿದಾಗಲೂ ಸಿದ್ದರಾಮಯ್ಯ ಸಿಎಂ ಆಗಿದ್ದರು. ವಿವಾದಿತ ಜಮೀನು 1997ರಲ್ಲಿ ಭೂಸ್ವಾಧೀನ, 1998ರಲ್ಲಿ ಡಿನೋಟಿಫೈ ಮಾಡಲಾಯಿತು. 1996ರಿಂದ 1999ರ ವರೆಗೆ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. 2004ರಲ್ಲಿ ಮಾರಾಟ, 2005ರಲ್ಲಿ ಭೂಪರಿವರ್ತನೆ ಆಯಿತು. ಆಗಲೂ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. 2022ರಲ್ಲಿ ಅವರ ಪತ್ನಿಗೆ 14 ನಿವೇಶನ ಹಂಚಿಕೆ ಆಯಿತು. ಇದು ಅವರು ಅಧಿಕಾರದಲ್ಲಿ ಇಲ್ಲದಾಗ ನಡೆಯಿತು ಎನ್ನುತ್ತಾರೆ. ಆದರೆ 2022ರ ತೀರ್ಮಾನ ಆಗಿದ್ದು, 2017ರ ಮುಡಾ ನಿರ್ಣಯದಂತೆ. ಈಗ 2023ರ ಮೇ ತಿಂಗಳಿಂದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಸಿಎಂ ಪಾತ್ರದ ಬಗ್ಗೆ ದೃಷ್ಟಾಂತಗಳನ್ನು ಕಾಲಾನುಕ್ರಮವಾಗಿ ರಾಘವನ್‌ ನ್ಯಾಯಾಲಯಕ್ಕೆ ವಿವರಿಸಿದರು.

ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಟ್ಟಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ. ರಾಘವನ್‌, ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್‌ ಕೇಳಿದ್ದ ಪ್ರಶ್ನೆಗೆ ಉತ್ತರಿಸಲು ಪ್ರಯತ್ನಿಸಿದರಲ್ಲದೆ, ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇದೆ. ತನಿಖೆ ನಡೆದು ಸತ್ಯ ಹೊರಬರಬೇಕಾದರೆ ಸಿಎಂ ಅರ್ಜಿ ವಿಚಾರಣೆಗೆ ಪರಿಗಣಿಸಬಾರದು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಅಧಿಕಾರದಲ್ಲಿದ್ದರು

ಹಗರಣದ ವಿಚಾರಣೆಗೆ ಸರಕಾರ ನ್ಯಾಯಾಂಗ ಆಯೋಗ ರಚಿಸಿದೆ. ಆದರೆ ನ್ಯಾಯಾಂಗ ಆಯೋಗದ ವರದಿಗಳು ಜಾರಿಯಾಗುವುದಿಲ್ಲ. ಈ ಹಂತದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಮಾನ್ಯ ಮಾಡಿ, ತನಿಖೆ ತಡೆಹಿಡಿಯದೇ ಸತ್ಯ ಅನಾವರಣಗೊಳ್ಳಲು ಅವಕಾಶ ಕೊಡಬೇಕು. ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತಾವು ಕೇಳಿದ್ದೀರಿ, ಇದಕ್ಕಿಂತ ಬೇರೇನು ಬೇಕು? ಇದೆಲ್ಲ ನಡೆದಾಗ ಸಿದ್ದರಾಮಯ್ಯನವರು ಒಂದೋ ಡಿಸಿಎಂ ಆಗಿದ್ದರು, ಇಲ್ಲವೇ ಸಿಎಂ ಆಗಿದ್ದರು. ಒಂದು ತಪ್ಪಾದರೆ ಬಿಟ್ಟು ಬಿಡಬಹುದು. ಆದರೆ, ಪದೇ ಪದೆ ನಡೆದರೆ ದುರುದ್ದೇಶವಿದೆ ಎಂದರ್ಥ. 1998ರಲ್ಲಿ 4.24 ಲಕ್ಷ ರೂ. ಮೌಲ್ಯದ 14 ನಿವೇಶನ ಹಂಚಲಾಗಿದೆ. ಸಿದ್ದರಾಮಯ್ಯನವರ ಪತ್ನಿಗೆ ಬೇಕಾದಂತೆ ನಿಯಮ ಬದಲಿಸಿಕೊಂಡಿದ್ದಾರೆ. ಸಿಎಂ ಪತ್ನಿಗೆ 14 ನಿವೇಶನ ಬಳಿಕ 50:50 ಅನುಪಾತದ ನಿವೇಶನ ಹಂಚಿಕೆಯನ್ನು ರದ್ದುಪಡಿಸಲಾಗಿದೆ. ತನಿಖೆ ನಡೆಸಲು ಇನ್ನೆಷ್ಟು ಸಂಗತಿಗಳು ಬೇಕು. ಸಿಎಂ ಪಾತ್ರದ ಬಗ್ಗೆ ಇನ್ನೇನು ಸಾಕ್ಷಿಗಳು ಬೇಕು. 2017ರ ಮುಡಾ ನಿರ್ಣಯಕ್ಕೂ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೂ ಸಂಬಂಧವಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶುದ್ಧತೆ ಕಾಪಾಡಲು ತನಿಖೆಯ ಅಗತ್ಯವಿದೆ.

