Bulldozer ನ್ಯಾಯಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಆರೋಪಿಗಳ ಮನೆ, ಆಸ್ತಿ ಕೆಡಹುವುದಕ್ಕೆ ಆಕ್ಷೇಪ
Team Udayavani, Sep 3, 2024, 7:10 AM IST
ಹೊಸದಿಲ್ಲಿ: “ಬುಲ್ಡೋಜರ್ ನ್ಯಾಯ’ದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ ಆರೋಪ ಕೇಳಿ ಬಂದಾಕ್ಷಣ ಆರೋಪಿಯ ಮನೆ ಅಥವಾ ಕಟ್ಟಡವನ್ನು ಹೇಗೆ ನೆಲಸಮ ಮಾಡು ತ್ತೀರಿ ಎಂದು ಸರಕಾರವನ್ನು ಪ್ರಶ್ನಿಸಿದೆ. ಅಲ್ಲದೆ ಈ ಕುರಿತು ಮಾರ್ಗ ದರ್ಶಿ ರೂಪಿಸುವ ಪ್ರಸ್ತಾವ ಮಾಡಿದೆ.
ಒಂದು ವೇಳೆ ಆರೋಪಿ ಶಿಕ್ಷೆಗೆ ಗುರಿಯಾಗಿದ್ದರೂ ಆತನಿಗೆ ಸಂಬಂಧಿಸಿದ ಮನೆಯನ್ನು ಸೂಕ್ತಕಾನೂನು ಪ್ರಕ್ರಿಯೆಗಳು ಇಲ್ಲದೆ ನೆಲಸಮ ಮಾಡುವಂತಿಲ್ಲ ಎಂದು ನ್ಯಾ| ಬಿ.ಆರ್. ಗವಾಯಿ ಮತ್ತು ನ್ಯಾ| ಕೆ.ವಿ. ವಿಶ್ವನಾಥ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.
ಕಟ್ಟಡಗಳ ಬುಲ್ಡೋಜರ್ ಕಾರ್ಯಾಚರಣೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಪಟ್ಟು, ಮುಂದಿನ ವಿಚಾರಣೆಯನ್ನು ಸೆ. 17ಕ್ಕೆ ಮುಂದೂಡಿತು. ಅಲ್ಲದೆ ಈ ಕುರಿತು ಸಲಹೆಗಳನ್ನೂ ಆಹ್ವಾನಿಸಿತು.
ಸರಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್, ಕಟ್ಟಡ ನೆಲಸಮ ಕಾರ್ಯಾಚರಣೆಯನ್ನು ಕೋರ್ಟ್ ಮುಂದೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ವಾದಿಸಿದರು. ಆಗ ಪೀಠವು ಹಾಗಿದ್ದರೆ ಈ ಕುರಿತು ನ್ಯಾಯಾಲಯವು ಸಮಗ್ರ ದೇಶಕ್ಕೆ ಅನ್ವಯವಾಗುವಂತೆ ಮಾರ್ಗದರ್ಶಿಗಳನ್ನು ಸೂಚಿಸಲಿದೆ ಎಂದು ಹೇಳಿತು.
