Mutt Visit: ಸಿದ್ದನಕೊಳ್ಳ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ
ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಗದ್ದುಗೆ ದರ್ಶನ, ಡಾ.ಶಿವಕುಮಾರ್ ಸ್ವಾಮೀಜಿ ಆಶೀರ್ವಾದ ಪಡೆದ ಬಿಜೆಪಿ ನಾಯಕ
Team Udayavani, Sep 3, 2024, 12:23 AM IST
ಅಮೀನಗಡ (ಬಾಗಲಕೋಟೆ ಜಿಲ್ಲೆ) : ಧಾರ್ಮಿಕ ಕ್ಷೇತ್ರ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ, ನಿರಂತರ ದಾಸೋಹ ಮಠ ಎಂದೇ ಹೆಸರುವಾಸಿಯಾಗಿರುವ ಇಳಕಲ್ ತಾಲೂಕಿನ ಸಿದ್ದನಕೊಳ್ಳ ಮಠಕ್ಕೆ ಸೋಮವಾರ ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭೇಟಿ ನೀಡಿದರು.
ಬಳಿಕ ಸಿದ್ದನಕೊಳ್ಳ ಮಠದ ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದರಲ್ಲದೇ, ಧರ್ಮಾಧಿಕಾರಿ ಡಾ.ಶಿವಕುಮಾರ್ ಸ್ವಾಮೀಜಿ ಆಶೀರ್ವಾದ ಪಡೆದರು. ಸಿದ್ದನಕೊಳ್ಳ ಮಠವು ರಾಷ್ಟ್ರಕೂಟರು, ಚಾಲುಕ್ಯರ ಕಾಲದಿಂದಲೂ ಈ ಮಠ ಖ್ಯಾತಿ ಪಡೆದಿದ್ದು, ಸಿದ್ದಿ ಪುರುಷರ ನೆಚ್ಚಿನ ತಾಣವಾಗಿದೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿದ್ದನಕೊಳ್ಳಕ್ಕೆ ಭೇಟಿ ಮಾಡಿದ ನಂತರ ಸಂಸದರಾಗಿ, ಕೇಂದ್ರ ಸಚಿವರಾದ ನಂತರ ಶ್ರಾವಣ ಮಾಸದ ಕೊನೆಯ ಸೋಮವಾರ ಅಮಾವಾಸ್ಯೆ ದಿನದಂದೇ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಸುಕ್ಷೇತ್ರ ಸಿದ್ದನಕೊಳ್ಳಕ್ಕೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಕರದಂಟು ಸವಿದ ನಳಿನ್:
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸೋಮವಾರ ಸಿದ್ದನಕೊಳ್ಳಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಅಮೀನಗಡ ಪಟ್ಟಣದ ವಿಜಯಾ ಕರದಂಟು ಮಳಿಗೆ ಭೇಟಿ ನೀಡಿ ಕರದಂಟು ಸವಿದರು. ಈ ವೇಳೆ ಕರದಂಟು ಉದ್ಯಮಿ ಸಂತೋಷ ಐಹೊಳ್ಳಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಸನ್ಮಾನ ಮಾಡಿ, ಕರದಂಟು ನೀಡಿ, ಕರದಂಟು ಬಗ್ಗೆ ಮಾಹಿತಿ ನೀಡಿದರು. ಕರದಂಟು ಉದ್ಯಮದ ಬಗ್ಗೆ ಮಾಹಿತಿ ಪಡೆದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಕರದಂಟು ಉದ್ಯಮಕ್ಕೆ ಶುಭಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.