ಹೀಗಾಗಿ  ರಾಜ್ಯಪಾಲರ ಆದೇಶದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಬಾರದು ಎಂದು ರಾಘವನ್‌ ಮನವಿ ಮಾಡಿದರು.

ದೂರುದಾರರ ವಾದವೇನು?

ಭೂಸ್ವಾಧೀನ, ಡಿನೋಟಿಫೈ ವೇಳೆ ಡಿಸಿಎಂ ಆಗಿದ್ದ ಸಿದ್ದರಾಮಯ್ಯ

ಮಾರಾಟ, ಭೂ ಪರಿವರ್ತನೆ ವೇಳೆಯೂ ಉಪಮುಖ್ಯಮಂತ್ರಿ

2022ರಲ್ಲಿ ಸಿಎಂ ಪತ್ನಿಗೆ ಸೈಟ್‌ ಸಿಕ್ಕಿದ್ದು 2017ರ ನಿರ್ಣಯದಂತೆ

ಸಿಎಂ ಪಾತ್ರದ ಬಗ್ಗೆ ಹಿಂದಿನ ವಿಚಾರಣೆ ವೇಳೆ ಕೇಳಿದ್ದ ಹೈಕೋರ್ಟ್‌

ಉತ್ತರಿಸಲು ಪ್ರಯತ್ನಿಸಿದ ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್‌

ಯುಟ್ಯೂಬ್‌ನಲ್ಲಿ 7  ಸಾವಿರಕ್ಕೂ ಹೆಚ್ಚು ವೀಕ್ಷಣೆ

ಸೋಮವಾರ ನಡೆದ ಹೈಕೋರ್ಟ್‌ ಕಲಾಪದ ನೇರ ಪ್ರಸಾರವನ್ನು ಯುಟ್ಯೂಬ್‌ನಲ್ಲಿ 7 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದರು.

ಆಡಳಿತದಲ್ಲಿ ಪಾವಿತ್ರ್ಯ ತರಲು ಕಾಯ್ದೆ ರಚನೆ: ರಾಘವನ್‌

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್‌ 17ಎ ಅಡಿ ಪೊಲೀಸ್‌ ಅಧಿಕಾರಿ ತನಿಖೆಗೆ ಅನುಮತಿ ಕೋರುವ ಅಗತ್ಯವೇ ಇಲ್ಲ. ಯಾರೂ ಮನವಿ ಮಾಡದಿದ್ದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದು. ಸೆಕ್ಷನ್‌ 7ಸಿ ಅಡಿ ಅನುಚಿತ ಲಾಭ, ಅನುಕೂಲ ಪಡೆಯುವುದೂ ಅಪರಾಧ. ಕಾನೂನುಬಾಹಿರವಲ್ಲದಿದ್ದರೂ ಸರಕಾರಿ ನೌಕರನ ಮೇಲೆ ವೈಯಕ್ತಿಕ ಪ್ರಭಾವ ಬೀರಿ ಕೆಲಸ ಮಾಡಿಸಿಕೊಂಡರೂ ಈ ಸೆಕ್ಷನ್‌ ಅಡಿ ಅಪರಾಧವಾಗಲಿದೆ. ಒಬ್ಬ ಸಚಿವ ತನ್ನ ಇಲಾಖೆಯಲ್ಲದೆ ಬೇರೆ ಇಲಾಖೆಯ ಕೆಲಸದ ಮೇಲೆ ಪ್ರಭಾವ ಬೀರಿದರೂ ಅದು ಅಪರಾಧ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯ ಕಾಪಾಡಲು ಈ ಕಾಯ್ದೆ ರಚಿಸಲಾಗಿದೆ. ಏನೇ ಅಪರಾಧವಿಲ್ಲದಿದ್ದರೂ ಆಡಳಿತದ ಶುದ್ಧತೆ ಕಾಪಾಡಲೂ ಅಭಿಯೋಜನೆಗೆ ಅನುಮತಿ ನೀಡಬಹುದು. ಜನಸೇವಕರ ವಿಶ್ವಾಸಾರ್ಹತೆ ಬಗ್ಗೆ ಗುಲಗುಂಜಿಯಷ್ಟು ಅನುಮಾನ ಮೂಡಿದರೂ ಅದು ಅವರ ವೈಯಕ್ತಿಕ ವಿಚಾರ ಆಗುವುದಿಲ್ಲ, ಅವರು ಪ್ರತಿನಿಧಿಸುವ ವ್ಯವಸ್ಥೆಯ ವಿಚಾರ ಆಗುತ್ತದೆ. ಆಡಳಿತದಲ್ಲಿ ಎತ್ತರಕ್ಕೆ ಹೋದಷ್ಟೂ ತನಿಖೆಯ ಅಗತ್ಯ ಹೆಚ್ಚಿದೆ. ಹೀಗಾಗಿ ರಾಜ್ಯಪಾಲರ ಆದೇಶದಲ್ಲಿ ಕೋರ್ಟ್‌ ಮಧ್ಯಪ್ರವೇಶಿಸಬಾರದು. ತನಿಖೆ ಅಗತ್ಯವಿಲ್ಲವೆಂದಾದರೆ ಮುಡಾ ಹಗರಣದ ತನಿಖೆಗೆ ವಿಚಾರಣಾ ಆಯೋಗವನ್ನೇಕೆ ಸರಕಾರ ನೇಮಿಸಿದೆ ಎಂದು ರಾಘವನ್‌ ಪ್ರಶ್ನಿಸಿದರು.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.