Udupi: ತೋಟಗಾರಿಕೆ ಬೆಳೆಗಳಿಗೆ ಸಂಕಷ್ಟ ತಂದ ಹವಾಮಾನ ವೈಪರೀತ್ಯ

ರೋಗ ಬಾಧೆಯಿಂದ ಬೆಳೆ ನಷ್ಟ; ಇಳುವರಿ ಕುಂಠಿತ!

Team Udayavani, Sep 3, 2024, 3:53 PM IST

Udupi: ತೋಟಗಾರಿಕೆ ಬೆಳೆಗಳಿಗೆ ಸಂಕಷ್ಟ ತಂದ ಹವಾಮಾನ ವೈಪರೀತ್ಯ

ಉಡುಪಿ: ಹವಾಮಾನ ವೈಪರೀತ್ಯದಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು ಸಂಕಷ್ಟದ ಪರಿಸ್ಥಿತಿಯಲ್ಲಿದೆ ಎಂಬುದು ಬಹುತೇಕ ಬೆಳೆಗಾರರು ಅಳಲು.

ಅಡಿಕೆ, ತೆಂಗು, ಕಾಳುಮೆಣಸು ಬೆಳೆಗಳಿಗೆ ನಾನಾ ರೀತಿಯ ಸಮಸ್ಯೆಗಳು ಕಾಡತೊಡಗಿದೆ. ಇದೇ ರೀತಿ ಬಾಳೆ, ಮಾವು ಇಳುವರಿಯಲ್ಲಿಯೂ ಸಾಕಷ್ಟು ವ್ಯತ್ಯಾಸ ಸಂಭವಿಸಬಹುದು ಎಂದು ರೈತರು ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅತೀಯಾದ ಗಾಳಿಮಳೆ, ಬಿರು ಬಿಸಿಲು ವಾತಾವರಣದಂತಹ ಪರಿಸ್ಥಿತಿಯಲ್ಲಿ ತೋಟಗಾರಿಕೆ ಬೆಳೆ ಏರಿಳಿತವಾಗುತ್ತಿದೆ. ಕಾರ್ಕಳ, ಕುಂದಾಪುರ ಭಾಗದಲ್ಲಿ ಹೆಚ್ಚಿರುವ ತೆಂಗು, ಅಡಿಕೆ, ಕಾಳು ಮೆಣಸು ಬೆಳೆಗಳಿಗೆ ವಿವಿಧ ಬಾಧೆಗಳು ಕಾಣಿಸಿಕೊಳ್ಳುತ್ತಿವೆ.

4 ವರ್ಷಗಳ ಅನಂತರ ಅಡಿಕೆಗೆ ಹೆಚ್ಚಿನ ಪ್ರಮಾಣದಲ್ಲಿ ಕೊಳೆ ರೋಗ ಕಾಣಿಸಿಕೊಳ್ಳುವ ಭೀತಿ ಎದುರಾಗಿದೆ. ಈಗಾಗಲೇ ಅಡಿಕೆ ಶೇ.25 ಬೆಳೆ ನಷ್ಟ ಸಂಭವಿಸಿದೆ. ಕಾಳು ಮೆಣಸಿಗೆ ಸೊರಗು ರೋಗ ಕಾಣಿಸಿಕೊಂಡಿದ್ದು, ಬಳ್ಳಿಗಳು ಬಳಲಿ ಇಳುವರಿ ಕುಂಠಿತವಾಗಲಿದೆ. ತೆಂಗಿನ ಮರದಿಂದ ಕಾಯಿ ಬಲಿತಗೊಳ್ಳುವ ಮೊದಲೇ ನೆಲಕ್ಕೆ ಉದುರುತ್ತಿವೆ. ಬಾಳೆ ಬೆಳೆಗೂ ಹವಾಮಾನ ವೈಪರೀತ್ಯ ಹೊಡೆತ ನೀಡಿದೆ. ಇದು ಹೀಗೆ ಮುಂದುವರಿದಲ್ಲಿ ತೋಟಗಾರಿಕೆ ಬೆಳೆ ಹೆಚ್ಚು ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಭಾರತೀಯ ಕಿಸಾನ್‌ ಸಂಘದ ಪ್ರ. ಕಾರ್ಯದರ್ಶಿ ಸತ್ಯನಾರಾಯಣ ಉಡುಪ.
ಕೃಷಿ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಿ ಈ ಬಗ್ಗೆ ಸರಕಾರಕ್ಕೆ ಸಮಗ್ರ ವರದಿ ನೀಡಿ ಬೆಳೆಗಾರರಿಗೆ ವಿಪತ್ತು ಪರಿಹಾರ ವಿಶೇಷ ಪ್ಯಾಕೇಜ್‌ ಘೋಷಿಸಲು ಜಿಲ್ಲೆಯ ಬೆಳೆಗಾರರು ಸರಕಾರಕ್ಕೆ ಆಗ್ರಹಿಸಿದ್ದಾರೆ.

