All India ಪೀಠಾಸೀನಾಧಿಕಾರಿಗಳ ಸಮ್ಮೇಳನ:ರಾಜ್ಯದಲ್ಲಿ ನಡೆಸುವಂತೆ ಓಂ ಬಿರ್ಲಾಗೆ ಖಾದರ್ ಮನವಿ
Team Udayavani, Sep 3, 2024, 12:07 AM IST
ಮಂಗಳೂರು: ಪ್ರತಿವರ್ಷ ನಡೆಯುವ ಅಖಿಲ ಭಾರತ ಪೀಠಾಸೀನಾ ಧಿಕಾರಿಗಳ ಸಮ್ಮೇಳನ ವನ್ನು ಕರ್ನಾಟಕದಲ್ಲಿ ನಡೆಸುವಂತೆ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸೋಮವಾರ ಭೇಟಿಯಾಗಿ ಮನವಿ ಸಲ್ಲಿಸಿದರು.
85ನೇ ಸಮ್ಮೇಳನವನ್ನು ಕರ್ನಾಟಕದಲ್ಲಿ ನಡೆಸುವಂತೆ ವಿನಂತಿಸಿದರು.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಓಂ ಬಿರ್ಲಾ, ಈ ಬಗ್ಗೆ ದಿಲ್ಲಿಯ ಸಂಸತ್ ಭವನದಲ್ಲಿ ಸೆ. 23 ಹಾಗೂ 24ರಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಸ್ಪೀಕರ್ ಖಾದರ್ ಅವರು ಕರ್ನಾಟಕ ವಿಧಾನಸಭೆಯಲ್ಲಿ ಜಾರಿಗೆ ತರಲಾಗಿರುವ ಕೆಲವು ಮಹತ್ವದ ನಿರ್ಣಯಗಳ ಬಗ್ಗೆ ಓಂ ಬಿರ್ಲಾ ಅವರ ಗಮನಕ್ಕೆ ತಂದರು. ಸದನ ಬೆಳಗ್ಗೆ 11ರ ಬದಲು 9 ಗಂಟೆಗೆ ಆರಂಭಿಸುವುದು, ಸಮಯಕ್ಕೆ ಸರಿಯಾಗಿ ಆಗಮಿಸಿದ 23 ಸದಸ್ಯರಿಗೆ ಗೌರವ, ವಿಧಾನಸಭೆಯ ಮೊಗಸಾಲೆಯಲ್ಲಿ ಅತ್ಯುತ್ತಮ ಉಪಾಹಾರ ಹಾಗೂ ಭೋಜನದ ವ್ಯವಸ್ಥೆ, ಕೃತಕ ಬುದ್ಧಿಮತ್ತೆ ಮೂಲಕ ಸದಸ್ಯರು ಸದನದಲ್ಲಿ ಕಳೆದ ಸಮಯದ ಮಾಹಿತಿ ಪಡೆದುಕೊಳ್ಳುವುದು, ಸದನದೊಳಗೆ ಸಂವಿಧಾನದ ಪೀಠಿಕೆ ಅಳವಡಿಕೆ, ಸಂವಿಧಾನ ಕ್ಲಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆರಂಭಿಸಿ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ ಮುಂತಾದವುಗಳನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.