Water;ರಾಜ್ಯೋತ್ಸವ ವೇಳೆಗೆ ಎತ್ತಿನಹೊಳೆಯಿಂದ 5 ಟಿಎಂಸಿ ನೀರು:ಮುಂದಿನ ಮುಂಗಾರಿಗೆ ತುಮಕೂರಿಗೆ

ವರ್ಷಕ್ಕೊಮ್ಮೆ ಜಲಾಶಯಗಳ ಸುರಕ್ಷೆ ಪರಿಶೀಲನೆ

Team Udayavani, Sep 3, 2024, 6:36 AM IST

1—-yettin

ಬೆಂಗಳೂರು: ಮಹತ್ವಾ ಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಗೌರಿಹಬ್ಬ ದಂದು (ಸೆ. 6) ಚಾಲನೆ ದೊರೆಯ ಲಿದ್ದು, ನೀರನ್ನು ಮೇಲಕ್ಕೆ ಎತ್ತುವ ಪಂಪ್‌ಗ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವೇಳೆಗೆ ಒಟ್ಟಾರೆ 5 ಟಿಎಂಸಿ ನೀರೆತ್ತಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಂಪ್‌ ಮಾಡಿದ ನೀರನ್ನು ವೇದಾ ವ್ಯಾಲಿಯ ಮೂಲಕ 132 ಕಿ.ಮೀ. ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುವುದು. ತಾತ್ಕಾಲಿಕವಾಗಿ 1,500 ಕ್ಯುಸೆಕ್‌ ನೀರು ಹರಿಸಲು ಯೋಜಿಸಲಾಗಿದೆ. ನವೆಂಬರ್‌ 1ರ ವೇಳೆಗೆ 5 ಟಿಎಂಸಿ ನೀರೆತ್ತಲಾಗುವುದು. ಉದ್ದೇಶಿತ ಯೋಜನೆ ಅಡಿ ಒಟ್ಟಾರೆ 24 ಟಿಎಂಸಿ ನೀರೆತ್ತುವ ಗುರಿ ಇದೆ ಎಂದರು.

4 ತಿಂಗಳಲ್ಲಿ ಪೂರ್ಣ
ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್‌ ಮಾಡಿದ ನೀರನ್ನು 132 ಕಿ.ಮೀ. ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಯೋಜನೆಗೆ ಅರಣ್ಯಭೂಮಿ ತಕರಾರು ಇದ್ದು ಅದನ್ನೂ ಈಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. 502 ಎಕರೆ ಅರಣ್ಯಭೂಮಿ ಆವಶ್ಯಕತೆ ಇದ್ದು, ಪರ್ಯಾಯವಾಗಿ 452 ಎಕರೆ ಭೂಮಿಯನ್ನು ನೀಡಲಾಗಿದೆ. ಶೀಘ್ರ ಇದು ಇತ್ಯರ್ಥವಾಗಲಿದ್ದು, ಮುಂದಿನ 4 ತಿಂಗಳಲ್ಲಿ ಈ ಭೂಮಿಯಲ್ಲಿ ಕಾಮಗಾರಿಯೂ ಪೂರ್ಣಗೊಳ್ಳಲಿದೆ. ಇದರೊಂದಿಗೆ 140 ಕಿ.ಮೀ. ದೂರದ ಬರದನಾಡು ತುಮಕೂರಿಗೆ ನೀರುಹರಿಯುವ ಮಾರ್ಗ ಸುಗಮವಾಗಲಿದೆ. 2025ರ ಮುಂಗಾರು ವೇಳೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಹೇಳಿದರು.

ಯೋಜನೆಯ ವಿರುದ್ಧವಾಗಿ ಒಂದಷ್ಟು ಜನ ಬ್ಲಾಕ್‌ವೆುàಲ್‌ ಮಾಡುತ್ತಿದ್ದರು. ನಾನು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಕಾರ್ಯಪ್ರವೃತ್ತವಾಗಿ ಈ ಯೋಜನೆ ಪೂರ್ಣಗೊಳಿಸಲು ಮುಂದಾದೆ. ಹಿಂದಿನ ಸರಕಾರವೂ ಸಾಕಷ್ಟು ಪ್ರಯತ್ನಿಸಿತ್ತು, ಆದರೆ ಸಹಕಾರ ಸಿಕ್ಕಿರಲಿಲ್ಲ.
-ಡಿ.ಕೆ. ಶಿವಕುಮಾರ್‌, ಡಿಸಿಎಂ

ವರ್ಷಕ್ಕೊಮ್ಮೆ ಜಲಾಶಯಗಳ ಸುರಕ್ಷೆ ಪರಿಶೀಲನೆ: ಡಿಸಿಎಂ
ಕಬಿನಿ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ಜಲಾಶಯಗಳ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್‌ ನೇತೃತ್ವದಲ್ಲಿ “ಜಲಾಶಯಗಳ ಸುರಕ್ಷೆ ಪರಿಶೀಲನೆ ಸಮಿತಿ’ ರಚಿಸಲಾಗಿದೆ. ಅದು ವರ್ಷಕ್ಕೊಮ್ಮೆ ನೀರಿನ ಪ್ರಮಾಣ ಕಡಿಮೆ ಇದ್ದಾಗ ಪರಿಶೀಲನೆ ಮಾಡಿ ವರದಿ ನೀಡಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮಿತಿಯು ಈಗಾಗಲೇ ತುಂಗಭದ್ರಾ ಅಣೆಕಟ್ಟಿಗೆ ಸಂಬಂಧಿಸಿದಂತೆ ಆ. 16ರಂದು ವಿಶೇಷ ಸಭೆ ನಡೆಸಿದೆ. ಸಮಗ್ರ ಅಧ್ಯಯನ ನಡೆಸಿ, ವರದಿ ನೀಡಲಿದೆ. ಅದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ತುಂಗಭದ್ರಾ ಮಾತ್ರವಲ್ಲ; ಕಬಿನಿ ಜಲಾಶಯದ ಸ್ಥಿತಿಗತಿ ಬಗ್ಗೆಯೂ ಕೆಲವು ವರದಿಗಳಾಗಿವೆ. ಅದನ್ನೂ ಈ ಸಮಿತಿ ಅಧ್ಯಯನ ಮಾಡಲಿದೆ. ಅಷ್ಟೇ ಅಲ್ಲ, ರಾಜ್ಯದ ಪ್ರಮುಖ ಜಲಾಶಯಗಳ ಹೈಡ್ರಾಲಿಕ್‌ ಮಾದರಿಗಳು, ಗೇಟ್‌ಗಳು ಸೇರಿದಂತೆ ವಿವಿಧ ಪ್ರಕಾರದ ಅಧ್ಯಯನ ಮಾಡಲಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆ ಇದ್ದಾಗ, ವರ್ಷಕ್ಕೊಮ್ಮೆ ಪ್ರಮುಖ ಜಲಾಶಯಗಳ ಪರಿಶೀಲನೆಯನ್ನೂ ಈ ಸಮಿತಿ ಮಾಡಲಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.