ಗಾಳಿ ಹೊಡೆತಕ್ಕೆ ತೋಟ ನಾಶ
ಈ ಬಾರಿ ಮಳೆಯ ಜತೆಗೆ ಅತ್ಯಂತ ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಹಲವು ತೋಟಗಾರಿಕೆ ಬೆಳೆಗಳಿಗೆ ಹಾನಿ ಸಂಭವಿಸಿದೆ. ಕುಂದಾಪುರ, ಕಾರ್ಕಳ, ಹೆಬ್ರಿ, ಬ್ರಹ್ಮಾವರ ಭಾಗದಲ್ಲಿ ಗಾಳಿಯಿಂದ ಬಹುತೇಕ ಅಡಿಕೆ ಮರಗಳು ನೆಲಕ್ಕುರುಳಿವೆ. ಸಾಕಷ್ಟು ವರ್ಷ ಸಸಿ ನೆಟ್ಟು, ಬೆಳೆಸಿ, ಪೋಷಿಸಿದ ಮರಗಳು ನೆಲಕ್ಕೆ ಉರುಳುತ್ತಿರುವುದನ್ನು ಕಂಡು ಬೆಳೆಗಾರರು ಮರುಗುತ್ತಿದ್ದಾರೆ. ಮರದಿಂದ ಮರಕ್ಕೆ ಬಾಳೆ ಗಿಡದ ಮಾದರಿಯಲ್ಲಿ ಹಗ್ಗವನ್ನು ಕಟ್ಟಿ ಗಿಡಗಳನ್ನು ಉಳಿಸಲು ಮುಂದಾಗಿದ್ದಾರೆ.

ಕ್ಷೇತ್ರ ತಪಾಸಣೆ
ಜಿಲ್ಲೆಯಲ್ಲಿ ಗಾಳಿ, ಬಿರುಸಿನ ಮಳೆ, ಬಿಸಿಲು ಹವಾಮಾನ ವೈಪರೀತ್ಯ ಪರಿಣಾಮ ತೋಟಗಾರಿಕೆ ಬೆಳೆಗಳ ಮೇಲೆ ಆಗುತ್ತಿರುವ ಪ್ರತಿಕೂಲ ಪರಿಣಾಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿ, ತಜ್ಞರು ಕ್ಷೇತ್ರ ತಪಾಸಣೆ ಕೈಗೊಂಡಿದ್ದಾರೆ. ಈ ಬಗ್ಗೆ ಜಂಟಿ ತಪಾಸಣೆ ನಡೆಸಿ ಸೂಕ್ತ ವರದಿ ನೀಡುವಂತೆ ವಲಯ ಕೃಷಿ ಮತ್ತು ಸಂಶೋಧನ ಕೇಂದ್ರಕ್ಕೂ ಪತ್ರ ಬರೆಯಲಾಗಿದೆ.
– ಭುವನೇಶ್ವರಿ, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ. ಉಡುಪಿ ಜಿಲ್ಲೆ

ಬೆಳೆ ವಿಮೆ ಮಾಡಿಸಿದರೆ ಸಕಾಲದಲ್ಲಿ ಪರಿಹಾರ
ಎಪ್ರಿಲ್‌ ಮೇ ಬೇಸಗೆ ಬಿಸಿಲಿನಲ್ಲಿ ಅಡಿಕೆ ಕೃಷಿಗೆ ಕೀಟದ ಹಾವಳಿ ಹೆಚ್ಚಿತ್ತು. ಮತ್ತು ಅಡಿಕೆ ಗಿಡಗಳಿಗೆ ಔಷಧ ಹೊಡೆಯದಿದ್ದ ಕೆಲವರು ರೈತರು ಇದೀಗ ಕೊಳೆ ರೋಗ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೆ ಮಳೆ ಹೆಚ್ಚಾಗಿ ಕಡಿಮೆಯಾಗಿ ಬಿಸಿಲು ಹೆಚ್ಚಿರುವುದರಿಂದ ಎಲೆಚುಕ್ಕಿ ರೋಗದ ಬಾಧೆ ಹೆಚ್ಚಾಗುವ ಭೀತಿ ಇದೆ. ಬೆಳೆಯ ಉತ್ಪಾದನೆ ಗುಣಮಟ್ಟದಲ್ಲಿ ಇಳಿಕೆ ಕಂಡು ಬರುವ ಸಾಧ್ಯತೆ ಇದೆ. ಸದ್ಯಕ್ಕೆ ರೈತರು ಬೆಳೆ ವಿಮೆ ಯೋಜನೆ ಪರಿಹಾರವನ್ನು ಸಕಾಲದಲ್ಲಿ ಮಾಡಿಸಿಕೊಂಡಲ್ಲಿ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಲು ಅನುಕೂಲವಾಗಲಿದೆ ಎಂದು ಇಲಾಖೆ ಅಧಿಕಾರಿಗಳ ಅಭಿಪ್ರಾಯ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.