Atlee Kumar: ಒಂದೇ ಸಿನಿಮಾದಲ್ಲಿ ಸಲ್ಮಾನ್ ಖಾನ್, ಕಮಲ್ ಹಾಸನ್; ಅಟ್ಲಿ ಆ್ಯಕ್ಷನ್ ಕಟ್
Team Udayavani, Sep 3, 2024, 2:56 PM IST
ಮುಂಬಯಿ: ಕಿಂಗ್ ಖಾನ್ ಶಾರುಖ್ (ShahRukh Khan) ಅವರೊಂದಿಗೆ ‘ಜವಾನ್ʼ ಸಿನಿಮಾ ಮಾಡಿ ಬಾಲಿವುಡ್ನಲ್ಲೂ ಮಿಂಚಿದ್ದ ಸೌತ್ ಸೂಪರ್ ಹಿಟ್ ನಿರ್ದೇಶಕ ಅಟ್ಲಿ ಕುಮಾರ್(Atlee Kumar) ಮತ್ತೊಬ್ಬ ಬಾಲಿವುಡ್ ಸೂಪರ್ ಸ್ಟಾರ್ ನಟನೊಂದಿಗೆ ಸಿನಿಮಾವನ್ನು ಮಾಡಲಿದ್ದಾರೆ.
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್ ಇದುವರೆಗೆ ಸೋಲು ಕಂಡಿರದ ನಿರ್ದೇಶಕರಲ್ಲಿ ಒಬ್ಬರು. ಪ್ಯಾನ್ ಇಂಡಿಯಾ ಭಾಷೆಯಲ್ಲಿ ಬಂದಿದ್ದ ʼಜವಾನ್ʼ ಕೂಡ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಕಂಡಿತ್ತು.
ʼಜವಾನ್ʼ ಸಕ್ಸಸ್ ಬಳಿಕ ಅವರು ಮತ್ತೆ ಶಾರುಖ್ ಖಾನ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದರು. ಇದಲ್ಲದೆ ಸಲ್ಮಾನ್ , ಆಮೀರ್ ಅವರೊಂದಿಗೆ ತನಗೆ ಕೆಲಸ ಮಾಡುವ ಇರಾದೆ ಇದೆಯೆಂದು ವೇದಿಕೆಯೊಂದರಲ್ಲಿ ಅಟ್ಲಿ ಹೇಳಿದ್ದರು.
ಅದರಂತೆ ಅವರು ಸಲ್ಮಾನ್ ಖಾನ್(Salman Khan) ಅವರೊಂದಿಗೆ ಸಿನಿಮಾ ಮಾಡುವ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಸಿನಿಮಾದ ವಿಶೇಷವೆಂದರೆ ಕಾಲಿವುಡ್ ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Hasan) ಕೂಡ ಸಿನಿಮಾದ ಭಾಗವಾಗಲಿದ್ದು, ಒಂದೇ ಸ್ಕ್ರೀನ್ನಲ್ಲಿ ಮೊದಲ ಬಾರಿಗೆ ಇಬ್ಬರು ಸ್ಟಾರ್ಗಳು ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಟೈಟಲ್ ಅಂತಿಮವಾಗದ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸ ಇದೇ ಅಕ್ಟೋಬರ್ನಲ್ಲಿ ಆರಂಭಗೊಳ್ಳಲಿದ್ದು, ಈ ತಿಂಗಳ ಕೊನೆಯಲ್ಲಿ ಸಲ್ಮಾನ್ ಮತ್ತು ಕಮಲ್ ಸಿನಿಮಾದ ಸಂಪೂರ್ಣ ಸ್ಕ್ರಿಪ್ಟ್ ಆಲಿಸಿದ ಬಳಿಕ ಮುಂದಿನ ಅಟ್ಲಿ ಮುಂದಿನ ಹೆಜ್ಜೆಯನ್ನಿಡಲಿದ್ದಾರೆ ಎಂದು ವರದಿಯಾಗಿದೆ.
ಸಿನಿಮಾದಲ್ಲಿ ಭರಪೂರ ಆ್ಯಕ್ಷನ್ ಸೀನ್ಸ್ ಗಳಿರಲಿದ್ದು, ದೊಡ್ಡ ಪಾತ್ರವರ್ಗಗಳು ಇರಲಿವೆ ಎನ್ನಲಾಗಿದೆ. 2025ರ ಆರಂಭದಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎನ್ನಲಾಗಿದೆ.
ಸದ್ಯ ಸಲ್ಮಾನ್ ಖಾನ್ ಎಆರ್ ಮುರುಗದಾಸ್ ಅವರ ʼಸಿಕಂದರ್ʼ ಸಿನಿಮಾದಲ್ಲಿ ನಿರತರಾಗಿದ್ದು, ಇತ್ತ ಕಮಲ್ ಹಾಸನ್ ʼಇಂಡಿಯನ್ -2ʼ ಸೋಲಿನ ಬಳಿಕ ʼಥಗ್ ಲೈಫ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.