ಉದಾಹರಣೆ ಸಹಿತ ವಾದ: ಅರ್ಜಿದಾರರ ಪರ ವಾದ ಮಂಡಿಸಿದ ದುಷ್ಯಂತ್ ದವೆ ಮತ್ತು ಸಿ.ಯು. ಸಿಂಗ್, ದಿಲ್ಲಿಯ ಜಹಾಂಗೀರ್ಪುರಿಯಲ್ಲಿ ಬಾಡಿಗೆ ನೀಡಿದ ಮನೆಯನ್ನು ಧ್ವಂಸ ಮಾಡಲಾಗಿದೆ. ಪುತ್ರ ಅಥವಾ ಬಾಡಿಗೆದಾರ ಕಾನೂನುಬಾಹಿರ ಕೃತ್ಯ ಎಸಗಿದ್ದಾನೆಂದು 50- 60 ವರ್ಷಗಳ ಹಳೆಯ ಮನೆಯನ್ನು ಕೆಡವಲಾಗಿದೆ. ರಾಜಸ್ಥಾನದ ಉದಯಪುರದಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿದ್ದಾನೆ, ಆತ ವಾಸಿಸುತ್ತಿದ್ದ ಮನೆಯನ್ನು ನೆಲಸಮ ಮಾಡಲಾಗಿದೆ. ವಿದ್ಯಾರ್ಥಿ ದುಷ್ಕೃತ್ಯ ಎಸಗಿದ್ದಾನೆಂದು ಆತನ ತಂದೆ ವಾಸಿಸುವ ಮನೆಯನ್ನು ನೆಲಸಮ ಮಾಡಿದ್ದು ಸರಿಯಲ್ಲ ಎಂದು ವಾದಿಸಿದರು.
ಮಾರ್ಗದರ್ಶಿ ಸೂತ್ರ ಪ್ರಸ್ತಾವನೆ: ಈ ಹಂತದಲ್ಲಿ ಮಾತನಾಡಿದ ನ್ಯಾ| ಗವಾಯಿ, ಉತ್ತರ ಪ್ರದೇಶ ಸರಕಾರ ಅಫಿದಾವಿತ್ ಸಲ್ಲಿಸಿದ್ದು, ಕಾನೂನು ಪ್ರಕಾರವೇ ಸ್ಥಿರಾಸ್ತಿಗಳನ್ನು ನೆಲಸಮ ಮಾಡಲು ಸಾಧ್ಯ ಎಂದು ಹೇಳಿದೆ. ಕಟ್ಟಡಗಳನ್ನು ನೆಲಸಮಗೊಳಿಸುವ ಸಂಬಂಧ ದೇಶಾದ್ಯಂತ ಅನ್ವಯವಾಗುವ ಕೆಲವು ಮಾರ್ಗದರ್ಶಿ ರೂಪಿಸಬೇಕು ಎಂದು ಹೇಳಿದರು.
ಅನಧಿಕೃತ ಕಟ್ಟಡಗಳಿಗೆ ರಕ್ಷಣೆ ಇಲ್ಲ: ವಿಚಾರಣೆಯ ಒಂದು ಹಂತದಲ್ಲಿ, ಅನಧಿಕೃತ ಕಟ್ಟಡಗಳ ರಕ್ಷಣೆಗೆ ಕೋರ್ಟ್ ನಿಲ್ಲುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ದೇವಾಲಯಗಳ ಸಹಿತ ಸಾರ್ವಜನಿಕ ರಸ್ತೆಗೆ ಅಡ್ಡಿಯಾಗುವ ಯಾವುದೇ ಅನಧಿಕೃತ ಕಟ್ಟಡಗಳಿಗೆ ನಾವು ರಕ್ಷಣೆ ನೀಡವುದಿಲ್ಲ. ಆದರೆ ಕಟ್ಟಡಗಳನ್ನು ನೆಲಸಮ ಮಾಡಲು ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕು ಎಂದು ಹೇಳಿತು.
ಏನಿದು ಬುಲ್ಡೋಜರ್ ನ್ಯಾಯ?
-ಅಪರಾಧ ಎದುರಿಸುವವರ ಮನೆ, ಆಸ್ತಿಗಳನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವುದು “ಬುಲ್ಡೋಜರ್ ನ್ಯಾಯ’
-2017ರಿಂದಲೇ ಉತ್ತರ ಪ್ರದೇಶದಲ್ಲಿ ಯೋಗಿ ಸರಕಾರದಿಂದ ಇದರ ಜಾರಿ
-ಮ.ಪ್ರದೇಶ, ರಾಜಸ್ಥಾನ, ತೆಲಂಗಾಣದಲ್ಲೂ ಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.