![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2024, 1:20 AM IST
ಹೊಸದಿಲ್ಲಿ: ಬಿಜೆಪಿ ಮತ್ತು ಆರ್ಎಸ್ಎಸ್ ಮಧ್ಯೆ ಎಲ್ಲವೂ ಚೆನ್ನಾಗಿಲ್ಲ ಎಂಬ ಸುದ್ದಿಗಳಿಗೆ ಆರ್ಎಸ್ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿಕೆ ಪುಷ್ಟಿ ನೀಡಿದೆ. “ಬಿಜೆಪಿ ಜತೆಗೆ ಕೆಲವೊಂದು ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯ ಇದೆ. ಆದರೆ ಇದು “ಕುಟುಂಬದ ವಿಚಾರ. ಅದನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳುತ್ತೇವೆ’ ಎಂದೂ ಹೇಳಿದ್ದಾರೆ.
ಕೇರಳ ಪಾಲಕ್ಕಾಡ್ನಲ್ಲಿ ಆಯೋಜಿಸಲಾಗಿದ್ದ ಅಖಿಲ ಭಾರತೀಯ ಸಮನ್ವಯ ಬೈಠಕ್ನ ಕೊನೇ ದಿನ ಸೋಮ ವಾರ ಅಂಬೇಕರ್ ಈ ಕುರಿತು ಮಾತನಾಡಿದ್ದಾರೆ. ಜತೆಗೆ ಬಿಜೆಪಿಗೆ ಆರ್ಎಸ್ಎಸ್ ನೆರವು ಅಗತ್ಯವಿಲ್ಲವೆಂದು ಪಕ್ಷದ ಅಧ್ಯಕ್ಷ ನಡ್ಡಾ ಹೇಳಿದ್ದ ಬಗ್ಗೆ ಸಮಾವೇಶ ದಲ್ಲಿ ಚರ್ಚಿಸಲಾಗಿತ್ತು ಎಂದಿದ್ದಾರೆ.
ಕ್ರಮ ಕೈಗೊಳ್ಳಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆ ಬಗ್ಗೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ಆ ದೇಶದ ಮಧ್ಯಾಂತರ ಸರಕಾರದ ಜತೆ ಮಾತುಕತೆ ನಡೆಸಬೇಕು. ಇದಲ್ಲದೆ ತಮಿಳುನಾಡಿನಲ್ಲಿ ಅವ್ಯಾಹತವಾಗಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳಿವೆ. ಇದು ಕಳವಳಕಾರಿ ಎಂದು ಅಂಬೇಕರ್ ಹೇಳಿದ್ದಾರೆ. ಕೋಲ್ಕತಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಘಟನೆಯನ್ನು ಆರ್ಎಸ್ಎಸ್ ಖಂಡಿಸಿದೆ ಎಂದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.